ಆರ್‌ಎಂಎಸ್‌ಎ ಶಿಕ್ಷಕರ ಮುಷ್ಕರ ತಾತ್ಕಾಲಿಕ ಸ್ಥಗಿತ


Team Udayavani, Sep 6, 2018, 11:32 AM IST

6-september-8.jpg

ಬೆಳ್ತಂಗಡಿ: ತಾ|ನಲ್ಲಿ ಆರ್‌ಎಂಎಸ್‌ಎನಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 23 ಮಂದಿ ಶಿಕ್ಷಕರು ವೇತನಕ್ಕೆ ಆಗ್ರಹಿಸಿ ಇಲ್ಲಿನ ಬಿಇಒ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಬುಧವಾರ ಶಾಸಕ ಹರೀಶ್‌ ಪೂಂಜ ಭೇಟಿ ನೀಡಿ, ಸೆ. 6ರ ಸಂಜೆಯೊಳಗೆ ವೇತನ ಲಭಿಸದೇ ಇದ್ದರೆ ತಾನು ಶಿಕ್ಷಕರ ಪ್ರತಿನಿಧಿಗಳ ಜತೆಗೆ ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಶಿಕ್ಷಕರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ಈ ಶಿಕ್ಷಕರಿಗೆ 7 ತಿಂಗಳಿನಿಂದ ವೇತನ ಸಿಗದೆ ಸಂಬಂಧಪಟ್ಟವರಿಗೆ ಮನವಿ ನೀಡಿದ ಬಳಿಕವೂ ಸಮಸ್ಯೆ ಬಗೆಹರಿಯದೇ ಇರುವ ಹಿನ್ನೆಲೆಯಲ್ಲಿ ಸೆ. 4 ರಂದು ಮುಷ್ಕರ ಆರಂಭಿಸಿದ್ದರು. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ, ತಾನು ಈಗಾಗಲೇ ಇಲಾಖೆಯ ಮುಖ್ಯ ಕಾರ್ಯದರ್ಶಿ ಜತೆ ಚರ್ಚೆ ನಡೆಸಿದ್ದೇನೆ. ಅವರು ಸಮಸ್ಯೆ ಬಗೆಹರಿಸುವ ಭರವಸೆಯನ್ನೂ ನೀಡಿದ್ದಾರೆ. ಸೆ. 6ರಂದು ಸಂಜೆಯೊಳಗೆ ವೇತನ ಆಗದೇ ಇದ್ದರೆ ಬೆಂಗಳೂರಿನಲ್ಲಿ ನಿಮ್ಮ ಸಂಘದ ಪ್ರಮುಖರನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ನಡೆಸುತ್ತೇನೆ. ಹೀಗಾಗಿ ನೀವು ಮುಷ್ಕರ ಕೈಬಿಟ್ಟು ತರಗತಿಗಳಿಗೆ ತೆರಳಿ ಪಾಠ ಮಾಡುವಂತೆ ತಿಳಿಸಿದರು.

ಆಗ ಕೆಲವರಿಂದ ವಿರೋಧಗಳು ಬಂದಾಗ ಹಾಗಾದರೆ ನೀವು ಮುಷ್ಕರ ಮುಂದುವರಿಸಿ ಎಂದು ಶಾಸಕರು ಗರಂ ಆಗಿ ಉತ್ತರಿಸಿದರು. ಬಳಿಕ ಶಾಸಕರ ಭರವಸೆಯ ಮಾತಿಗೆ ಮನ್ನಣೆ ನೀಡಿ, ಈಗ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಶನಿವಾರದೊಳಗೆ ವೇತನ ಸಿಗದೇ ಇದ್ದಲ್ಲಿ, ಶಿಕ್ಷಕರ ಸಂಘಗಳ ಸಹಕಾರದಿಂದ ದೊಡ್ಡ ಮಟ್ಟದ ಮುಷ್ಕರ ಆರಂಭಿಸುವುದಾಗಿ ತಿಳಿಸಿದರು. ನಿಮ್ಮ ವೇತನವನ್ನು ಹಿಡಿದುಕೊಂಡೇ ನಾನು ಬೆಂಗಳೂರಿನಿಂದ ಬರುವುದಾಗಿ ಶಾಸಕರು ಭರವಸೆ ನೀಡಿದರು.

ಬಳಿಕ ಇಲಾಖೆಯ ಸಿಬಂದಿ ಅಭಿಷೇಕ್‌ ಅವರನ್ನು ಕರೆದು ಶಿಕ್ಷಕರ ವೇತನ ಬಿಡುಗಡೆಯ ಕುರಿತು ಶಾಸಕರು ಮಾಹಿತಿ ಕೇಳಿದಾಗ ಸಿಬಂದಿ, ಸುಳ್ಳು ಉತ್ತರ ನೀಡಿ ಉಡಾಫೆಯಿಂದ ವರ್ತಿಸಿದರು. ಇದರಿಂದ ಅಸಮಾಧಾನಗೊಂಡ ಶಾಸಕರು ಸಿಬಂದಿ ಯನ್ನು ತತ್‌ಕ್ಷಣ ಅಮಾನತು ಮಾಡುವಂತೆ ತಿಳಿಸಿದರು. ಬಳಿಕ ಶಿಕ್ಷಕರು ಅವರು ಅನುಭವವಿಲ್ಲದೆ ಹಾಗೆ ಮಾತನಾಡಿದ್ದಾರೆ. ಹೀಗಾಗಿ ಈ ಬಾರಿ ಕ್ಷಮೆ ನೀಡಬೇಕು ಎಂದು ಮನವಿ ಮಾಡಿದರು. ಬಳಿಕ ಸಿಬಂದಿಗೆ ಮೆಮೋ ನೀಡಬೇಕು, ಜತೆಗೆ ಅವರನ್ನೇ ನೋಡಲ್‌ ಆಗಿ ನೇಮಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬಿಇಒ ಅವರನ್ನೂ ತರಾಟೆಗೆ ತೆಗೆದುಕೊಂಡರು.

ಸರಕಾರಿ ನೌಕರರ ಸಂಘದ ತಾ| ಅಧ್ಯಕ್ಷ ಜಯಕೀರ್ತಿ ಜೈನ್‌ ಅವರು, ಬಿಇಒ ಅವರ ವರ್ತನೆಯನ್ನು ತಿದ್ದಿಕೊಳ್ಳಬೇಕು. ಇಲ್ಲದೇ ಇದ್ದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಶಿರೂರು, ಸಂಘಟನೆಗಳ ಪ್ರಮುಖರಾದ ರಮೇಶ ಮಯ್ಯ, ಮಹಮ್ಮದ್‌ ರಿಯಾಜ್‌, ನಾಗರಾಜ್‌, ಪ್ರಭಾಕರ ನಾರಾವಿ, ಚಂದ್ರಶೇಖರ ಶೆಟ್ಟಿ, ರಾಮಕೃಷ್ಣ ಭಟ್‌, ರಾಮಕೃಷ್ಣ ಎಸ್‌. ಕೆ, ಧರಣೇಂದ್ರ ಕೆ., ಶೇಖರ ಶಂಕು ಮೊದಲಾದವರಿದ್ದರು.

ಮುಷ್ಕರದಲ್ಲೇ ಶಿಕ್ಷಕರ ದಿನ
ಮುಷ್ಕರ ನಿರತ 23 ಮಂದಿ ಶಿಕ್ಷಕರು ಮುಷ್ಕರ ನಿರತ ಸ್ಥಳದಲ್ಲೇ ಡಾ| ರಾಧಾಕೃಷ್ಣನ್‌ ಅವರ ಭಾವಚಿತ್ರವಿಟ್ಟು ಅಲ್ಲೇ ಶಿಕ್ಷಕರ ದಿನವನ್ನು ಆಚರಿಸಿದರು. ಶಿಕ್ಷಕರ ದಿನಾಚರಣೆಯನ್ನು ಮುಗಿಸಿ ಬಂದ ಇತರ ಶಿಕ್ಷಕರು ಕೂಡ ಪ್ರತಿಭಟನೆಗೆ ಬೆಂಬಲ ನೀಡಿದರು. 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.