NH 73 ನೌಕರರಿಗೆ ವೇತನ ವಿಳಂಬ; ಗುತ್ತಿಗೆದಾರ ಕಂಪೆನಿ ವಿರುದ್ಧ ನೌಕರರ ಆಕ್ರೋಶ, ಮುಷ್ಕರ
Team Udayavani, Aug 5, 2024, 10:53 AM IST
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಮುಷ್ಕರ ನಡೆಸುತ್ತಿರುವ ಘಟನೆ ಸೋಮವಾರ (ಆ 05) ನಡೆದಿದೆ.
ಮಳೆಯಿಂದಾಗಿ ರಸ್ತೆ ತೀರ ಹದಗೆಟ್ಟಿದ್ದು ಮಳೆಗಾಲ ಆರಂಭದಿಂದ ಸವಾರರು ತೀರ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಮಧ್ಯೆ ರಸ್ತೆ ಸರಿಪಡಿಸಲು ನೌಕರರು ಮೂರು ತಿಂಗಳಿಂದ ಕೆಲಸ ನಿರ್ವಹಿಸುತ್ತಿದ್ದರೂ ಗುತ್ತಿಗೆದಾರ ಕಂಪೆನಿ ವೇತನ ನೀಡಿಲ್ಲ ಎಂದು ಓಡಿಲ್ನಾಳದಲ್ಲಿರುವ ಕಂಪೆನಿ ಯುನಿಟ್ ನಲ್ಲಿ ಮುಷ್ಕರ ನಿರತರಾಗಿದ್ದಾರೆ.
ಒಬ್ಬೊಬ್ಬರಿಗೆ 35 ರಿಂದ 60 ಸಾವಿರ ರೂ. ವರೆಗೆ ವೇತನಿವಿದ್ದು, ಒಬ್ಬರಿಗೂ ಈವರೆಗೆ ವೇತನ ಕೈ ಸೇರಿಲ್ಲ, ಹೆಂಡತಿ ಮಕ್ಕಳು ಆಹಾರವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಊಟಕ್ಕೆ ಬೇಕಾದ ಆಹಾರ ಸಾಮಾಗ್ರಿಯಿಲ್ಲ, ಒತ್ತಡದಲ್ಲಿ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆರಂಭದಲ್ಲಿ 3000 ಮಂದಿ ನೌಕರರಿದ್ದು, ಪ್ರಸಕ್ತ 150 ಮಂದಿಯಷ್ಟೆ ನೌಕರರಿದ್ದಾರೆ
ರಾಜ್ಯ ಸರಕಾರ, ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ನಮ್ಮ ಕುಟುಂಬವನ್ನು ಬದುಕಿಸಿ, ಊರಿಗೆ ಹೋಗದೆ ತಿಂಗಳುಗಳಾಗಿವೆ. ನಮ್ಮದು ಗುತ್ತಿಗೆದಾರರ ಮೇಲೆ ಹೋರಾಟವಲ್ಲ, ವೇತನಕ್ಕಾಗಿ ನಮ್ಮ ಬೇಡಿಕೆಯಷ್ಟೆ. ನಮಗೆ ವೇತನ ನೀಡದಿದ್ದಲ್ಲಿ ನಾವು ಕೆಲಸಕ್ಕೆ ಕದಲುವುದಿಲ್ಲ. ಮುಷ್ಕರ ನಡೆಸಿಯೇ ಸಿದ್ಧ. ವೇತನ ನೀಡಿ ಇಲ್ಲವೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಲಿ ಎಂದು ಆಗ್ರಹಿಸಿ ಕಂಪೆನಿ ಎದುರು ಮುಷ್ಕರ ಹೂಡಿದ್ದಾರೆ.
ಕಳೆದ ವಾರಗಳ ಹಿಂದೆಯೂ ನೌಕರರು ಮುಷ್ಕರ ನಡೆಸಿದ್ದು, ರಾಜಿ ಸಂದಾನದ ಬಳಿಕ ಬಗೆಹರಿಸಲಾಗಿತ್ತು. ಇದೀಗ ಮತ್ತೆ ವೇತನ ನೀಡದೆ ಸತಾಯಿಸುತ್ತಿರಯವ ವಿರುದ್ಧ ಆಕ್ರೋಶವಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.