ಮರಳು ಉಸ್ತುವಾರಿ ಸಮಿತಿ ಆದೇಶ ರದ್ದು ; ಮತ್ತೆ 27 ಮಂದಿಗೆ ಅವಕಾಶ


Team Udayavani, Oct 12, 2022, 10:08 AM IST

ಮರಳು ಉಸ್ತುವಾರಿ ಸಮಿತಿ ಆದೇಶ ರದ್ದು ; ಮತ್ತೆ 27 ಮಂದಿಗೆ ಅವಕಾಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 27 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಆರ್‌ಝಡ್‌ ವಲಯದಲ್ಲಿ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಅ. 10ರಂದು ಆದೇಶ ನೀಡಿದೆ.

ಸಿಆರ್‌ಝಡ್‌ ವಲಯದಲ್ಲಿ ಮರಳು ಗಾರಿಕೆಗೆ ವಿಧಿಸಿರುವ ನಿಷೇಧವನ್ನು ಪ್ರಶ್ನಿಸಿ ತಾತ್ಕಾಲಿಕ ಪರವಾನಿಗೆ ಹೊಂದಿದ್ದ 30 ಮಂದಿ ಈ ಹಿಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಸಿಆರ್‌ಝಡ್‌ ವಲಯದಲ್ಲಿ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ. 3ರಂದು ಆದೇಶಿಸಿತ್ತು. ಬಳಿಕ ಇನ್ನೂ 27 ಮಂದಿ ತಾತ್ಕಾಲಿಕ ಪರವಾ ನಿಗೆ ದಾರರು ಸಲ್ಲಿಸಿದ್ದ ಅರ್ಜಿಯ ವಿಚಾ ರಣೆ ನಡೆಸಿದ ಹೈಕೋರ್ಟ್‌ ಅವರ ತಾತ್ಕಾಲಿಕ ಪರವಾನಿಗೆಗಳಿಗೂ ವಿಧಿಸಿದ್ದ ನಿಷೇಧವನ್ನು ರದ್ದುಗೊಳಿಸಿದೆ.

ಸೆ. 3ರ ಆದೇಶದಲ್ಲಿ ಉಲ್ಲೇಖೀಸಿರುವ ಎಲ್ಲ ಅಂಶಗಳು ಈ ಆದೇಶದಲ್ಲೂ ಅನ್ವಯವಾಗುತ್ತಿದ್ದು ಯಂತ್ರೋಪಕರಣಗಳನ್ನು ಬಳಸದೆ ಮಾನವಶ್ರಮದ ಮೂಲಕ (ಮ್ಯಾನ್ಯುವಲ್‌) ಮರಳುಗಾರಿಕೆ ನಡೆಸಲು ಅನುಮತಿ ನೀಡಬಹುದಾಗಿದೆ ಎಂದು ಆದೇಶದಲ್ಲಿ ಹೇಳಿದೆ. ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆೆಗೆ ನಿಷೇಧ ವಿಧಿಸಿ ಹಸುರು ಪೀಠ (ಗ್ರೀನ್‌ ಟ್ರಿಬ್ಯೂನಲ್‌) ನೀಡಿದ್ದ ಆದೇಶದ ಆಧಾರದಲ್ಲಿ ದಕ್ಷಿಣ ಕನ್ನಡದಲ್ಲೂ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ನಿಷೇಧ ವಿಧಿಸಲಾಗಿತ್ತು.

ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಅರ್ಜಿಯಲ್ಲಿ ರಾಜ್ಯ ಸರಕಾರ, ಭಾರತ ಸರಕಾರ ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ಪ್ರಾಧಿಕಾರ, ಏಳು ಸದಸ್ಯರ ದ.ಕ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗಣಿ ಹಾಗೂ ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ಪ್ರತಿವಾದಿಗಳಾಗಿದ್ದರು.

ಸೆ. 3ರ ಆದೇಶ
ತಾತ್ಕಾಲಿಕ ಪರವಾನಿಗೆದಾರರಿಗೆ 2022ರ ಮೇ 21ರಂದು ಹೊರಡಿಸಿದ್ದ ಆದೇಶ ಹಾಗೂ ಮೇ 23ರಂದು ನೀಡಿದ್ದ ನೋಟಿಸ್‌ ಹಸುರುಪೀಠದ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ನೀಡಿದ್ದಾಗಿದ್ದು ಇದು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ. ಆದುದರಿಂದ ಇದನ್ನು ರದ್ದುಪಡಿಸಲಾಗಿದೆ. ಪ್ರತಿವಾದಿಗಳು (ಸರಕಾರ) ಯಂತ್ರಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ನಡೆಯದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸ್ವಾತಂತ್ರÂ ಹೊಂದಿದ್ದಾರೆ. ಅರ್ಜಿದಾರರಿಗೆ ತಾತ್ಕಾಲಿಕ ಪರವಾನಿಗೆಯಲ್ಲಿ ವಿಧಿಸಿದ ಷರತ್ತುಗಳಂತೆ ಮಾನವಶ್ರಮದ ಮೂಲಕ ಮರಳುಗಾರಿಕೆಗೆ ಅನುಮತಿ ನೀಡಬಹುದಾಗಿದೆ ಎಂದು ನ್ಯಾಯಾಲಯ ಸೆ. 3ರ ಆದೇಶದಲ್ಲಿ ತಿಳಿಸಿತ್ತು.

ಇದನ್ನೂ ಓದಿ : ಡೆಮಾಕ್ರಟಿಕ್ ಪಕ್ಷ ತೊರೆದ ಅಮೆರಿಕದ ಮೊದಲ ಹಿಂದೂ ಸಂಸದೆ ತುಳಸಿ ಗಬ್ಬಾರ್ಡ್

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.