ರಸ್ತೆ ನಾಮಕರಣ ವಿವಾದ: ಮೂಡದ ಒಮ್ಮತ; ಪರಿಶೀಲನ ಸಮಿತಿ ರಚನೆ


Team Udayavani, Aug 5, 2017, 11:30 AM IST

05-MLR-18.jpg

ಮಂಗಳೂರು: ನಗರದ ಕ್ಯಾಥೊಲಿಕ್‌ ಕ್ಲಬ್‌ನಿಂದ ಅಂಬೇಡ್ಕರ್‌ವೃತ್ತದವರೆಗಿನ ರಸ್ತೆಗೆ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂಬುದಾಗಿ ನಾಮಕರಣ ಮಾಡುವ ಕುರಿತು ಸರಕಾರ ಮಾಡಿರುವ ಆದೇಶಕ್ಕೆ ಸಂಬಂಧಪಟ್ಟಂತೆ ಉಂಟಾಗಿರುವ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆ ಒಮ್ಮತದ ತೀರ್ಮಾನ ಕಂಡುಕೊಳ್ಳಲು ವಿಫಲವಾಗಿದೆ. ವಾಸ್ತವಿಕ ಅಂಶಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರವನ್ನು  ಕೈಗೊಳ್ಳುವ ನಿಟ್ಟಿನಲ್ಲಿ ನಾಲ್ಕು ಮಂದಿ ಸದಸ್ಯರ ಪರಿಶೀಲನ ಸಮಿತಿಯನ್ನು ರಚಿಸುವುದಾಗಿ ಜಿಲ್ಲಾಡಳಿತ ಪ್ರಕಟಿಸಿದೆ.

ಈ ರಸ್ತೆಗೆ ಈಗಾಗಲೇ ಸಂತ ಅಲೋಶಿಯಸ್‌ ಕಾಲೇಜು ರಸ್ತೆ ಎಂಬುದಾಗಿ ಹೆಸರಿದ್ದು ಇದಕ್ಕೆ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂಬುದಾಗಿ ಮರು ನಾಮಕರಣ ಮಾಡಬಾರದು ಎಂದು ಸಂತ ಅಲೋಶಿಯಸ್‌ ಸಮೂಹ ಸಂಸ್ಥೆ ಆಕ್ಷೇಪ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ಆದೇಶಕ್ಕೆ ಸರಕಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು ವಿವಾದವನ್ನು ಸೌಹಾರ್ದ ಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರ ವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ರಸ್ತೆಗೆ ಈದ್ಗಾ ಮಸೀದಿ ರಸ್ತೆ ಎಂದು ನಾಮಕರಣ ಮಾಡಬೇಕು ಎಂದು ದ.ಕ. ಮುಸ್ಲಿಂ ಸಂಘಟನೆಗಳ ಒಕ್ಕೂಟ ಹಾಗೂ ಬಾವುಟಗುಡ್ಡೆ ರಸ್ತೆ ಎಂದು ನಾಮಕರಣ ಮಾಡಬೇಕು ಎಂಬುದಾಗಿ ಸುಳ್ಯದ ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ಆಚರಣಾ ಸಮಿತಿ ಕೂಡ ಆಗ್ರಹಿಸಿದೆ.

ಪರಿಶೀಲನ ಸಮಿತಿ ರಚನೆ
ವಿಜಯ ಬ್ಯಾಂಕ್‌ ವರ್ಕರ್ ಆರ್ಗನೈಜೇಶನ್‌, ಅಲೋಶಿಯಸ್‌ ಸಮೂಹ ಸಂಸ್ಥೆ , ದ.ಕ. ಮುಸ್ಲಿಂ ಸಂಘಟನೆಗಳ ಒಕ್ಕೂಟ, ಸುಳ್ಯದ ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ಆಚರಣಾ ಸಮಿತಿ ತಮ್ಮ ಬೇಡಿಕೆಗಳಿಗೆ ಪೂರಕವಾಗಿ ವಾದಗಳನ್ನು ಹಾಗೂ ದಾಖಲೆಗಳನ್ನು ಮಂಡಿಸಿ ತಮ್ಮ ಬೇಡಿಕೆಯನ್ನು ಪುರಸ್ಕರಿಸಬೇಕು ಎಂದು ಮನವಿ ಮಾಡಿತು. ಒಮ್ಮತದ ನಿರ್ಧಾರ ಮೂಡಿಬರದ ಹಿನ್ನೆಲೆಯಲ್ಲಿ ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲ ದಾಖಲೆಗಳನ್ನು ಹಾಗೂ ವಾಸ್ತವಿಕ ಅಂಶಗಳನ್ನು ಅಧ್ಯಯನ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಲು ಸಮಿತಿಯೊಂದನ್ನು ರಚಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ.ಜೆ. ಜಗದೀಶ್‌ ಅವರು ಪ್ರಕಟಿಸಿದರು. 

ಬೇಡಿಕೆಗಳ ಪರವಾಗಿ ಸಮರ್ಥನೆ
ಸಂತ ಅಲೋಶಿಯಸ್‌ ಸಮೂಹ ಸಂಸ್ಥೆಗಳ ಪರವಾಗಿ ಮಾತನಾಡಿದ ರೆಕ್ಟರ್‌ ಫಾ| ಡೈನೀಶಿಯಸ್‌ ವಾಝ್, ಕುಲಸಚಿವ ಪ್ರೊ | ನರಹರಿ, ಹಳೆ ವಿದ್ಯಾರ್ಥಿ ಸಂಘದ ಎನ್‌.ಜಿ. ಮೋಹನ್‌ ಅವರು, 1976ರಲ್ಲೇ ಈ ರಸ್ತೆಗೆ ಸಂತ ಅಲೋಶಿಯಸ್‌ ರಸ್ತೆ ಎಂದು ನಾಮಕರಣವಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ಪೂರಕ ದಾಖಲೆಗಳಿವೆ ಎಂದರು. 

ವಿಜಯ ಬ್ಯಾಂಕ್‌ ವರ್ಕರ್ ಆರ್ಗನೈಜೇಶನ್‌ ಪರವಾಗಿ ಮಾತನಾಡಿದ ಮೂಲ್ಕಿ ಕರುಣಾಕರ ಶೆಟ್ಟಿ, ಮೂಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿ ಬಳಗದ ಪರವಾಗಿ ರಾಜಗೋಪಾಲ ರೈ ಹಾಗೂ ಹನುಮಂತ ಕಾಮತ್‌ ಅವರು ಇದು ಎಲ್‌ಎಚ್‌ಎಚ್‌ ರಸ್ತೆ ಆಗಿದ್ದು ಅಲೋಶಿಯಸ್‌ ಕಾಲೇಜು ರಸ್ತೆ ಎಂದು ಹೆಸರಿರಲಿಲ್ಲ. ನಾಮಕರಣಕ್ಕೆ ಸಂಬಂಧ ಪಟ್ಟಂತೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂದು ನಾಮಕರಣ ಗೊಳಿಸಿ ಸರಕಾರ ಆದೇಶ ಹೊರಡಿಸಿದೆ ಎಂದರು. 

ದ.ಕ. ಮುಸ್ಲಿಂ ಸಂಘಟನೆಗಳ ಪರವಾಗಿ ಮಾತ ನಾಡಿದ ಮಾಜಿ ಮೇಯರ್‌ ಕೆ.ಅಶ್ರಫ್‌ ಅವರು, ಇಲ್ಲಿ ಬಹಳ ಹಿಂದಿನ ಕಾಲದಿಂದಲೂ ಈದ್ಗಾ ಮಸೀದಿ ಇದೆ. ಆದುದರಿಂದ ಇದಕ್ಕೆ ಈದ್ಗಾ ಮಸೀದಿ ರಸ್ತೆ ಎಂದು ನಾಮಕರಣ ಮಾಡಬೇಕು ಎಂಬುದಾಗಿ ನಾವು ಈಗಾಗಲೇ ಮನವಿ ನೀಡಿದ್ದೇವೆ ಎಂದರು. 

ಸುಳ್ಯದ ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ಆಚರಣಾ ಸಮಿತಿ ಪರವಾಗಿ ಮಾತನಾಡಿದ ಸಮಿತಿ ಅಧ್ಯಕ್ಷ ಎನ್‌.ಎಸ್‌. ದೇವಿಪ್ರಸಾದ್‌ ಸಂಪಾಜೆ ಹಾಗೂ ಗೋಪಾಲ ಪೇರಾಜೆ ಅವರು, ಬ್ರಿಟಿಷರ ವಿರುದ್ದ 1837ರಲ್ಲಿ ಬಂಡಾಯವೆದ್ದು ಸ್ವಾತಂತ್ರ್ಯ ಹೋರಾಟ ಕಿಚ್ಚು ಹಚ್ಚಿದ, ಬ್ರಿಟಿಷರನ್ನು ಸೋಲಿಸಿದ ಸಂಕೇತವಾಗಿ ಹಾರಿಸಿದ ಬಾವುಟದ ನೆನಪಿಗಾಗಿ ಪ್ರಚಲಿತದಲ್ಲಿರುವ ಬಾವುಟಗುಡ್ಡೆ ಎಂಬ ಹೆಸರನ್ನು ಯಥಾವತ್ತಾಗಿ ಉಳಿಸಿ ಇದಕ್ಕೆ ಬಾವುಟಗುಡ್ಡೆ ರಸ್ತೆ ಎಂದು ನಾಮಕರಣ ಮಾಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಚಿವ ಬಿ. ರಮಾನಾಥ ರೈ ಅವರು ಈ ವಿವಾದಕ್ಕೆ ಸೌಹಾರ್ದ ಯತ ಪರಿಹಾರ ರೂಪಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಶಾಸಕ ಜೆ.ಆರ್‌. ಲೋಬೋ ಮಾತ ನಾಡಿ, ಸಂಘರ್ಷದ ವಾತಾವರಣ ನಿರ್ಮಾಣ ವಾಗದೆ ಸಮಸ್ಯೆ ಸೌಹಾರ್ದಯುತವಾಗಿ ಬಗೆ  ಹರಿಯ  ಬೇಕು ಎಂಬ ನಿಟ್ಟಿನಲ್ಲಿ ಇದಕ್ಕೆ ತಾತ್ಕಾಲಿಕ ತಡೆಯಾಜ್ಞೆ ತರಲಾಗಿದೆ. ಎಲ್ಲರೂ ಒಮ್ಮತದಿಂದ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಮೇಯರ್‌ ಕವಿತಾ ಸನಿಲ್‌, ಪಾಲಿಕೆ ಆಯುಕ್ತ ಮಹಮ್ಮದ್‌ ನಜೀರ್‌ ಉಪಸ್ಥಿತರಿದ್ದರು.

ಪಾಲಿಕೆ ಎಚ್ಚರ ವಹಿಸಬೇಕು
ಮುಂದಿನ ದಿನಗಳಲ್ಲಿ ಯಾವುದೇ ರಸ್ತೆಗೆ ನಾಮಕರಣಗಳ ವಿಚಾರ ಬಂದಾಗ ಮಹಾ ನಗರ ಪಾಲಿಕೆ ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವ ಹಿಸಬೇಕು. ಇಲ್ಲದಿದ್ದಲ್ಲಿ ಇದರಿಂದ ಬಹಳಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಇಂತಹ ಉದಾ ಹರಣೆಗಳು ಈಗಾಗಲೇ ಸಾಕಷ್ಟಿವೆ. ರಸ್ತೆಗೆ ನಾಮ ಕರಣವನ್ನು ಯಾರೂ ಕೂಡ ಒಂದು ಹಕ್ಕು ಎಂದು ಭಾವಿಸಬಾರದು. ಇದು ಸರಕಾರ ನೀಡುವ ಒಂದು ಅವಕಾಶ ಮಾತ್ರ ಎಂದು ಸಚಿವ ರಮಾನಾಥ ರೈ ಅವರು ಹೇಳಿದರು.

ಪರಿಶೀಲನ ಸಮಿತಿ
ಮಂಗಳೂರು ವಿಶ್ವವಿದ್ಯಾನಿಲಯದ ಕುಲ ಸಚಿವರು, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ದ.ಕ. ಅಪರ ಜಿಲ್ಲಾಧಿಕಾರಿಯವರು ಹಾಗೂ ಮಂಗಳೂರು ವಿವಿ ಇತಿಹಾಸ ವಿಭಾಗದ ಪ್ರೊಫೆಸರ್‌ ಅವರು ಈ ಸಮಿತಿಯಲ್ಲಿರುತ್ತಾರೆ. ಸಮಿತಿ ಎಲ್ಲ ಅಂಶಗಳನ್ನು ಅಧ್ಯಯನ ನಡೆಸಿ ಮುಂದಿನ ಸಭೆಗೆ ಮೊದಲು ವರದಿ ಮಂಡಿಸಲಿದೆ. ಇದರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ತನ್ನ ನಿರ್ಧಾರ ವನ್ನು ಪ್ರಕಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಕೆ.ಜೆ. ಜಗದೀಶ್‌ ಅವರು ತಿಳಿಸಿದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.