ರೌಡಿ ಲಿಸ್ಟ್ ಪರಿಷ್ಕರಣೆ: ಚುನಾವಣೆ ಬಳಿಕ ಪುನರಾರಂಭ 


Team Udayavani, Apr 30, 2018, 11:16 AM IST

30-April-5.jpg

ಮಹಾನಗರ: ರೌಡಿ ಲಿಸ್ಟ್‌ ಪರಿಷ್ಕರಣೆಗೆ ಸರಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಚುನಾವಣ ಪ್ರಕ್ರಿಯೆಯ ಕಾರಣ ಈಗ ಸ್ಥಗಿತಗೊಳಿಸಲಾಗಿದೆ. ಮೇ 15ರ ಬಳಿಕ ಈ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಪೊಲೀಸ್‌ ಆಯುಕ್ತ ವಿಪುಲ್‌ ಕುಮಾರ್‌ ಹೇಳಿದರು.

ರವಿವಾರ ತಮ್ಮ ಕಚೇರಿಯಲ್ಲಿ ನಡೆದ ದಲಿತರ ಮಾಸಿಕ ಕುಂದುಕೊರತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಹಿಂದಿನ ರೌಡಿ ಲಿಸ್ಟ್‌ನಲ್ಲಿ ಇವರಲ್ಲಿ ನಿಷ್ಕ್ರಿಯರಾದವರು, ವಯಸ್ಸಾದವರು ಇದ್ದರೆ ಅಂಥವರ ಹೆಸರನ್ನು ತೆಗೆದು ಹಾಕಿ ಪರಿಷ್ಕೃತ ಪಟ್ಟಿ ತಯಾರಿಸುವ ಬಗ್ಗೆ ಚುನಾವಣೆ ಘೋಷಣೆ ಆಗುವ ಮೊದಲೇ ಸರಕಾರ ಆದೇಶ ಹೊರಡಿಸಿತ್ತು. ಘೋಷಣೆಯಾದ ಬಳಿಕ ಈ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದರು.

ಆಕಾಶಭವನದ ಪರಪಾದೆಯಲ್ಲಿ ಮತದಾನದ ಸಂದರ್ಭ ಕೆಲವು ಮಂದಿ ರೌಡಿಗಳು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕುವಂತೆ ಬೆದರಿಕೆ ಹಾಕುವ ಸಾಧ್ಯತೆ ಇದೆ. ಈ ಹಿಂದಿನ ಚುನಾವಣೆಯ ಸಂದರ್ಭ ಇಂತಹ ಘಟನೆ ನಡೆದ ನಿದರ್ಶನಗಳಾಗಿವೆ ಎಂದು ದಲಿತ ಮುಖಂಡರೊಬ್ಬರು ಸಭೆಯಲ್ಲಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಮಿಷನರ್‌, ಪರಪಾದೆ ಪರಿಸರದಲ್ಲಿ ಪೊಲೀಸ್‌ ಪಥ ಸಂಚಲನ ನಡೆಸಲಾಗುವುದು ಎಂದರು.

ಕುಲಶೇಖರದಲ್ಲಿ ಪ್ರಾಕ್ಸಿ ಮತದಾನ ನಡೆಯುವ ಸಾಧ್ಯತೆ ಇದೆ ಎಂದು ಇನ್ನೋರ್ವ ದಲಿತ ಮುಖಂಡರು ಹೇಳಿದರು.  ನಂತೂರು ವೃತ್ತದ ಗಾತ್ರವನ್ನು ಕುಗ್ಗಿಸಿರುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾದರೂ ಅಲ್ಲಿ ಖಾಸಗಿ ಬಸ್‌ಗಳು ಬಹಳಷ್ಟು ಹೊತ್ತು ನಿಲ್ಲುವುದರಿಂದ ಸಂಚಾರಕ್ಕೆ ಆಗಿಂದಾಗ್ಗೆ ತಡೆ ಉಂಟಾಗುತ್ತದೆ. ಆದ್ದರಿಂದ ಇಲ್ಲಿನ ಟೈಮ್‌ ಕೀಪಿಂಗ್‌ ವ್ಯವಸ್ಥೆಯನ್ನು ಕದ್ರಿ ಮಲ್ಲಿಕಟ್ಟೆಗೆ ಸ್ಥಳಾಂತರಿಸಬೇಕು, ಸೈಂಟ್‌ ಆ್ಯಗ್ನೆಸ್‌ ಕಾಲೇಜು ಎದುರಿನ ವಾಸ್‌ ಬೇಕರಿ ಬಳಿ ರಸ್ತೆಯಲ್ಲಿಯೇ ವಾಹನ ನಿಲುಗಡೆ ಮಾಡಲಾಗುತ್ತಿದ್ದು, ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ದಲಿತ ನಾಯಕರೊಬ್ಬರು ಮನವಿ ಮಾಡಿದರು.

ಬೀಟ್‌ ಸದಸ್ಯರಾಗಲು ಬನ್ನಿ
ಹೊಸ ಪೊಲೀಸ್‌ ಬೀಟ್‌ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಬೀಟ್‌ ಸದಸ್ಯರಾಗಲು ಅವಕಾಶವಿದ್ದು, ದಲಿತ ಮುಖಂಡರು ತಮ್ಮ ಪೊಲೀಸ್‌ ಠಾಣೆ ವ್ಯಾಪ್ತಿಯ ಬೀಟ್‌ಗೆ ಸೇರಲು ಮುಂದೆ ಬರಬೇಕು ಎಂದು ಡಿಸಿಪಿ ಹನುಮಂತರಾಯ ಅವರು ತಿಳಿಸಿದರು.

ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮೂರು ದಲಿತ ದೌರ್ಜನ್ಯ ಪ್ರಕರಣಗಳು ಒಂದು ವರ್ಷದಿಂದ ಇತ್ಯರ್ಥವಾಗದೆ ಬಾಕಿ ಇವೆ ಎಂದು ದಲಿತ ಮುಖಂಡ ಆನಂದ ಎಸ್‌.ಪಿ. ಅವರು ಹೇಳಿದರು. ಉರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದ ಸೆಂಟ್ರಿಂಗ್‌ ಶೀಟ್‌ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಮಾಯಕ ಯುವಕನೊಬ್ಬನಿಗೆ ಪೊಲೀಸರು ವಿಚಾರಣೆ ನಡೆಸಿದ್ದರಿಂದ ಈ ಯುವಕ ಮನೆ ಬಿಟ್ಟು ಹೋದ ಬಗ್ಗೆ ಯುವಕನ ತಾಯಿ ಸಭೆಯಲ್ಲಿ ಪ್ರಸ್ತಾವಿಸಿದರು. ಡಿಸಿಪಿ ಹನುಮಂತರಾಯ ಪ್ರತಿಕ್ರಿಯಿಸಿ ಉರ್ವ ಠಾಣೆಯ ಅಧಿಕಾರಿಗಳಿಗೆ ಆಕೆಯ ಮನೆಗೆ ತೆರಳಿ ಸಮಜಾಯಿಷಿ ಹೇಳುವಂತೆ ಸೂಚಿಸಿದರು. ಡಿಸಿಪಿ ಉಮಾ ಪ್ರಶಾಂತ್‌ ಸಭೆಯಲ್ಲಿ ಉಪಸ್ಥಿತರಿದ್ದರು. 

ಎಚ್ಚರಿಕೆ ನೀಡಲಾಗಿದೆ
ರೌಡಿಸಂ ಬಗ್ಗೆ ಈಗಾಗಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ರೌಡಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವರಿಗೆ ಎಚ್ಚರಿಕೆ ನೀಡಿ ಬಾಂಡ್‌ ಬರೆಸಲಾಗಿದೆ. ಇನ್ನೂ ಹೊಸತಾಗಿ ಯಾರಾದರೂ ರೌಡಿಗಳ ಬಗ್ಗೆ ಮಾಹಿತಿ ಇದ್ದರೆ ಕೊಡಿ ಎಂದು ದಲಿತ ಮುಖಂಡರಿಗೆ ಸಲಹೆ ಮಾಡಿದರು. 

ಟಾಪ್ ನ್ಯೂಸ್

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.