![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 9, 2020, 1:45 PM IST
ವಿಟ್ಲ: ಇಲ್ಲಿನ ಮೇಗಿನಪೇಟೆಯಲ್ಲಿ ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ.
ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿದ ದುಷ್ಕರ್ಮಿಗಳು, ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿ, ಅವರ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.
ಶುಕ್ರವಾರ ಬೆಳಗ್ಗೆ ಜೋರಾಗಿ ಮಳೆ ಸುರಿಯುತ್ತಿರುವ ವೇಳೆ ಈ ಕೃತ್ಯ ಎಸಗಿದ್ದಾರೆ. ಮಹಿಳೆಯ ಮುಖಕ್ಕೆ ಮತ್ತು ಎದೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮಂಗಳೂರು: ಹೆಬ್ಬಾವು ಕಚ್ಚಿದರೂ ಅಳುಕದೆ ಅದರ ತಲೆಮೇಲೆ ಕಾಲಿಟ್ಟು ಸೆರೆಹಿಡಿದ 10ರ ಪೋರ !
ಘಟನಾ ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ವಿನೋದ್ ಕುಮಾರ್ ರೆಡ್ಡಿ ಮತ್ತು ಪೊಲೀಸರು ಭೇಟಿ ನೀಡಿ, ಪಕ್ಕದ ಸಿಸಿ ಕ್ಯಾಮರವನ್ನು ಪರಿಶೀಲಿಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.