ತುಳುನಾಡಿನ ಸೌಹಾರ್ದ ಸಾರಾ ಬಾಳಿನ “ಸಾರ’


Team Udayavani, Jan 11, 2023, 7:42 AM IST

ತುಳುನಾಡಿನ ಸೌಹಾರ್ದ ಸಾರಾ ಬಾಳಿನ “ಸಾರ’

ಸಮಾಜದಲ್ಲಿ ಸೌಹಾರ್ದ, ಮನುಷ್ಯ ಪ್ರೀತಿಯಿಂದ ಬದುಕಬೇಕು ಎಂಬುದನ್ನು ಸಾಹಿತಿಯಾಗಿ ಬರವಣಿಗೆ ಮೂಲಕ ತೋರಿಸಿದ್ದಲ್ಲದೆ, ತುಳುನಾಡಿನ ಸಂಸ್ಕೃತಿಯ ಜೀವಾಳವಾದ ಸೌಹಾರ್ದದ ಬಾಳನ್ನು ಬದುಕಿ ತೋರಿಸಿದವರು ನಾಡೋಜ ಡಾ| ಸಾರಾ ಅಬೂಬಕರ್‌. ಅವರ ಮಾನವ ಪ್ರೀತಿ, ಅನ್ಯಾಯದ ವಿರುದ್ಧ ಧ್ವನಿಯಾಗುವ ಅವರ ನಡೆಯಿಂದ ಅವರ ವ್ಯಕ್ತಿತ್ವ ಮಹಾನ್‌ ಅನ್ನಿಸಿಕೊಳ್ಳುತ್ತದೆ.

ತಳ ಮಟ್ಟದ ಮಹಿಳೆಯರ ಜತೆ ಒಡನಾಟ ಹೊಂದಿದ್ದ ಡಾ| ಸಾರಾ ಅಬೂಬಕರ್‌, ತಮ್ಮನ್ನು ಯಾರೇ ಆಹ್ವಾನಿಸಿದರೂ ಬಿಗುಮಾನವಿಲ್ಲದೆ ತೆರಳುತ್ತಿದ್ದರು. ಅವರ ಜತೆ ಬೆರೆಯುತ್ತಿದ್ದರು. ಜತೆಗೆ ಅರಿವು ಹಂಚುವ ಕಾರ್ಯ ಮಾಡುತ್ತಿದ್ದರು. ಬರಹಗಾರರು ಕೋಣೆಯಲ್ಲಿ, ಎಸಿ ರೂಮಿನಲ್ಲಿ ಕುಳಿತು ಬರೆಯುವ ಬದಲು, ಯಾವುದೇ ಧರ್ಮ, ಮತ ಭೇದಗಳ ಅಂತರವಿಲ್ಲದೆ ಜತೆಯಾಗಿ ಬೆರೆತು ಅವರ ಜತೆ ಚರ್ಚಿಸುವುದು, ಅವರನ್ನು ಅರಿಯುವುದು, ಅವರಿಗೆ ಅರಿವು ಮೂಡಿಸುವ ಕಾರ್ಯ ಒಬ್ಬ ಬರಹಗಾರನ ಹೃದಯ ಶ್ರೀಮಂತಿಕೆ. ಅದು ಡಾ. ಸಾರಾ ಅಬೂಬಕರ್‌ ಅವರಲ್ಲಿತ್ತು. ಅದಕ್ಕಾಗಿ ಅವರು ನನಗೆ ಅತ್ಯಂತ ಪ್ರಬುದ್ಧ, ಮೇಲ್ಪಂಕ್ತಿಯ ಬರಹಗಾರರೆನಿಸಿದ್ದಾರೆ.

ದ.ಕ. ಜಿಲ್ಲೆಯ ಮಹಿಳಾ ಹೋರಾಟಗಳೂ ಸೇರಿದಂತೆ ಹಲವು ಪ್ರತಿಭಟನೆಗಳಲ್ಲಿ ಅವರು ಪಾಲ್ಗೊಂಡಿದ್ದರು. ಆ ಮೂಲಕ ನಮ್ಮಲ್ಲೂ ಧೈರ್ಯ ತುಂಬಿದವರು. ತನಗೆ ಹೇಳಬೇಕೆನ್ನಿಸಿದ್ದನ್ನು ನೇರವಾಗಿ ಹೇಳುತ್ತಿದ್ದವರು. ಕರಾವಳಿ ವಾಚಕಿಯರ, ಲೇಖಕಿಯರ ಸಂಘದ ಹುಟ್ಟಿನಿಂದ ಹಿಡಿದು ಅದರ ಬೆಳವಣಿಗೆಗೆ ಶ್ರಮಿಸಿದವರಲ್ಲಿ ಸಾರಾ ಕೂಡಾ ಒಬ್ಬರು. ಅವರು ಸಂಘಕ್ಕೆ ಒಂದು ದೊಡ್ಡ ನಿಧಿಯಾಗಿದ್ದರು.

ಸುಮಾರು 40ರಿಂದ 45 ವರ್ಷಗಳಿಂದ ಅವರನ್ನು ಬಲ್ಲೆ. ಸಂಘದ ಅಧ್ಯಕ್ಷರಾಗಿದ್ದಾಗ ಜತೆಗೆ ಕೆಲಸ ಮಾಡುವ ಅವಕಾಶವೂ ದೊರಕಿತ್ತು. ಸಾಹಿತ್ಯ ಎಂಬುದು ಸಮಾಜದ ಪ್ರತಿಬಿಂಬವಾಗಬೇಕು ಎಂಬುದು ಅವರ ಅನಿಸಿಕೆಯಾಗಿತ್ತು.

ಯಾರು ಅನ್ಯಾಯಕ್ಕೆ ಒಳಗಾಗುತ್ತಾರೆಯೋ ಅವರ ಜತೆ ನಾವು ಇರಬೇಕು. ಅದನ್ನು ಸಮಾಜಕ್ಕೆ ತಿಳಿಸಬೇಕು. ಪ್ರಭುತ್ವಕ್ಕೆ ಮನವರಿಕೆ ಮಾಡಬೇಕು. ವಿರೋಧ ಮಾಡುವವರಿಗೆ ವಾಸ್ತವವನ್ನು ತಿಳಿಸುವ ಕೆಲಸವಾಗಬೇಕು ಎಂಬ ಧ್ವನಿಯೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದವರು ಸಾರಾ ಅಬೂಬಕರ್‌. ಕೇವಲ ಬರಹದಲ್ಲಿ ಅವರು ಸಮಾಜದ ಅನ್ಯಾಯಗಳ ವಿರುದ್ಧ ಧ್ವನಿ ಎತ್ತಿದವರಲ್ಲ.

ಲೇಖಕರು, ಸಾಹಿತಿಗಳು ಕೇವಲ ಭಾವನಾತ್ಮಕವಾಗಿ ಬೆಳೆದರೆ ಸಾಲದು. ಬೌದ್ಧಿಕವಾಗಿಯೂ ಬೆಳೆಯಬೇಕು ಎಂಬ ದಿಸೆಯಲ್ಲಿ ಡಾ| ಸಾರಾ ನಮ್ಮ ಜತೆಗಿದ್ದ ಜ್ವಲಂತ ನಿದರ್ಶನ.

∙ಬಿ.ಎಂ. ರೋಹಿಣಿ, ಹಿರಿಯ ಸಾಹಿತಿ.

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.