‘ಸಹಕಾರ ಮನೋಭಾವದಿಂದ ನೆಮ್ಮದಿ’
Team Udayavani, Nov 22, 2017, 11:02 AM IST
ಮಹಾನಗರ: ವಿದ್ಯಾರ್ಥಿಗಳು ತಮ್ಮ ಪದವಿಯೊಂದಿಗೆ ಮಾನವೀಯತೆ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಬೇಕು. ಸಮಾಜದಲ್ಲಿ ಎಲ್ಲರೊಂದಿಗೂ ಪರಸ್ಪರ ಬೆರೆಯುವ ಸಹಕಾರ ಮನೋಭಾವ ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆಯೇ ಹೊರತು ಪದವಿ ಮತ್ತು ಅಧಿಕಾರಗಳಲ್ಲ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ, ಜಿ. ಆರ್. ಎಜುಕೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ಹೇಳಿದರು.
ಕರಾವಳಿ ಫಾರ್ಮಸಿ ಕಾಲೇಜಿನಲ್ಲಿ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ ಅಂಗವಾಗಿ ಫಾದರ್ ಮುಲ್ಲರ್ ಆಸ್ಪತ್ರೆ ರಕ್ತನಿಧಿ ಇದರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನವು ದೇವರು ಮೆಚ್ಚುವ ಶ್ರೇಷ್ಠ ದಾನವಾಗಿದ್ದು, ದೇವರಿಗೆ ಪೂಜೆ ಮಾಡುವುದಕ್ಕೆ ಸಮಾನವಾಗಿದೆ. ವೈದ್ಯೋ ನಾರಾಯಣೋ ಹರಿ ಎಂಬಂತೆ ವೈದ್ಯಕೀಯ ವೃತ್ತಿಯು ಪುಣ್ಯದಾಯಕವಾಗಿದ್ದು, ವೈದ್ಯರು ಪ್ರಾಮಾಣಿಕತೆಯಿಂದ ಜನ ಸೇವೆಯ ಮನೋಭಾವದೊಂದಿಗೆ ತಮ್ಮ ಕರ್ತವ್ಯಗಳನ್ನು ನೆರವೇರಿಸಬೇಕು. ರಕ್ತಕ್ಕೆ ಯಾವುದೇ ಜಾತಿ ಮತ ಭೇದವಿಲ್ಲ. ರಕ್ತ ದಾನವು ದೇಶದ ಅಖಂಡತೆ, ಏಕತೆ ಹಾಗೂ ಸೌಹಾರ್ದವನ್ನು ಎತ್ತಿ ಹಿಡಿದಂತಾಗುತ್ತದೆ ಎಂದು ಅವರು ತಿಳಿಸಿದರು.
ರಕ್ತ ದಾನ ಪುಣ್ಯದ ಕೆಲಸ
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ವೈಸ್ ಡೀನ್ ಡಾ| ಪದ್ಮಜಾ ಉದಯಕುಮಾರ್ ಮಾತನಾಡಿ, ಹಿಂದೆ ಹಣ ಗಳಿಸುವ ಉದ್ದೇಶದೊಂದಿಗೆ ರಕ್ತದಾನವನ್ನು ಮಾಡಲಾಗುತ್ತಿತ್ತು. ಇಂದು ಸ್ವಯಂ ಪ್ರೇರಿತರಾಗಿ ಸೇವಾ ಮನೋಭಾವದೊಂದಿಗೆ ರಕ್ತದಾನ ಮಾಡಲಾಗುತ್ತದೆ. ಯಾವುದೇ ಪ್ರತಿಫಲ ಬಯಸದೆ ರಕ್ತದಾನ ಮಾಡುವುದು ನಿಜವಾಗಿಯೂ ಪುಣ್ಯದ ಕೆಲಸ ಎಂದರು.
ಫಾದರ್ ಮುಲ್ಲರ್ ಆಸ್ಪತ್ರೆಯ ರಕ್ತನಿಧಿ ಅಧಿಕಾರಿ ಡಾ| ಚಾರುಗೋಸ್ಲ ಹಾಗೂ ಕರಾವಳಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಸ್ವಾಮಿ ಉಪಸ್ಥಿತರಿದ್ದರು. ರಿಹಾಮ್ ಸ್ವಾಗತಿಸಿದರು. ಟ್ರೇಸಾ ಎಲಿಜಬೆತ್ ನಿರೂಪಿಸಿದರು. ಸಮೀನಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.