ನೀರಿಲ್ಲದೆ ಅತಂತ್ರರಾಗಿರುವ ಕುಂಪಲ ಜನತೆ


Team Udayavani, Mar 15, 2018, 11:47 AM IST

15-March-5.jpg

ಕುಂಪಲ: ಪುರಸಭೆಯಾಗಿ ಮೇಲ್ದರ್ಜೆಗೇರುವ ಕನಸು ಕಾಣುತ್ತಿರುವ ರಾಜ್ಯದ ಅತೀ ದೊಡ್ಡ ಗ್ರಾಮಪಂಚಾಯತ್‌ ಆಗಿರುವ ಸೋಮೇಶ್ವರದಲ್ಲಿ ನೀರಿನ ಸಮಸ್ಯೆಗೆ ಇನ್ನೂ ಪರಹಾರ ಸಿಕ್ಕಿಲ್ಲ. ಸಮುದ್ರ ತಟದಲ್ಲಿರುವ ಈ ಗ್ರಾಮ ಪಂಚಾಯತ್‌ನ ಅತೀ ಹೆಚ್ಚು ಜನವಸತಿ ಇರುವ ಕುಂಪಲ ಪ್ರದೇಶದಲ್ಲಿ ಕುಡಿಯುವ ನೀರಿಲ್ಲದೆ ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಮಾರ್ಚ್‌ ತಿಂಗಳು ಬಂದರೆ ಇಲ್ಲಿನ ಜನರಿಗೆ ನೀರಿನ ಸಮಸ್ಯೆ ಪ್ರಾರಂಭವಾಗುತ್ತದೆ. ಇರುವ ಬಾವಿಗಳು, ಬೋರ್‌ವೆಲ್‌ಗ‌ಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಎಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಟ್ಯಾಂಕರ್‌ ನೀರನ್ನೇ ಆಶ್ರಯಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಕುಂಪಲ ಕುಜುಮಗದ್ದೆ ಮತ್ತು ಬಾರ್ದೆಯನ್ನು ಹೊರತುಪಡಿಸಿದರೆ, ಉಳಿದ ಕಡೆ ನೀರಿನ ಸಮಸ್ಯೆಯಿದೆ. ಕುಂಪಲ ಆಶ್ರಯ ಕಾಲನಿ, ವಿದ್ಯಾನಗರ, ಸುರಕ್ಷಾನಗರ, ಮೂರುಕಟ್ಟೆ, ಪ್ರಕಾಶ್‌ ನಗರ, ಚಿತ್ರಾಂಜಲಿ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ.

ಅರ್ಧ ಗಂಟೆ ನೀರಿಗೆ ಮೂರು ದಿನ
ಸುರಕ್ಷಾ ನಗರ, ವಿದ್ಯಾನಗರದಲ್ಲಿ ಅರ್ಧ ಗಂಟೆ ನೀರಿಗಾಗಿ ಮೂರು ದಿನ ಕಾಯುವ ಸ್ಥಿತಿಯಿದೆ. ಸಾಮಾನ್ಯ ದಿನಗಳಲ್ಲಿ ಕೆಲವೆಡೆ ದಿನಾ ನೀರು ಸರಬರಾಜಾದರೆ, ಕೆಲವೆಡೆ ಎರಡು ದಿನಕ್ಕೊಮ್ಮೆ ನೀರು ಸಿಗುತ್ತಿತ್ತು. ಈಗ ಅರ್ಧಗಂಟೆಗೊಮ್ಮೆ ಬರುವ ನೀರಿಗೆ ಮೂರು ದಿನ ಕಾಯುವಂತಾಗಿದೆ. ಬಟ್ಟೆ ತೊಳೆಯುವ ನೀರನ್ನು ಮರು ಬಳಕೆ ಮಾಡಿ ನೀರನ್ನು ಸರಿದೂಗಿಸಿದರೂ ಟ್ಯಾಂಕರ್‌ ನೀರನ್ನೇ ಆಶ್ರಯಿಸಬೇಕಾಗುತ್ತದೆ ಎನ್ನುತ್ತಾರೆ ಸುರಕ್ಷಾ ನಗರದ ಲೀನಾ ಅವರು.

ಟ್ಯಾಂಕ್‌ ಕಟ್ಟಿ 20 ವರ್ಷ ತೊಟ್ಟು ನೀರು ಬಿದ್ದಿಲ್ಲ
ಕುಂಪಲ ಪ್ರದೇಶಕ್ಕೆ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ವಿದ್ಯಾನಗರದ ಬಳಿ ಓವರ್‌ಹೆಡ್‌ ಟ್ಯಾಂಕ್‌ ಕಟ್ಟಿ 20 ವರ್ಷಗಳೇ ಸಂದಿದೆ. ಆದರೆ ಈತನಕ ಒಂದು ಹನಿ ನೀರು ಟ್ಯಾಂಕ್‌ಗೆ ಬಿದ್ದಿಲ್ಲ. ಟ್ಯಾಂಕ್‌ ಕಟ್ಟಿದ ಸ್ಥಳದಲ್ಲಿ ಸುಮಾರು 5ಕ್ಕೂ ಹೆಚ್ಚು ಬೋರ್‌ವೆಲ್‌ ತೆಗೆದರೂ ನೀರು ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯ ಜನಪ್ರತಿನಿಧಿ.

ಹೆದ್ದಾರಿ ಪಾಲಾದ ನೀರಿನ ಮೂಲ
ಕುಂಪಲ ಬೈಪಾಸ್‌ ಬಳಿ ಹೆದ್ದಾರಿ ಕಾಮಗಾರಿ ವೇಳೆ ನೀರಿನ ಮೂಲಗಳು ಹೆದ್ದಾರಿ ಪಾಲಾಗಿತ್ತು. ಪರ್ಯಾಯವಾಗಿ ಒಂದು ಬೋರ್‌ವೆಲ್‌ ಕೊರೆದಿದ್ದು ಇದರ ನೀರು ಕುಂಪಲ ಚೇತನ್‌ನಗರದವರೆಗೆ ವಿತರಿಸಲು ಸಾಧ್ಯವಾಗುತ್ತಿದೆ ಎನ್ನುತ್ತಾರೆ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಉಚ್ಚಿಲ್‌. 

ನೀರಿನ ಮೂಲವೇ ಇಲ್ಲ
ಕುಂಪಲದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ನೀರಿನ ತೊಂದರೆ ಇದೆ. ಕಳೆದ ಬಾರಿ 7 ಬೋರ್‌ವೆಲ್‌ ಕೊರೆದಿದ್ದು ಈಗ ಎರಡು ಬೋರ್‌ ವೆಲ್‌ನಲ್ಲಿ ನೀರು ಸಿಗುತ್ತಿದೆ. ಈ ಪ್ರದೇಶದಲ್ಲಿ ಹಲವು ವರ್ಷಗಳಿಂದ 25ಕ್ಕೂ ಹೆಚ್ಚು ಬೋರ್‌ವೆಲ್‌ ಕೊರೆದರೂ ನೀರು ಸಿಕ್ಕಿಲ್ಲ ಎನ್ನುತ್ತಾರೆ. ನೀರಿನ ಸಮಸ್ಯೆಬಗೆಹರಿಯಬೇಕಾದರೆ ನೇತ್ರಾವತಿ ನದಿಗೆ ವೆಂಟೆಡ್‌ ಡ್ಯಾಂ ನಿರ್ಮಿಸಿ ಸರಬರಾಜು ಮಾಡುವುದೊಂದೇ ದಾರಿ ಎನ್ನುತ್ತಾರೆ ಸ್ಥಳೀಯ ಜನಪ್ರತಿನಿಧಿಯೊಬ್ಬರು.

ನೀರಿಗಾಗಿ ಪರದಾಟ
ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಮ್ಮದು. ಕೆಲವೊಮ್ಮೆ ಸುರಕ್ಷಾನಗರ, ವಿದ್ಯಾನಗರಕ್ಕೆ ಮೂರುಕಟ್ಟದಿಂದ ನೀರು ಸರಬರಾಜು ಆಗುತ್ತಿದ್ದು, ನೀರು ವಾಸನೆ ಬರುತ್ತದೆ. ಅಲ್ಲೇ ಇರುವ ಇನ್ನೊಂದು ಬಾವಿಯಿಂದ ಬರುವ ನೀರು ಮಾತ್ರ ಕುಡಿಯಲು ಯೋಗ್ಯವಾಗಿದೆ. ಹಣ ಇದ್ದವರು ಹಣ ಕೊಟ್ಟು ಟ್ಯಾಂಕರ್‌ ನೀರು ತರಿಸುತ್ತಾರೆ. ನಮಗೆ ಸಾಧ್ಯವಾಗುತ್ತಿಲ್ಲ.
– ಪುಷ್ಪಲತಾ, ಸ್ಥಳೀಯರು

ಟ್ಯಾಂಕರ್‌ ನೀರು ಸರಬರಾಜು
ಸೋಮೇಶ್ವರ ಗ್ರಾಮ ಪಂಚಾಯತ್‌ನ ಕುಂಪಲ, ಉಚ್ಚಿಲ ಕಾಟುಂಗರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕುಂಪಲದಲ್ಲಿ ತುರ್ತಾಗಿ ಬೋರ್‌ವೆಲ್‌ ತೆಗೆಯಲು ಅವಕಾಶವಿದ್ದರೂ, ನೀರಿನ ಮೂಲ ಇಲ್ಲದೆ ಕೈಬಿಡಲಾಗಿದೆ. ಮುಂದಿನ ಎರಡು ತಿಂಗಳು ಟ್ಯಾಂಕರ್‌ನಲ್ಲೇ ನೀರು ಸರಬರಾಜು ಮಾಡಲು ಪಂಚಾಯತ್‌ ಕ್ರಿಯಾ ಯೋಜನೆ ಮಾಡಿದೆ.
– ರಾಜೇಶ್‌ ಉಚ್ಚಿಲ್‌ , ಅಧ್ಯಕ್ಷರು ಸೋಮೇಶ್ವರ ಗ್ರಾ. ಪಂ.

 ವಸಂತ್‌ ಎನ್‌. ಕೊಣಾಜೆ

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.