ಕೆಎಸ್ಸಾರ್ಟಿಸಿಗೆ 3.27 ಕೋಟಿ ರೂ.ಆದಾಯ


Team Udayavani, Oct 31, 2018, 9:45 AM IST

31-october-1.gif

ಮಹಾನಗರ: ಕರಾವಳಿ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಶಿರಾಡಿ, ಸಂಪಾಜೆ ಘಾಟಿ ಕುಸಿತದಿಂದ ಸಂಚಾರ ಸ್ಥಗಿತವಾಗಿ ನಷ್ಟ ಅನುಭವಿಸಿದ್ದ ಕೆಎಸ್ಸಾರ್ಟಿಸಿ ಇದೀಗ ನಿಧಾನವಾಗಿ ಚೇತರಿಕೆ ಕಾಣುತ್ತಿದೆ. ದಸರಾ ಹಬ್ಬದ ಅ. 21 ಮತ್ತು 22ರಂದು ಕೆಎಸ್ಸಾರ್ಟಿಸಿಯ ಮಂಗಳೂರು, ಪುತ್ತೂರು ವಿಭಾಗಗಳು ಸುಮಾರು 3.27 ಕೋಟಿ ರೂ. ಆದಾಯ ಗಳಿಸಿವೆ.

ಕರಾವಳಿಗರು ನವರಾತ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಪರ ಊರಿನಲ್ಲಿರುವ ಮಂದಿಗೆ ಹಬ್ಬವನ್ನು ಮನೆ ಮಂದಿಯ ಜತೆಗೆ ಆಚರಿಸಬೇಕೆಂಬ ಭಾವನಾತ್ಮಕ ನಿಲುವು ಇರುತ್ತದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನವರು ಕರಾವಳಿಯ ಊರಿನತ್ತ ಪ್ರಯಾಣಿಸಿದ್ದರು.

ಹೆಚ್ಚು ದಟ್ಟಣೆ
ಬೆಂಗಳೂರು, ಮೈಸೂರು ಸೇರಿದಂತೆ ಮಂಗಳೂರಿನ ಸಂಪರ್ಕಕ್ಕೆ ಇದ್ದ ಚಾರ್ಮಾಡಿ, ಶಿರಾಡಿ ಮತ್ತು ಸಂಪಾಜೆ ಘಾಟಿಗಳಲ್ಲಿ ವಾಹನ ಸಂಚಾರ ಪ್ರಾರಂಭವಾದರೂ ಹೆಚ್ಚಿನ ಮಂದಿ ತಮ್ಮ ಸ್ವಂತ ವಾಹನಗಳಲ್ಲಿ ಊರಿಗೆ ಬರಲು ಹಿಂಜರಿದಿದ್ದರು. ಇದೇ ಕಾರಣಕ್ಕೆ ಹಬ್ಬದ ಸಮಯದಲ್ಲಿ ಬಸ್‌ಗಳಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚು ದಟ್ಟಣೆ ಇತ್ತು.

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ (ಮಂಗಳೂರಿನಲ್ಲಿ-3, ಕುಂದಾಪುರ, ಉಡುಪಿ) ಪ್ರತೀ ದಿನ 350ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಅದರಂತೆಯೇ ಪುತ್ತೂರು ವಿಭಾಗದಿಂದ (ಪುತ್ತೂರು, ಬಿ.ಸಿ. ರೋಡ್‌, ಧರ್ಮಸ್ಥಳ, ಮಡಿಕೇರಿ, ಸುಳ್ಯ) ಸುಮಾರು 560 ಬಸ್‌ಗಳು ಸಂಚರಿಸುತ್ತವೆ, ಈ ಎರಡೂ ವಿಭಾಗಗಳಿಂದ ಸಾಮಾನ್ಯ ದಿನಗಳಲ್ಲಿ ಪ್ರತೀ ದಿನ ಸುಮಾರು ಒಂದು ಕೋಟಿ ರೂಪಾಯಿ ಆದಾಯ ಬರುತ್ತದೆ. ಆದರೆ ದಸರಾ ಸಂದರ್ಭ ಪುತ್ತೂರು ವಿಭಾಗದಿಂದ ಸುಮಾರು 1.42 ಕೋಟಿ ರೂ. ಮತ್ತು ಮಂಗಳೂರು ವಿಭಾಗದಲ್ಲಿ ಸುಮಾರು 1.85 ಕೋಟಿ ರೂ. ಆದಾಯ ಬಂದಿದೆ.

ಹೆಚ್ಚುವರಿ ಬಸ್‌ ಕಾರ್ಯಾಚರಣೆ
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬೆಂಗಳೂರಿಗೆ ಪ್ರತಿದಿನ 70 ಬಸ್‌ಗಳು ಹಾಗೂ ಮಡಿಕೇರಿ ಮಾರ್ಗವಾಗಿ ಮೈಸೂರಿಗೆ 55 ಬಸ್‌ಗಳು ಸಂಚರಿಸುತ್ತಿವೆ. ದಸರಾ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಅದರಲ್ಲಿ ಮಂಗಳೂರು ವಿಭಾಗದಿಂದ ನ. 21, 22ರಂದು ಬೆಂಗಳೂರು, ಮೈಸೂರು, ಹುಬ್ಬಳ್ಳಿಗೆ 60 ಹೆಚ್ಚುವರಿ ಕೆಎಸ್ಸಾರ್ಟಿಸಿ ಬಸ್‌ಗಳು ಕಾರ್ಯಾಚರಿಸಿದ್ದವು.

ರಾಜ್ಯ ಕೆಎಸ್ಸಾರ್ಟಿಸಿಗೆ 18.26 ಕೋಟಿ ರೂ. ಆದಾಯ
ನವರಾತ್ರಿ ಹಬ್ಬದ ನ. 22ರ ಒಂದೇ ದಿನ ಕೆಎಸ್ಸಾರ್ಟಿಸಿ ಒಟ್ಟಾರೆ 18.26 ಕೋಟಿ ರೂ. ಆದಾಯ ಗಳಿಸಿದೆ. ಈ ಆದಾಯವು ಪ್ರಸಕ್ತ ವರ್ಷ ದಿನವೊಂದರ ನಿಗಮ ಗಳಿಸಿದ ಅತಿ ಹೆಚ್ಚು ಆದಾಯವಾಗಿದೆ. ಹಬ್ಬದ ಕಾರಣದಿಂದಾಗಿ ಕೆಎಸ್ಸಾರ್ಟಿಸಿ ವಿವಿಧ ಪ್ರದೇಶಗಳಿಂದ ಹೆಚ್ಚುವರಿಯಾಗಿ 2,500 ಬಸ್‌ ಗಳನ್ನು ನಿಯೋಜನೆ ಮಾಡಿತ್ತು.

ಹೆಚ್ಚಿನ ಆದಾಯ
ಹಬ್ಬದ ಕಾರಣದಿಂದಾಗಿ ಕೆಎಸ್ಸಾರ್ಟಿಸಿ ಘಟಕಗಳಲ್ಲಿ ಬೆಂಗಳೂರು, ಹುಬ್ಬಳ್ಳಿ, ಮೈಸೂರಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಿಸಿತ್ತು. ಮಂಗಳೂರು, ಉಡುಪಿ ಕೆಎಸ್ಸಾರ್ಟಿಸಿ ಘಟಕವು ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಆದಾಯ ಗಳಿಸಿದೆ.
-ದೀಪಕ್‌ ಕುಮಾರ್‌,
ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿ,ಮಂಗಳೂರು

‡ ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.