ಆರೋಪಿ ರೌಡಿಶೀಟರ್‌ ಸಾದಿಕ್‌ ಬಂಧನ


Team Udayavani, Jun 29, 2017, 3:00 AM IST

Arrest-Symbolic-New-600.jpg

ಪುತ್ತೂರು: ಅಕ್ರಮ ಗಣಿಗಾರಿಕೆಯ ವಿಚಾರಕ್ಕೆ ಸಂಬಂಧಿಸಿ ಪುತ್ತೂರಿನ ಕಬಕದಲ್ಲಿ ನಾಲ್ಕು ಮಂದಿಯ ತಂಡವೊಂದು ಟಿಪ್ಪರ್‌ ಮಾಲಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬುಧವಾರ ಸಂಭವಿಸಿದೆ. ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ವಿಟ್ಲಮುಟ್ನೂರು ಗ್ರಾಮದ ಕೊಡಂಗೈ ನಿವಾಸಿ ಸಾದಿಕ್‌ ರೌಡಿಶೀಟರ್‌ ಸಾದಿಕ್‌ ಯಾನೆ ಬ್ಲೇಡ್‌ ಸಾದಿಕ್‌ನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡಿರುವ ಟಿಪ್ಪರ್‌ ಮಾಲಕ, ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿ ಅಬ್ದುಲ್‌ ಖಾದರ್‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಕ್ರಮ ಗಣಿಗಾರಿಕೆಯ ವಿರುದ್ಧ ದೂರು ನೀಡಿದ್ದಕ್ಕಾಗಿ, ಅಕ್ರಮ ಗಣಿಯ ಮಾಲಕರು ಸುಪಾರಿ ಕೊಟ್ಟು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಗಾಯಾಳು ಅಬ್ದುಲ್‌ ಖಾದರ್‌ ನಗರ ಪೊಲೀಸರು ಠಾಣೆ ಯಲ್ಲಿ ದೂರು ನೀಡಿದ್ದಾರೆ.

ಪ್ರಕರಣದ ವಿವರ
ಗಾಯಾಳು ಅಬ್ದುಲ್‌ ಖಾದರ್‌ ಅವರು ಬುಧವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಕಬಕದ ಮೊಬೈಲ್‌ ಅಂಗಡಿಯೊಂದರಲ್ಲಿ ಕುಳಿತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.. ಈ ಹಿಂದೆ ದೂರವಾಣಿ ಮೂಲಕ ಮಾಡಿ ಬೆದರಿಕೆ ಒಡ್ಡಿದ್ದ ವ್ಯಕ್ತಿ ಕರೆ ಮಾಡಿದ್ದ. ನಂಬರ್‌ ತಿಳಿದಿದ್ದ ಕಾರಣ ಫೋನ್‌ ರಿಸೀವ್‌ ಮಾಡಲಿಲ್ಲ. ಇನ್ನೇನು ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಲು ಯೋಚಿಸುತ್ತಿದ್ದಾಗ 4 ಮಂದಿಯ ತಂಡ ಕಾರಿನಲ್ಲಿ ಬಂದು ನನ್ನ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ. ನಾನು ಅಂಗಡಿಯೊಳಗೆ ಓಡಿ ಹೋಗಿ ಕುಸಿದು ಬಿದ್ದೆ. ಅಂಗಡಿಯಲ್ಲಿದ್ದ ಕೆಲವು ಪರಿಕರಗಳನ್ನು ಎತ್ತಿಕೊಂಡು ಅದರಿಂದಲೂ ಹೊಡೆದಿದ್ದಾರೆ. ಅಂಗಡಿಯನ್ನು ಧ್ವಂಸ ಮಾಡಿ ದ್ದಾರೆ ಎಂದು ಖಾದರ್‌ ದೂರಿದ್ದಾರೆ.

ಆರೋಪಿ ರೌಡಿ ಶೀಟರ್‌
ಕರ್ನಾಟಕ ಮತ್ತು ಕೇರಳ ಸೇರಿದಂತೆ ನಾನಾ ಪೊಲೀಸ್‌ ಠಾಣೆಗಳಲ್ಲಿ ಸಾದಿಕ್‌ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ತಿಳಿದು ಬಂದಿದೆ. ವಿಟ್ಲ ಠಾಣೆ ಪೊಲೀಸರು ಈತನನ್ನು ಬಂಧಿಸಿ ಗೂಂಡಾ ಕಾಯಿದೆ ದಾಖಲಿಸಿದ್ದರು. ಇತ್ತಿಚೇಗಷ್ಟೆ ಈತ ಹೈಕೋರ್ಟ್‌ನಿಂದ ಜಾಮೀನು ಪಡೆದುಕೊಂಡಿದ್ದ ಎನ್ನಲಾಗಿದೆ. ಉಮ್ಮರ್‌ ಮತ್ತು ಅಬ್ದುಲ್‌ ಖಾದರ್‌ ನಡುವೆ ಗಣಿಗಾರಿಕೆ ಸಂಬಂಧ ದ್ವೇಷವಿದ್ದು, ಇದೇ ಹಿನ್ನೆಲೆಯಿಂದ ಬ್ಲೇಡ್‌ ಸಾದಿಕ್‌ಗೆ ಸುಪಾರಿ ನೀಡಲಾಗಿದೆ ಎನ್ನಲಾಗಿದೆ. ಕಾಲಿಯಾ ರಫೀಕ್‌ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಾದಿಕ್‌ ಯಾನೆ ಬ್ಲೇಡ್‌ ಸಾದಿಕ್‌ ಬಳಿಕ ಜಾಮೀನು ಪಡೆದುಕೊಂಡಿದ್ದ.

ಬುಧವಾರ ದಾಳಿ ನಡೆಸಿದ ತಂಡದಲ್ಲಿ ಸಾದಿಕ್‌ ಯಾನ್‌ ಬ್ಲೇಡ್‌ ಸಾದಿಕ್‌, ಇನ್ನೊಬ್ಬ ಕುಖ್ಯಾತ ಆರೋಪಿ ಪದ್ಮನಾಭ ಆಲಿಯಾಸ್‌ ಪದ್ದ ಎಂದು ಗುರುತಿಸಲಾಗಿದೆ. ಇನ್ನಿಬ್ಬರನ್ನು ಪದ್ಮನಾಭ ಕರೆ ತಂದಿದ್ದ. ಅವರು ಯಾರು ಎನ್ನುವುದು ಗೊತ್ತಾಗಿಲ್ಲ. ಸಾದಿಕ್‌ನನ್ನು ಜನರೇ ಹಿಡಿದು ಕೊಟ್ಟಿದ್ದಾರೆ. ಉಳಿದ ಮೂವರು ಪರಾರಿಯಾಗಿದ್ದಾರೆ. ಸಾದಿಕ್‌ನನ್ನು ಬಂಧಿಸಿ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪುತ್ತೂರು ನಗರ ಇನ್ಸ್‌ಪೆಕ್ಟರ್‌ ಮಹೇಶ್‌ ಪ್ರಸಾದ್‌ ಅವರು ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ದ್ವೇಷ
ಕಲ್ಲಂದಡ್ಕದಲ್ಲಿ ಅಕ್ರಮ ಕಲ್ಲು ಗಣಿ ಗಾರಿಕೆ ನಡೆಯುತ್ತಿದ್ದು, ಅದರ ವಿರುದ್ಧ  2013ರಲ್ಲಿ ದೂರು ನೀಡಿದ್ದೇವು. ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಗಣಿ ಮಾಲಕ ಉಮ್ಮರ್‌ ವಿರುದ್ಧ  ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾಣೆರಯಲ್ಲಿದೆ. ಇದೇ ವಿಚಾರಕ್ಕೆ ದ್ವೇಷ ಇಟ್ಟುಕೊಂಡಿದ್ದ ಗಣಿ ಮಾಲಕರು ರೌಡಿ ಶೀಟರ್‌ಗಳಿಗೆ ಸುಪಾರಿ ನೀಡಿ ಕೊಲೆಗೆ ಯತ್ನಿಸಿದ್ದಾರೆ. ಒಂದು ತಿಂಗಳ ಹಿಂದೆ ಧಮ್ಕಿ ಹಾಕಿದ್ದರು. ಬ್ಲೇಡ್‌ ಸಾದಿಕ್‌ ನಿನ್ನನ್ನು ಹುಡುಕುತ್ತಿದ್ದಾನೆ ಎಂದು ಅದೇ ದಿನ ಕಬಕದಲ್ಲಿ ಗೆಳೆಯರು ನನಗೆ ತಿಳಿಸಿದ್ದರು ಎಂದು ಖಾದರ್‌ ಆಪಾದಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.