ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಸುಳ್ಯ ನಗರಕ್ಕೆ ಕೆಸರು ಮಿಶ್ರಿತ ನೀರು

Team Udayavani, Oct 27, 2021, 3:10 AM IST

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಸುಳ್ಯ: ನಗರದಲ್ಲಿ ಕುಡಿಯುವ ನೀರು ಕೆಸರು ಮಿಶ್ರಿತ ವಾಗಿರುವ ಬಗ್ಗೆ ಸುಳ್ಯ ಸಿವಿಲ್‌ ನ್ಯಾಯಾಲಯದ ಹಿರಿಯ ನ್ಯಾಯಾ ಧೀಶ ಸೋಮಶೇಖರ ಮತ್ತು ಕಿರಿಯ ನ್ಯಾಯಾಧೀಶ ಯಶವಂತ್‌ ಕುರ್ಮಾ ಅವರು ಪರಿಶೀಲನೆ ನಡೆಸಿದರು.

ಕೆಲವು ದಿನಗಳಿಂದ ಕೆಸರು ಮಿಶ್ರಿತ ನೀರು ಸರಬರಾಜಾಗುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳ ವಾರ ಸಂಜೆ ಕಲ್ಲುಮುಟ್ಲುವಿನ ಶುದ್ಧೀ ಕರಣ ಘಟಕಕ್ಕೆ ಭೇಟಿ ನೀಡಿ ಎಲ್ಲ ವಿಭಾಗಗಳನ್ನು ಪರಿಶೀಲಿಸಿದ ನ್ಯಾಯಾ ಧೀಶರು ನೀರು ಸಮರ್ಪಕವಾಗಿ ಶುದ್ಧೀಕರಿಸದೆ ಸರಬರಾಜಾಗುತ್ತಿರುವ ಬಗ್ಗೆ ಮತ್ತು ಕೆಸರು ಮಿಶ್ರಿತ ನೀರು ಪೂರೈಸುತ್ತಿರುವ ಬಗ್ಗೆ ನಗರ ಪಂಚಾಯತ್‌ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.

ಹಳೆಯ ಘಟಕ
ನಾಲ್ಕು ದಶಕಗಳಷ್ಟು ಹಳೆಯ ಶುದ್ಧೀಕರಣ ಘಟಕದಿಂದ ಸಮರ್ಪಕ ವಾಗಿ ನೀರು ಶುದ್ಧೀಕರಿಸಿ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಹೊಸ ಘಟಕ ಸ್ಥಾಪಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಮಂಜೂರಾಗಿಲ್ಲ ಎಂದು ನ. ಪಂಚಾಯತ್‌ ಮುಖ್ಯಾಧಿಕಾರಿ ಎಂ.ಆರ್‌. ಸ್ವಾಮಿ ಹಾಗೂ ಎಂಜಿನಿಯರ್‌ ಶಿವಕುಮಾರ್‌ ವಿವರಿಸಿದರು.

ಇದನ್ನೂ ಓದಿ:ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡುವುದು ನಗರ ಪಂಚಾಯತ್‌ನ ಜವಾಬ್ದಾರಿ. ಅದಕ್ಕಾಗಿ ದೂರದೃಷ್ಟಿಯ ಯೋಜನೆ ಗಳನ್ನು ರೂಪಿಸಿ ಅನುಷ್ಠಾನ ಮಾಡಬೇಕು. ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ಕೂಡಲೇ ಪರೀಕ್ಷೆ
ನಡೆಸಿ ವರದಿ ಕೊಡಿ
ಸರಬರಾಜು ಮಾಡುತ್ತಿರುವ ನೀರನ್ನು ಪರೀಕ್ಷೆಗೆ ಒಳಪಡಿಸಿ ತತ್‌ಕ್ಷಣ ವರದಿ ಸಲ್ಲಿಸಬೇಕು. ಶುದ್ಧ ನೀರು ಸರಬರಾಜಿಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ನ್ಯಾಯಾಧೀಶರು ಎಂಜಿನಿಯರ್‌ಗೆ ಸೂಚಿಸಿದರು.

ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ, ನ.ಪಂ. ಸದಸ್ಯರಾದ ಎಂ. ವೆಂಕಪ್ಪ ಗೌಡ, ಉಮ್ಮರ್‌, ಪ್ರಮುಖರಾದ ಸುಂದರ ಪಾಟಾಜೆ, ಉನೈಸ್‌ ಪೆರಾಜೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.