ಬೊಳಂತಿಮೊಗರು-ಮಾಡ್ತೇಲು- ಪಳೇರಿ-ಕಾಮಟ ರಸ್ತೆ ಈಗ ಕೆಸರುಗದ್ದೆ


Team Udayavani, Jul 10, 2018, 2:20 AM IST

paleri-road-9-7.jpg

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ವಿಟ್ಲ ಪ.ಪಂ. ವ್ಯಾಪ್ತಿಯ ಬೊಳಂತಿಮೊಗರು- ಮಾಡ್ತೇಲು – ಪಳೇರಿ- ಕಾಮಟ- ಬಸವಳಚ್ಚಿಲ್‌ ರಸ್ತೆ ಕೆಸರುಗದ್ದೆಯಾಗಿ ವಾಹನಗಳು ಹೂತು ಹೋಗಿ, ಸಂಚಾರ ಸ್ಥಗಿತಗೊಂಡಿದೆ. ಪರಿಣಾಮವಾಗಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ವಿಟ್ಲ ಸಮೀಪದ ಬೊಳಂತಿಮೊಗರುವಿನಿಂದ ಮಾಡ್ತೇಲು- ಪಳೇರಿ- ಕಾಮಟ – ಬಸವಳಚ್ಚಿಲ್‌ ಮೊದಲಾದ ಕಡೆಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೀರು ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಅದು ಇರುವ ರಸ್ತೆಯನ್ನು ಹಾಳುಗೆಡವಲು ಕಾರಣವಾಗಿದೆ.

40ಕ್ಕೂ ಅಧಿಕ ಕುಟುಂಬಗಳು ಈ ರಸ್ತೆಯನ್ನು ಅವಲಂಬಿಸಿವೆ. ಸುಮಾರು 40 ವರ್ಷಗಳ ಹಿಂದೆ ಈ ಮಣ್ಣಿನ ರಸ್ತೆ ನಿರ್ಮಾಣಗೊಂಡಿತ್ತು. ಇದುವರೆಗೂ ಡಾಮರು ಕಾಮಗಾರಿ ನಡೆದಿಲ್ಲ. ಜನರು ಈ ಮಣ್ಣಿನ ರಸ್ತೆಯನ್ನೇ 40 ವರ್ಷಗಳಿಂದ ಅವಲಂಬಿಸಿಕೊಂಡಿದ್ದಾರೆ. ಸ್ವಲ್ಪ ಕಾಂಕ್ರೀಟ್‌ ರಸ್ತೆಯಾಗಿದ್ದರೂ ಉಳಿದ ಭಾಗದಲ್ಲಿ ಪೂರ್ತಿಯಾಗದೇ ಇರುವುದರಿಂದ ಸರ್ವಋತು ರಸ್ತೆಯಾಗಿಲ್ಲ.

ರವಿವಾರ ಬೆಳಗ್ಗೆ ಮಾರುತಿ ಕಾರೊಂದು ರಸ್ತೆಯಲ್ಲಿ ಹೂತು ಹೋಗಿದೆ. ಮುಂದೆಯೂ ಹಿಂದೆಯೂ ಹೋಗಲಾಗದೇ ಇತರರಿಗೂ ಹೋಗಲಾಗದಂತೆ ತಡೆಯೊಡ್ಡಿತ್ತು. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ಇದೇ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಬೊಳಂತಿಮೊಗರು, ಮಂಗಳಪದವು, ಕಂಬಳಬೆಟ್ಟು ಕಡೆಗಳ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲೂ ಆಗುತ್ತಿಲ್ಲ. ಕಾಲು ಕೂಡ ಕೆಸರಿನಲ್ಲಿ ಹೂತು ಹೋಗಿ, ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯಿದ್ದೂ ಇಲ್ಲದಂತಾಗಿದೆ. ವಾಹನ ಸಂಚಾರವೂ ಇಲ್ಲದ, ನಡೆದಾಡಲೂ ಆಗದ ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಗ್ರಾಮಸ್ಥರು ಪ.ಪಂ.ಗೆ ಮನವಿ ಮಾಡಿದ್ದಾರೆ.


ಶೀಘ್ರ ರಸ್ತೆ ಅಭಿವೃದ್ಧಿ

ಗ್ರಾಮಸ್ಥರು ಮನವಿ ಮಾಡಿರುವ ಪ್ರಕಾರ ಪ.ಪಂ. 8 ಲಕ್ಷ ರೂ.ಅನುದಾನ ಮಂಜೂರು ಮಾಡಿದೆ. ಆದುದರಿಂದ ಶೀಘ್ರದಲ್ಲೇ ರಸ್ತೆ ಅಭಿವೃದ್ಧಿಯಾಗಲಿದೆ. ರವಿವಾರ ಕೆಲವು ಲೋಡು ಜಲ್ಲಿ ಹುಡಿ ಕಳುಹಿಸಿ, ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. 
– ಅರುಣ್‌ ಎಂ.ವಿಟ್ಲ, ಅಧ್ಯಕ್ಷರು, ವಿಟ್ಲ ಪ.ಪಂ.

— ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

kalla

Sullia: ಸಂಪಾಜೆಯಲ್ಲಿ ಎರಡು ಮನೆಗಳಲ್ಲಿ ಕಳವು ಪ್ರಕರಣ

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

14

Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.