ನಿಗಮದಿಂದಲೇ ಮೀನು ಖರೀದಿಗೆ ಯೋಜನೆ: ಸಚಿವ ಅಂಗಾರ

ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ

Team Udayavani, Mar 27, 2023, 7:10 AM IST

ನಿಗಮದಿಂದಲೇ ಮೀನು ಖರೀದಿಗೆ ಯೋಜನೆ: ಸಚಿವ ಅಂಗಾರ

ಸುಳ್ಯ: ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು.

ಅವರು ರವಿವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ನಡೆದ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವೋ ಉದ್ಯೋಗ – ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಾಹನ ಲೋಕಾರ್ಪಣೆ ಮಾಡಿ ಮಾತನಾಡಿದರು.

ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ ಒದಗಿಸಲಾಗಿದೆ. 300 ವಾಹನಗಳು ರಾಜ್ಯಕ್ಕೆ ದೊರೆತಿದ್ದು, ಎರಡನೇ ಹಂತದಲ್ಲಿ ಎಷ್ಟು ಬೇಡಿಕೆ ಇದೆಯೋ ಅಷ್ಟು ವಾಹನ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದರು.

ಬಾಗಲಕೋಟೆ, ಕಡಬದ ಸವಣೂರು ಬಳಿ ಮೀನು ಮರಿ ಉತ್ಪತ್ತಿ ಘಟಕ ನಿರ್ಮಿಸಲಾಗುವುದು ಎಂದರು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಮಾತನಾಡಿ, ಮೀನುಗಾರಿಕೆ ಕ್ಷೇತ್ರದಲ್ಲಿ ಸ್ವೋದ್ಯೋಗಕ್ಕೆ ಬಹಳಷ್ಟು ಅವಕಾಶವಿದೆ. ಸಚಿವ ಅಂಗಾರ ಅವರು ಮೀನುಗಾರಿಕೆ ಇಲಾಖೆಗೆ ಕಾಯಕಲ್ಪ ನೀಡುವ ಕೆಲಸ ಮಾಡಿದ್ದಾರೆ ಎಂದರು.

ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್‌ ಕಂದಡ್ಕ, ಸುಳ್ಯ ತಹಶೀಲ್ದಾರ್‌ ಮಂಜುನಾಥ್‌ ಜಿ., ಮಂಗಳೂರು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಗಣೇಶ್‌, ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್‌, ಮೀನುಗಾರಿಕಾ ಮಹಾವಿದ್ಯಾಲಯದ ಡಾ| ಎಚ್‌.ಎನ್‌. ಅಂಜನಪ್ಪ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌ ಉಪಸ್ಥಿತರಿದ್ದರು.

ಕರಾವಳಿ ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ದಿನೇಶ್‌ ಕುಮಾರ್‌ ಸ್ವಾಗತಿಸಿದರು. ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಾಚಾರ್ಯ ಪುರಾಣಿಕ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಪ್ಪೇಸ್ವಾಮಿ ವಂದಿಸಿದರು. ಲತಾಶ್ರೀ, ಸುಪ್ರೀತ್‌ ಮೊಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಇಲಾಖೆಯ ವಿವಿಧ ಫ‌ಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.