![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
Retirement ಬಳಿಕ ಎಸ್ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ
Team Udayavani, Jul 5, 2024, 12:37 AM IST
![Retirement ಬಳಿಕ ಎಸ್ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ](https://www.udayavani.com/wp-content/uploads/2024/07/wa-620x413.jpg)
ಮಂಗಳೂರು: ಪೊಲೀಸ್ ಉಪ ಅಧೀಕ್ಷಕರಾಗಿ, ಇಂಟಲಿಜೆನ್ಸ್ ವಿಭಾಗದ ಎಸ್ಪಿಯಾಗಿ ನಿವೃತ್ತರಾಗಿದ್ದ ವೈ. ಗಂಗೀರೆಡ್ಡಿ ಅವರಿಗೆ ಎಸ್ಪಿಯಾಗಿ ಪದೋನ್ನತಿ ನೀಡಿ ಪೂರ್ವಾನ್ವಯವಾಗುವಂತೆ ಆದೇಶವಾಗಿದೆ.
ಸರಕಾರದ ಒಳಾಡಳಿತ ಇಲಾಖೆಯ ಪೊಲೀಸ್ ಸೇವೆಗಳ ವಿಭಾಗದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಜು.3ರಂದು ರಾಜ್ಯಪಾಲರ ಆದೇಶ ಅನುಸಾರ ಆದೇಶ ಹೊರಡಿಸಿದ್ದಾರೆ.
ಡಿವೈಎಸ್ಪಿ ವೃಂದದ ಸೇವಾ ಜ್ಯೇಷ್ಠತೆಯಲ್ಲಿ ಗಂಗೀರೆಡ್ಡಿ ಅವರಿಗಿಂತ ಕಿರಿಯರಾದ ಮಲ್ಲಿಕ್ ಸಿ. ಅವರಿಗೆ ಎಸ್ಪಿ ಹುದ್ದೆಗೆ ಭಡ್ತಿ ನೀಡಿದ್ದರಿಂದ 2021ರ ಎ. 6ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರುವಂತೆ ರಾಜ್ಯ ಸಿವಿಲ್ ಸೇವಾ (ಮುಂಭಡ್ತಿ, ವೇತನ, ಪಿಂಚಣಿ) ನಿಯಮದಂತೆ ಎಸ್ಪಿ (ಸಿವಿಲ್, ನಾನ್ ಐಪಿಎಸ್) ಹುದ್ದೆಗೆ ಮುಂಭಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.
ಗಂಗೀರೆಡ್ಡಿ ಅವರು ಕರಾವಳಿ ಕಾವಲು ಪಡೆಯ (ಸಿ.ಎಸ್.ಪಿ.) ಇನ್ಸ್ಪೆಕ್ಟರ್ ಆಗಿ 11 ವರ್ಷಗಳ ಬಳಿಕ ಡಿವೈಎಸ್ಪಿ ಆಗಿ ಪದೋನ್ನತಿಯಾಗಿದ್ದರು.
2023ರಲ್ಲಿ ಎಸ್ಪಿ ಆಗಿದ್ದರು. ಅದಕ್ಕೂ ಮೊದಲು ಬೆಳ್ತಂಗಡಿಯಲ್ಲಿ ಅವರು ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ ಆದಾಯ ಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಮೇಲೆ 2009ರಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಳಿಗೆ ಒಳಗಾಗಿ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷೆಗೆ ಒಳಗಾಗಿದ್ದರು. ಆ ಪ್ರಕರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶ ಮಾಡಿತ್ತು.
ಟಾಪ್ ನ್ಯೂಸ್
![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-150x105.jpg)
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
![Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ](https://www.udayavani.com/wp-content/uploads/2024/07/ravikumar-150x86.jpg)
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
![ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು](https://www.udayavani.com/wp-content/uploads/2024/07/9-4-150x90.jpg)
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
![CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ](https://www.udayavani.com/wp-content/uploads/2024/07/courts-150x102.jpg)
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
![Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್](https://www.udayavani.com/wp-content/uploads/2024/07/kum-150x110.jpg)
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.