ಶಬರಿಮಲೆ: ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಉಪಕಚೇರಿ


Team Udayavani, Jul 29, 2017, 5:25 PM IST

Shabarimala-Temple-600.jpg

ಮಂಗಳೂರು: ಶ್ರೀ ಅಯ್ಯಪ್ಪ ಸ್ವಾಮಿಯ ಪರಮ ಪವಿತ್ರ ಕ್ಷೇತ್ರ ಶಬರಿಮಲೆಗೆ ಕರ್ನಾಟಕದಿಂದ ತೆರಳುವ ಲಕ್ಷಗಟ್ಟಲೆ ಭಕ್ತಾದಿಗಳ ಅನುಕೂಲಕ್ಕಾಗಿ ವೈದ್ಯಕೀಯ ಸೌಲಭ್ಯ, ಸಹಾಯವಾಣಿ, ರಕ್ಷಣೆ ಹಾಗೂ ನೆರವು ನೀಡಲು ಸುಸಜ್ಜಿತ ಉಪ ಕಚೇರಿಯನ್ನು ತೆರೆಯಲು ರಾಜ್ಯ ಸರಕಾರ ಮುಂದಾಗಿದೆ. ಕೇರಳದಲ್ಲಿರುವ ಶ್ರೀ ಶಬರಿಮಲೆ ಕ್ಷೇತ್ರವು ರಾಷ್ಟ್ರದ ಪ್ರಖ್ಯಾತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದು, ಈ ಕ್ಷೇತ್ರಕ್ಕೆ ಕರ್ನಾಟಕದಿಂದ ಪ್ರತೀ ವರ್ಷ ಸುಮಾರು 50ರಿಂದ 60 ಲಕ್ಷ ಜನರು ಭೇಟಿ ನೀಡುತ್ತಾರೆ. ಬಹುತೇಕರು ಪ್ರತೀ ವರ್ಷ ಡಿಸೆಂಬರ್‌ ಮತ್ತು ಜನವರಿಯಲ್ಲಿ ಇಲ್ಲಿಗೆ ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಪ್ರತೀ ವರ್ಷದಿಂದ ವರ್ಷಕ್ಕೆ ಅಧಿಕವಾಗಿರುತ್ತದೆ. ಜತೆಗೆ ಬೇರೆ ರಾಜ್ಯಗಳಿಂದಲೂ ಇಲ್ಲಿಗೆ ಲಕ್ಷಗಟ್ಟಲೆ ಭಕ್ತರು ಆಗಮಿಸುತ್ತಾರೆ.

ಕರ್ನಾಟಕದಿಂದ ತೆರಳುವ ಭಕ್ತರಿಗೆ ಮಾಹಿತಿ ನೀಡುವ ಕೇಂದ್ರಗಳು, ತುರ್ತು ವೈದ್ಯಕೀಯ ಚಿಕಿತ್ಸೆ, ರಕ್ಷಣೆಗೆ ವ್ಯವಸ್ಥೆ ಸೇರಿದಂತೆ ಹಲವು ಸೌಕರ್ಯಗಳ ಅನಿವಾರ್ಯತೆ ಇತ್ತು. ಈ ಸಂಬಂಧ ಅಯ್ಯಪ್ಪ ಮಾಲಾಧಾರಿಗಳು ಸರಕಾರಕ್ಕೆ ಮನವಿ ಕೂಡ ಸಲ್ಲಿಸಿದ್ದರು. ಕಳೆದ ಬಾರಿಯ ಬಜೆಟ್‌ನಲ್ಲಿ ಇದನ್ನು ಪರಿಗಣಿಸಿ ಭಕ್ತಾದಿಗಳ ಅನುಕೂಲಕ್ಕಾಗಿ ವೈದ್ಯಕೀಯ ಸೌಲಭ್ಯಗಳು, ಸಹಾಯವಾಣಿ, ರಕ್ಷಣೆ ಹಾಗೂ ನೆರವು ನೀಡಲು ಒಂದು ಉಪ ಕಚೇರಿ ತೆರೆಯಲಾಗುವುದು ಎಂದು ಪ್ರಕಟಿಸಲಾಗಿತ್ತು. ಈ ಕುರಿತಾದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಿದ ಸರಕಾರ ಉಪ ಕಚೇರಿ ತೆರೆಯಲು ತುರ್ತಾಗಿ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ. ಶೀಘ್ರವೇ ಈ ಕಾರ್ಯವನ್ನು ನಡೆಸಲು ಧಾರ್ಮಿಕ ದತ್ತಿ ಇಲಾಖೆ ನಿರ್ಧರಿಸಿದ್ದು, ಯೋಜನೆ ಸಿದ್ಧಪಡಿಸಿದೆ. 

ಪ್ರಸ್ತುತ ಶಬರಿಮಲೆ ಕ್ಷೇತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಪೊಲೀಸ್‌ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಸಂಯೋಜನಾ ಕಾರ್ಯವನ್ನು ಕಂದಾಯ ಇಲಾಖೆಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಪತ್ತು ನಿರ್ವಹಣೆ ನಿರ್ವಹಿಸುತ್ತಿದೆ. ಇದರ ಜತೆಯಲ್ಲಿ ಭಕ್ತಾದಿಗಳ ಮಾಹಿತಿ, ರಕ್ಷಣೆಗಾಗಿ ವಿಶೇಷ ಕಚೇರಿ ಆರಂಭವಾಗಲಿದೆ.

4 ಗಡಿಗಳಲ್ಲಿ ಮಾಹಿತಿ ಕೇಂದ್ರ
ಕರ್ನಾಟಕ ರಾಜ್ಯದಿಂದ ಕೇರಳ ರಾಜ್ಯ ಪ್ರವೇಶಿಸುವ ನಾಲ್ಕು ಮುಖ್ಯ ಸ್ಥಳಗಳಲ್ಲಿ ತಾತ್ಕಾಲಿಕ ಮಾಹಿತಿ ಕೇಂದ್ರವನ್ನು ತೆರೆದು ಶ್ರೀ ಕ್ಷೇತ್ರ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ನಿರ್ಧರಿಸಲಾಗಿದೆ. ಜತೆಗೆ ಕರ್ನಾಟಕ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಹಶೀಲ್ದಾರ್‌ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಮತ್ತು ಈ ಎಲ್ಲಾ ಕಾರ್ಯಗಳ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಒಬ್ಬರು ಸಂಯೋಜಕರನ್ನು ನೇಮಿಸಲಾಗುತ್ತದೆ. ಇವರ ಮೂಲಕವಾಗಿ ಸಂವಹನ ಕಾಯ್ದುಕೊಳ್ಳಲಾಗುತ್ತದೆ.

ಶಬರಿಮಲೆ ಸುತ್ತಮುತ್ತ ಮಾಹಿತಿ ಕೇಂದ್ರ
ಶ್ರೀ ಶಬರಿಮಲೆಯಲ್ಲಿ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪಂಪಾ, ನೀಲಕಲ್‌, ಕೊಟ್ಟಾಯಂ ಹಾಗೂ ಇತರ ಆವಶ್ಯಕ ಸ್ಥಳಗಳಲ್ಲಿ ತಾತ್ಕಾಲಿಕ ಸೇವಾ ಹಾಗೂ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಈ ಕೇಂದ್ರಗಳಲ್ಲಿ ಕನಿಷ್ಠ ವೈದ್ಯಕೀಯ ಸೇವೆಯನ್ನು ಏರ್ಪಾಡು ಮಾಡುವುದು ಹಾಗೂ ಅಗತ್ಯ ಮಾಹಿತಿಗಳನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಹೀಗೆ ತೆರೆದ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಿಬಂದಿ ನೇಮಿಸುವುದು ಹಾಗೂ ಈ ಸಿಬಂದಿಗೆ ಸಹಾಯಕವಾಗುವಂತೆ ತಾತ್ಕಾಲಿಕವಾಗಿ ದ್ವಿಭಾಷಿಗಳನ್ನು 45 ದಿನಗಳ ಕಾಲಕ್ಕೆ ನೇಮಿಸಲಾಗುತ್ತದೆ. ಈ ಕೇಂದ್ರಗಳಿಗೆ ಹಾಗೂ ನಿಯೋಜಿಸಲಾಗುವ ಸಿಬಂದಿಗೆ ತಾತ್ಕಾಲಿಕವಾಗಿ ದೂರವಾಣಿ ಸೌಲಭ್ಯ ಹಾಗೂ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ. ಸಿಬಂದಿ ಕಾರ್ಯನಿರ್ವಹಣೆಗೆ ವಾಹನ ಸೌಕರ್ಯ ಹಾಗೂ ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಪ್ರಸ್ತಾವನೆಯಲ್ಲಿ ಉಲ್ಲೇಖ ಮಾಡಲಾಗಿದೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.