ತತ್‌ಕ್ಷಣ ಪಾಠ ತೆಗೆದು ಹಾಕಿ: ಶರಣ್‌ ಪಂಪ್‌ವೆಲ್‌


Team Udayavani, Jun 8, 2018, 10:47 AM IST

8-june-1.jpg

ಅಂಬೇಡ್ಕರ್‌ ವೃತ್ತ : ರಾಜ್ಯ ಸರಕಾರವು 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಮುಸ್ಲಿಂ, ಕ್ರೈಸ್ತ ಧರ್ಮಗಳ ಬಗ್ಗೆ ಪಾಠ ರಚಿಸಿ ಹಿಂದೂಗಳ ಮತಾಂತರಕ್ಕೆ ಪರೋಕ್ಷ ಹುನ್ನಾರ ನಡೆಸುತ್ತಿದೆ. ತತ್‌ಕ್ಷಣ ಈ ಪಾಠವನ್ನು ತೆಗೆದು ಹಾಕಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಸಂಚಾಲಕ ಶರಣ್‌ ಪಂಪ್‌ವೆಲ್‌ ಒತ್ತಾಯಿಸಿದ್ದಾರೆ.

9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಧರ್ಮಗಳ ವಿಚಾರಕ್ಕೆ ಸಂಬಂಧಿಸಿ ಪಠ್ಯ ಪ್ರಕಟಿಸಿದ ಶಿಕ್ಷಣ ಇಲಾಖೆಯ ಕ್ರಮವನ್ನು ವಿರೋಧಿಸಿ ನಗರದ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳದ ವತಿಯಿಂದ ಗುರುವಾರ ಜ್ಯೋತಿ ಸರ್ಕಲ್‌ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇಶದ ಇತಿಹಾಸ, ಸಾಧಕರು, ವೀರರ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಪ್ರಯತ್ನ ಶಾಲೆಗಳಲ್ಲಿ ನಡೆಯಬೇಕು. ವಿಶ್ವಕ್ಕೇ ಮಾರ್ಗದರ್ಶನ ನೀಡಿದ ಭಾರತದಲ್ಲಿ ಧರ್ಮಗಳ ವಿಚಾರಗಳನ್ನು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಒಳ್ಳೆಯದಲ್ಲ. ದೇಶದ ಬಗ್ಗೆ ತಿಳಿಸುವಂತಹ ಪಾಠಗಳನ್ನು ವಿದ್ಯಾರ್ಥಿಗಳು ಕಲಿಯುವಂತಾಗಬೇಕು ಎಂದವರು ಹೇಳಿದರು.

ಮಾತೃ ಮಂಡಳಿಯ ಅಧ್ಯಕ್ಷೆ ಆಶಾ ಜಗದೀಶ್‌ ಮಾತನಾಡಿ, ಚರ್ಚ್‌, ಮಸೀದಿಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು ಎಂದು ಪಠ್ಯದಲ್ಲಿ ಹೇಳಿರುವುದು ಪರೋಕ್ಷವಾಗಿ ಮತಾಂತರಕ್ಕೆ ಹುನ್ನಾರ ನಡೆಸಿದಂತೆ ಎಂದು ಆಪಾದಿಸಿದರು. ಪ್ರತಿಭಟನೆಯಲ್ಲಿ ವಿಹಿಂಪ ಕಾರ್ಯದರ್ಶಿ ಶಿವಾನಂದ ಮೆಂಡನ್‌, ಬಜರಂಗದಳ ಮಂಗಳೂರು ವಿಭಾಗ ಸಂಚಾಲಕ ಭುಜಂಗ ಕುಲಾಲ್‌, ಪ್ರಮುಖರಾದ ಪ್ರವೀಣ್‌ ಕುತ್ತಾರ್‌, ಪ್ರದೀಪ್‌ ಉಪಸ್ಥಿತರಿದ್ದರು.

ಬೃಹತ್‌ ಹೋರಾಟದ ಎಚ್ಚರಿಕೆ 
ಮಹಮ್ಮದ್‌ ಪೈಗಂಬರ್‌, ಜೀಸಸ್‌ ಬಗ್ಗೆ ಬೋಧನೆಗೆ ನಮ್ಮ ವಿರೋಧವಿಲ್ಲ. ಆದರೆ ವಿದ್ಯಾರ್ಥಿಗಳು ಚರ್ಚ್‌, ಮಸೀದಿಗಳಿಗೆ
ತೆರಳಿ ಪಠ್ಯಕ್ಕೆ ಸಂಬಂಧಿಸಿ ತಯಾರಿ ನಡೆಸಬೇಕೆನ್ನುವುದು ಒಪ್ಪುವಂತ ವಿಚಾರವಲ್ಲ. ತತ್‌ಕ್ಷಣ ಈ ಪಠ್ಯವನ್ನು ತೆಗೆದು ಹಾಕದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶರಣ್‌ ಪಂಪ್‌ವೆಲ್‌ ಅವರು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.