Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಮುಡಿಪುನಿಂದ ಚೆಂಬುಗುಡ್ಡೆಯ ಟ್ಯಾಂಕ್‌ಗೆ ಹರಿಯಲಿದೆ 6 ಎಂಎಲ್‌ ನೀರು

Team Udayavani, Sep 7, 2024, 7:45 AM IST

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಉಳ್ಳಾಲ: ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್‌ ಸಹಿತ ತಾಲೂಕು ವ್ಯಾಪ್ತಿಗೆ ಬರುವ 24 ಹಳ್ಳಿಗಳಿಗೆ ಕೈಗಾರಿಕೆ ವಲಯ ಶಿಕ್ಷಣ ಸಂಸ್ಥೆಗಳಿಗೆ 198 ಕೋ. ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಉಳ್ಳಾಲದ ಚೆಂಬುಗುಡ್ಡೆ ಬಳಿ ನಿರ್ಮಿಸಲಾಗಿರುವ ಮುಖ್ಯ ಟ್ಯಾಂಕ್‌ಗೆ ಪ್ರಾಯೋಗಿಕ ನೀರು ಹರಿಸುವ ಕಾರ್ಯಕ್ಕೆ ಶನಿವಾರ ಚಾಲನೆ ದೊರೆಯಲಿದೆ.

ಮಂಗಳೂರು ಕ್ಷೇತ್ರದ ಜನರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಭರವಸೆ ನೀಡಿದ್ದ ಯು.ಟಿ.ಖಾದರ್‌ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 198 ಕೋ. ರೂ. ಅನುದಾನದ ಈ ಯೋಜನೆಗೆ 2019ರಲ್ಲಿ ಚಾಲನೆ ನೀಡಲಾಗಿತ್ತು.

ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಅಲಾಡಿ ನೇತ್ರಾವತಿ ನದಿಗೆ ಜಾಕ್‌ವೆಲ್‌ ನಿರ್ಮಿಸಿ ಅಲ್ಲಿಂದ ನೀರನ್ನು 15.5 ಕಿ. ಮೀ. ದೂರದ ಮುಡಿಪುವಿನ ಟ್ರೀಟ್‌ಮೆಂಟ್‌ ಪ್ಲ್ರಾಂಟ್‌ಗೆ ಕೊಳವೆ ಮೂಲಕ ಹರಿಸಿ, ಟ್ರೀಟ್‌ಮೆಂಟ್‌ ಪ್ಲ್ಯಾಂಟ್‌ನಿಂದ 11.2 ಕಿ. ಮೀ. ದೂರದ ಉಳ್ಳಾಲ ನಗರಸಭೆಯ ಚೆಂಬುಗುಡ್ಡೆಯಲ್ಲಿರುವ ಮುಖ್ಯ ನೆಲಮಟ್ಟದ ಜಲಾಗಾರಕ್ಕೆ ಕೊಳವೆ ಮೂಲಕ ಹರಿಸಿ ಉಳ್ಳಾಲ ನಗರ ಪ್ರದೇಶಗಳಿಗೆ ನೀರು ಸರಬರಾಜು ಆಗಲಿದೆ. ಶನಿವಾರ ಮುಡಿಪುವಿನ ಟ್ರೀಟ್‌ಮೆಂಟ್‌ ಪ್ಲ್ಯಾಂಟ್‌ನಿಂದ ಚೆಂಬುಗುಡ್ಡೆ ಟ್ಯಾಂಕ್‌ಗೆ ಪ್ರಾಯೋಗಿಕವಾಗಿ ನೀರು ಹರಿಯಲಿದೆ.

ಅಮೃತ್‌ ಯೋಜನೆ 2ರಡಿ ಅನುದಾನ
ಉಳ್ಳಾಲ ನಗರಸಭೆಯ ಕಾಮಗಾರಿಯೊಂದಿಗೆ ಸೋಮೇಶ್ವರ ಮತ್ತು ಕೋಟೆಕಾರು ನಗರಾಡಳಿತ ಪ್ರದೇಶಗಳಿಗೆ ಈಗಾಗಲೇ ಅಮೃತ್‌ ಯೋಜನೆ 2ರಡಿ ಅನುದಾನ ಬಿಡುಗಡೆಯಾಗಿದ್ದು, ಎರಡನೇ ಹಂತದ ಕಾಮಗಾರಿ ಆರಂಭವಾಗಿದೆ. ಉಳ್ಳಾಲ ನಗರಸಭೆಗೆ 70 ಕೋ. ರೂ., ಸೋಮೇಶ್ವರ ಪುರಸಭೆಗೆ 55.6 ಕೋ.ರೂ., ಕೋಟೆಕಾರು ಪಟ್ಟಣ ಪಂಚಾಯತ್‌ಗೆ 37 ಕೋ. ರೂ.ಅನುದಾನ ಬಿಡುಗಡೆಯಾಗಿದ್ದು, ಮುಂದಿನ ಆರು ತಿಂಗಳ ಒಳಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳಲಿದೆ.

ಗ್ರಾಮೀಣ ಪ್ರದೇಶಗಳಿಗೂ ನೀರು
ಉಳ್ಳಾಲ ತಾಲೂಕು ಹಾಗೂ ಬಂಟ್ವಾಳ ತಾಲೂ ಕಿನ ಕೆಲವು ಗ್ರಾಮಗಳು ಈ ಯೋಜನೆಯ ಲಾಭ ಪಡೆಯಲಿದೆ. ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ನೀರು ಸರಬರಾಜಿಗೆ ಎರಡನೇ ಹಂತದ ಕಾಮಗಾರಿ ಆರಂಭಗೊಳ್ಳಲಿದೆ. ಯೋಜನೆ ಪೂರ್ತಿಯಾದರೆ ಜನರಿಗೆ ತುಂಬಾ ಅನುಕೂಲ ಆಗಲಿದೆ.

ಉಳ್ಳಾಲ ನಗರಸಭೆ ವ್ಯಾಪ್ತಿಯ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರಿನ ಸರಬರಾಜಿಗೆ ಮುಡಿಪುನಲ್ಲಿರುವ 6ಎಂಎಲ್‌ (60 ಲಕ್ಷ ಲೀಟರ್‌) ಟ್ರೀಟ್‌ಮೆಂಟ್‌ ಪ್ಲ್ರಾಂಟ್‌ನಿಂದ ಚೆಂಬುಗುಡ್ಡೆಯಲ್ಲಿರುವ 16 ಎಂಎಲ್‌ಡಿ ನೀರಿನ ಟ್ಯಾಂಕ್‌ಗೆ ಪ್ರಾಯೋಗಿಕ ಚಾಲನೆಯ ಬಳಿಕ ನೀರಿನ ಸ್ಯಾಂಪಲನ್ನು ಲ್ಯಾಬ್‌ನಲ್ಲಿ ಹಲವು ಬಾರಿ ಪರೀಕ್ಷೆ ನಡೆಸಿದ ಬಳಿಕ ಜನರಿಗೆ ಪೂರೈಕೆ ಮಾಡಲಾಗುತ್ತದೆ.
– ಶೋಭಾಲಕ್ಷ್ಮೀ, ಸಹಾಯಕ ಅಭಿಯಂತರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.