ನೀರಿನ ಕೊರತೆ ನಡುವೆ ಇಂದು ಶಾಲಾರಂಭ


Team Udayavani, May 29, 2019, 6:20 AM IST

school

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರಂದು ಪ್ರಾರಂಭವಾಗಲಿವೆ. ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲು ಶಾಲೆಯಲ್ಲಿ ಪ್ರಾರಂಭೋತ್ಸವವನ್ನೂ ಬುಧವಾರ ಹಮ್ಮಿಕೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಹೆಚ್ಚಿರುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಳಿಕ ಶಾಲೆಗಳಿಗೆ ರಜೆ ನೀಡಬೇಕು ಎಂಬ ಯಾವುದೇ ನಿರ್ದೇಶಗಳು ಸರಕಾರದಿಂದ ಬಂದಿಲ್ಲ. ಆದರೆ ಈಗಾಗಲೇ ಕೆಲವು ಶಾಲೆಗಳ ಮುಖ್ಯಸ್ಥರು ನೀರಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದು, ಅಂತಹ ಶಾಲೆಗಳಿಗೆ ಅಗತ್ಯಕ್ಕನುಸಾರವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ತಿಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರು ತಿಳಿಸಿದ್ದಾರೆ.

ಮೂಲಸೌಕರ್ಯ ಪರಿಶೀಲನೆ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ ಮತ್ತು ಖಾಸಗಿ ಸೇರಿದಂತೆ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 29ರಂದು ಆರಂಭ ಗೊಳ್ಳಲಿವೆ. ಜಿಲ್ಲೆಯಲ್ಲಿ ಸುಮಾರು 1.52 ಲಕ್ಷ ವಿದ್ಯಾರ್ಥಿಗಳಿದ್ದಾರೆ. 1,248 ಶಾಲೆಗಳಿವೆ. ಡಿಡಿಪಿಐ ಸೂಚನೆಯಂತೆ ಮಂಗಳವಾರ ಶಿಕ್ಷಕರು ಶಾಲೆಗೆ ಆಗಮಿಸಿ ಶಾಲೆಯ ಶುಚಿತ್ವ ಹಾಗೂ ಇತರ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ಬುಧವಾರ ಶಾಲೆಗಳಲ್ಲಿ ಆರಂಭೋತ್ಸವ ನಡೆಯ ಲಿದೆ. ಲಭ್ಯ ಇರುವಲ್ಲಿ ಪಠ್ಯ ಪುಸ್ತಕಗಳ ವಿತರಣೆ ಕೂಡ ನಡೆಯಲಿದೆ.

ಜಿಲ್ಲೆಯಲ್ಲಿ ಸುಮಾರು ಶೇ. 10ರಿಂದ 20ರಷ್ಟು ಶಾಲೆಗಳಿಗೆ ನೀರಿನ ಸಮಸ್ಯೆ ಎದುರಾಗುವ ಬಗ್ಗೆ ಅಂದಾಜಿಸಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಿದ್ದರೂ ಅಂಥಶಾಲೆಗಳಲ್ಲಿ ಅಕ್ಷರ ದಾಸೋಹಕ್ಕೆ ಸಮಸ್ಯೆಯಾಗಬಹುದು. ಈ ಶಾಲೆಗಳ ಬಗ್ಗೆ ನಿಗಾ ಇಡಲು ಮತ್ತು ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಆಯಾ ವಲಯದ ಬಿಇಒಗಳಿಗೆ ಸೂಚಿಸಲಾಗಿದೆ ಎಂದು ಉಡುಪಿ ಡಿಡಿಪಿಐ ಶೇಷಶಯನ ಕಾರಿಂಜ ಅವರು ತಿಳಿಸಿದ್ದಾರೆ.

ಮಿಂಚಿನ ಸಂಚಾರ

ಅಧಿಕಾರಿಗಳು ಶಾಲಾ ಆರಂಭೋತ್ಸವ ದಿನ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಮೂಲಸೌಕರ್ಯ, ಶಿಕ್ಷಕರು, ವಿದ್ಯಾರ್ಥಿಗಳ ಹಾಜರಾತಿ ಮೊದಲಾದವುಗಳ ಪರಿಶೀಲನೆ ನಡೆಸಲಿದ್ದಾರೆ. ನಾನು ಕೂಡ ಕೆಲವು ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡುತ್ತೇನೆ. ಜಿಲ್ಲೆಯಾದ್ಯಂತ ಅಧಿಕಾರಿಗಳ ‘ಮಿಂಚಿನ ಸಂಚಾರ’ ನಡೆಯಲಿದೆ ಎಂದು ಉಡುಪಿ ಡಿಡಿಪಿಐ ತಿಳಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.