ಹತ್ತು ದಿನಗಳ ಒಳಗೆ ಕರಾವಳಿಗೂ ಅಕ್ಕಿ ಹಣ


Team Udayavani, Jul 11, 2023, 7:03 AM IST

ಹತ್ತು ದಿನಗಳ ಒಳಗೆ ಕರಾವಳಿಗೂ ಅಕ್ಕಿ ಹಣ

ಮಂಗಳೂರು: ಅನ್ನ ಭಾಗ್ಯ ಅಕ್ಕಿ ಹಣ ವರ್ಗಾವಣೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಇದು ಕೆಲವೇ ದಿನಗಳಲ್ಲಿ ಜಾರಿಯಾಗಲಿದೆ.

ಉಳಿದ ಜಿಲ್ಲೆಗಳ ಫ‌ಲಾನುಭವಿಗಳ ಖಾತೆಗಳಿಗೆ ಹಂತ ಹಂತವಾಗಿ ಮುಂದಿನ ಹತ್ತು ದಿನಗಳಲ್ಲಿ ಹಾಕಲಾಗುವುದು ಎಂದು ಸ್ವತಃ ಸಿಎಂ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪೂರಕ ವೆಂಬಂತೆ ದಕ್ಷಿಣ ಕನ್ನಡದ ಫ‌ಲಾನುಭವಿಗಳ ಪ್ಯಾಕೇಜ್‌ ಈಗಾಗಲೇ ಸಿದ್ಧಪಡಿಸಲಾಗಿದೆ, ಉಡುಪಿ ಜಿಲ್ಲೆಯ ಪ್ಯಾಕೇಜ್‌ ಸಿದ್ಧಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆಯ ವ್ಯವಸ್ಥೆ
ಆರಂಭದಲ್ಲಿ ಆಯಾ ಜಿಲ್ಲೆಯ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ ದಾರರ ಕುಟುಂಬದ ಯಜ ಮಾನರ ಪಟ್ಟಿಯನ್ನು ಎನ್‌ಐಸಿ (ರಾಷ್ಟ್ರೀಯ ಮಾಹಿತಿ ಕೇಂದ್ರ) ಬೆಂಗ ಳೂರಿನಲ್ಲಿ ಸಿದ್ಧಪಡಿಸುತ್ತದೆ. ಹೀಗೆ ಸಿದ್ಧ ಪಡಿಸಿದ ಒಂದೊಂದು ಪ್ಯಾಕೇಜ್‌ನಲ್ಲಿ 20 ಸಾವಿರ ಮಂದಿಯ ಹೆಸರು ಇರುತ್ತದೆ. ಈ ಪಟ್ಟಿಯನ್ನು ಲಾಗಿನ್‌ ಮೂಲಕ ಜಿಲ್ಲಾ ಮಟ್ಟದ ಆಹಾರ ಇಲಾಖೆಗೆ ಕಳುಹಿಸಲಾಗುತ್ತದೆ. ಅಲ್ಲಿಯ ಅಧಿಕಾರಿ ಅದನ್ನು ಖಜಾನೆಯ ಕೆ2 ವಿಭಾಗಕ್ಕೆ ಕಳುಹಿಸಿದ ಬಳಿಕ ಅಲ್ಲಿಂದ ನೇರವಾಗಿ ಮೊತ್ತ ಫಲಾನುಭವಿಯ ಖಾತೆಗೆ ಹೋಗುತ್ತದೆ. ಇದು ಈ ಯೋಜನೆಯ ವ್ಯವಸ್ಥೆ.

ಮೈಸೂರು ಜಿಲ್ಲೆಯ ಫಲಾನುಭವಿಗಳ ಪ್ಯಾಕೇಜ್‌ ಕಳೆದ ವಾರವೇ ಸಿದ್ಧಗೊಂಡಿದೆ, ಹಾಗಾಗಿ ಅದಕ್ಕೆ ಸೋಮ ವಾರ ಸಿಎಂ ಚಾಲನೆ ನೀಡಿದ್ದಾರೆ.

ಎಷ್ಟು ಫಲಾನುಭವಿಗಳು?
ದ.ಕ. ಜಿಲ್ಲೆಯಲ್ಲಿ ಬಿಪಿಎಲ್‌ನ 10,25,796 ಕಾರ್ಡ್‌ದಾರ ರಿದ್ದಾರೆ, ಅದೇ ರೀತಿ ಅಂತ್ಯೋದಯ ಯೋಜನೆ ಯಲ್ಲಿ 1,15,858 ಕಾರ್ಡ್‌ ದಾರರಿದ್ದಾರೆ. ಇವರ ಖಾತೆ ಗಳಿಗೆ ಹಣ ಬರಲಿದೆ. ಉಡುಪಿ ಜಿಲ್ಲೆಯಲ್ಲಿ 6,83,026 ಬಿಪಿಎಲ್‌ ಹಾಗೂ 1,51,132 ಅಂತ್ಯೋದಯ ಕಾರ್ಡ್‌ ದಾರರಿದ್ದಾರೆ.

ಉಭಯ ಜಿಲ್ಲೆಗಳಲ್ಲಿ 57,403 ತಿರಸ್ಕೃತ
ದ.ಕ.ದ ಪ್ಯಾಕೇಜ್‌ ಸಿದ್ಧಗೊಳಿಸಲಾಗಿದ್ದು, ನೇರಪಾವತಿಗೆ ಜಿಲ್ಲೆಯಲ್ಲಿ 37,801 ಗ್ರಾಹಕರ ಹೆಸರು ತಿರಸ್ಕೃತವಾಗಿದೆ. ಉಡುಪಿ ಜಿಲ್ಲೆಯದು ಸಿದ್ಧವಾಗುತ್ತಿದ್ದು, 19,602 ಹೆಸರು ತಿರಸ್ಕೃತಗೊಂಡಿದೆ.

ಇದಕ್ಕೆ ಮೂರು ಕಾರಣ ತಿಳಿಸಲಾಗಿದೆ. ಗ್ರಾಹಕರಿಗೆ ಬ್ಯಾಂಕ್‌ ಖಾತೆ ಇಲ್ಲದಿರುವುದು ಅಥವಾ ಖಾತೆ ನಿಷ್ಕ್ರಿಯವಾಗಿರುವುದು, ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗದಿರುವುದು ಅಥವಾ ಆಧಾರ್‌ ನೆರವಿನ ಪಾವತಿ ವ್ಯವಸ್ಥೆ ಇಲ್ಲದಿರುವುದು, ಫಲಾನುಭವಿಗಳ ಆಧಾರ್‌ ತಪ್ಪಾಗಿ ನಮೂದಾಗಿರುವುದು.

ಸರಿಪಡಿಸಲು ಕ್ರಮ
ಅಧಿಕಾರಿಗಳು ಈ ತಿರಸ್ಕೃತರ ಪಟ್ಟಿಯನ್ನು ಆಯಾ ಪಡಿತರ ಅಂಗಡಿಗೆ ತಲಪಿಸಲಿದ್ದು, ಅಲ್ಲಿ ಅವರ ತಿರಸ್ಕೃತಗೊಂಡ ಕಾರಣ ತಿಳಿಸಿ ಸರಿಪಡಿಸಲು ಕ್ರಮ ಕೈಗೊಳ್ಳಲಿದ್ದಾರೆ. ಬ್ಯಾಂಕ್‌ಗೆ ಹೋಗಿ ಖಾತೆ ತೆರೆಯುವುದು, ನಿಷ್ಕ್ರಿಯಗೊಂಡ ಖಾತೆ ಚಾಲ್ತಿಗೊಳಿಸುವುದು, ಖಾತೆಗೆ ಆಧಾರ್‌ ಲಿಂಕ್‌ ಮಾಡಿಸುವುದು, ಸರಿಯಾದ ಆಧಾರ್‌ ಪಡೆದು ಸರಿಪಡಿಸುವ ಕೆಲಸ ನಡೆಯಲಿದೆ.

ಆರಂಭದಲ್ಲಿ ಮೈಸೂರಿನ ಫಲಾನುಭವಿಗಳಿಗೆ ಮೊತ್ತ ವರ್ಗಾಯಿಸಲಾಗಿದೆ. ದ.ಕ. ಜಿಲ್ಲೆಯ ಪಟ್ಟಿಗೂ ಅನುಮೋದನೆ ದೊರೆತಿದೆ, ಶೀಘ್ರವೇ ಹಣವನ್ನು ವರ್ಗಾಯಿಸುವ ಕೆಲಸಕ್ಕೆ ಚಾಲನೆ ದೊರೆಯಲಿದೆ.
– ಮಾಣಿಕ್ಯ, ಪ್ರಭಾರ ಉಪನಿರ್ದೇಶಕರು, ಆಹಾರ ಇಲಾಖೆ, ಮಂಗಳೂರು

-ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.