ಶತ ಸಂಭ್ರಮ ಶಾಲಾ ಪ್ರಗತಿಗೆ ರೋಟರಿ ಸಾಥ್‌


Team Udayavani, Apr 7, 2018, 10:20 AM IST

7-April-3.jpg

ಸುಳ್ಯ : ನಗರದ ಜ್ಯೋತಿ ಸರ್ಕಲ್‌ ಬಳಿಯಲ್ಲಿನ ಸುಳ್ಯ ಸರಕಾರಿ ಹಿ.ಪ್ರಾ. ಶಾಲೆಗೆ ಈಗ 105ರ ಹರೆಯ. ಶತಮಾನದ ಹಿನ್ನೆಲೆಯಲ್ಲಿರುವ ಈ ಶಾಲೆಗೆ ಇನ್ನಷ್ಟು ನವೋತ್ಸವ ತುಂಬುವ ಪ್ರಯತ್ನದ ಭಾಗವಾಗಿ ರೋಟರಿ ಕ್ಲಬ್‌ ಸುಳ್ಯ ಸಿಟಿ ಮುಂದಿನ ಹತ್ತು ವರ್ಷ ದತ್ತು ತೆಗೆದುಕೊಂಡಿದೆ..!

ಪ್ರತಿ ವರ್ಷ ತನ್ನ ಸಮಾಜಸೇವಾ ಕಾರ್ಯದ ಪರಿಧಿಯೊಳಗೆ ಸರಕಾರಿ ಶಾಲೆಯ ಅಗತ್ಯತೆಗೆ ಸ್ಪಂದಿಸಲು ರೋಟರಿ ಕ್ಲಬ್‌ ಯೋಜನೆ ರೂಪಿಸಿದೆ. ರೋಟರಿ ಜಿಲ್ಲಾ ಗವರ್ನರ್‌ ಉಪಸ್ಥಿತಿಯಲ್ಲಿ ಮೊದಲ ಹಂತದ ಕೊಡುಗೆ ಲೋರ್ಕಾಪಣೆ ಆಗಿದೆ. ಇನ್ನುಳಿದ ಬೇಡಿಕೆಗೆ ಈಡೇರಿಕೆ ಹಂತ- ಹಂತವಾಗಿ ಆಗಲಿದೆ.

ನಗರದೊಳಗಿನ ಈ ಸರಕಾರಿ ಶಾಲೆಗೆ 105 ವರ್ಷ ತುಂಬಿದೆ. 1910 ಅಕ್ಟೋಬರ್‌ 16ರಂದು ಕಿರಿಯ ಪ್ರಾಥಮಿಕ ಶಾಲೆ ಆಗಿ ಸ್ಥಾಪನೆ ಗೊಂಡ ಈ ವಿದ್ಯಾಸಂಸ್ಥೆ ಕ್ರಮೇಣ ಹಿರಿಯ ಪ್ರಾಥಮಿಕ ಶಾಲೆ ಆಗಿ ಮೇಲ್ದರ್ಜೆಗೆ ಏರಿತ್ತು. ಸುಮಾರು 4 ಎಕರೆ ಸ್ಥಳ ಶಾಲೆಗಿದೆ. ಮೈದಾನ, ಕುಡಿಯುವ ನೀರಿನ ವ್ಯವಸ್ಥೆ ಇದೆ. ಶತಮಾನದ ಸಂದರ್ಭ ನೆನೆಪಿಸುವ ಅಂದಿನ ಐದು ಕೊಠಡಿಗಳಲ್ಲಿ ಈಗಲೂ ಪಾಠ ಪ್ರವಚನ ನಡೆಯುತ್ತಿದೆ. ಉಳಿದ ಐದು ಕೊಠಡಿಗಳು ಹೊಸದಾಗಿ ನಿರ್ಮಾಣಗೊಂಡಂತವು. ನವ ಸುಳ್ಯದ ನಿರ್ಮಾತೃ ಕುರುಂಜಿ ವೆಂಕಟರಮಣ ಗೌಡ ಅವರಂತಹ ಮೇರು ಸಾಧಕರು ಇದೇ ಸರಕಾರಿ ಶಾಲೆಯಲ್ಲಿ ಓದಿದವರು. 

ರೋಟರಿ ಸಾಥ್‌
ಶತಮಾನದ ಇತಿಹಾಸ ಹೊಂದಿರುವ ಸರಕಾರಿ ಶಾಲೆಯ ಮೂಲ ಸೌಕರ್ಯಗಳ ವೃದ್ಧಿಗೆ ಕೈ ಜೋಡಿಸಿ ಅದನ್ನು ಖಾಸಗಿ ಶಾಲೆಯ ಗುಣಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಸುಳ್ಯ ರೋಟರಿ ಸಿಟಿ ಕ್ಲಬ್‌ ಕೈ ಜೋಡಿಸಿದೆ. ಒಟ್ಟು ಹತ್ತು ವರ್ಷದ ತನಕ ಶಾಲೆಯನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದು, ಮೊದಲ ಐದು ವರ್ಷ, ಅನಂತರದ ಐದು ವರ್ಷ ಎಂಬಂತೆ ವಿಂಗಡಿಸಿ, ಮೂಲ ಸೌಕರ್ಯ ಒದಗಿಸಲು ತೀರ್ಮಾನಿಸಿದೆ.

ದಾಖಲಾತಿ ಇದೆ
ಈ ಹಿಂದಿನ ವರ್ಷಕ್ಕಿಂತ ಕಳೆದ ವರ್ಷ ದಾಖಲಾತಿ ಸಂಖ್ಯೆ ಹೆಚ್ಚಾಗಿತ್ತು. ಮೂಲಭೂತ ಸೌಕರ್ಯಗಳ ಜೋಡನೆಗೆ ರೋಟರಿ ಸಂಸ್ಥೆ ಸಹಕಾರ ನೀಡುವ ಬಗ್ಗೆ ಯೋಜನೆ ರೂಪಿಸಿದ್ದು, ಶಾಲೆಗೆ ಅಗತ್ಯವಿರುವ ವ್ಯವಸ್ಥೆಗಳ ಕುರಿತು
ಅವರ ಗಮನಕ್ಕೆ ತಂದಿದ್ದೇವೆ. ಉಯ್ನಾಲೆ, ಜಾರುಬಂಡಿ ಮೊದಲಾದ ಕೊಡುಗೆಳನ್ನು ರೋಟರಿ ಸಂಸ್ಥೆ ಈಗಾಗಲೇ ಒದಗಿಸಿದೆ.
– ಸಂಪಾ ಎಚ್‌., ಮುಖ್ಯಗುರು,
ಸ.ಹಿ.ಪ್ರಾ.ಶಾಲೆ, ಸುಳ್ಯ

ಮಾದರಿ ಶಾಲೆ
ರೋಟರಿ ಕ್ಲಬ್‌ ಸುಳ್ಯ ಸಿಟಿ ಇದರ ವತಿಯಿಂದ ಸುಳ್ಯ ಸರಕಾರಿ ಶಾಲೆಯ ಆವಶ್ಯಕತೆಗೆ ಸ್ಪಂದಿಸುವ ಚಿಂತನೆ ನಡೆಸಿದ್ದು, ಮುಂದಿನ ಹತ್ತು ವರ್ಷದಲ್ಲಿ ಮಾದರಿ ವಿದ್ಯಾಸಂಸ್ಥೆಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ರೋಟರಿ ಸಂಸ್ಥೆ ಹಂತ-ಹಂತವಾಗಿ ಸ್ಪಂದಿಸಲಿದೆ.
– ಶರೀಫ್‌ ಬಿ.ಎಸ್‌.
ಅಧ್ಯಕ್ಷರು, ರೋಟರಿ ಕ್ಲಬ್‌ ಸುಳ್ಯ ಸಿಟಿ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.