ಉಜಿರೆ ಎಸ್‌ಡಿಎಂ ಕಾಲೇಜಿಗೆ ಅಗ್ರ ಶ್ರೇಯಾಂಕ; ಇಂಡಿಯಾಟುಡೇ ನಿಯತಕಾಲಿಕೆಯ ರಾಷ್ಟ್ರೀಯ ಸಮೀಕ್ಷೆ


Team Udayavani, Jul 1, 2020, 6:02 AM IST

SDM-College

ಬೆಳ್ತಂಗಡಿ: ಪ್ರಸಕ್ತ ವರ್ಷ ಇಂಡಿಯಾ ಟುಡೇ ಶೈಕ್ಷಣಿಕ ಕೋರ್ಸ್‌ಗಳ ನಿರ್ವಹಣ ಸಾಧನೆಯ ಅಂಶಗಳನ್ನು ಪರಿಗಣಿಸಿ ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜು ಅಗ್ರ ಶ್ರೇಯಾಂಕ ಪಡೆದು ಮನ್ನಣೆ ಗಳಿಸಿದೆ.

ಸಮೀಕ್ಷೆಯ ಎಲ್ಲ ಮಾಪನಾಂಶಗಳನ್ವಯ ಕಾಲೇಜಿನ ಬಿಸಿಎ ವಿಭಾಗವು ಅಗ್ರಮಾನ್ಯ ಶ್ರೇಯಾಂಕದೊಂದಿಗೆ ಮುಂಚೂಣಿ ಪ್ರಾಶಸ್ತ್ಯ ಪಡೆದು ಗಮನ ಸೆಳೆದಿದೆ.

ರಾಷ್ಟ್ರದ ಪದವಿ, ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭಿಸುತ್ತಿರುವ ವಿವಿಧ ಕೋರ್ಸ್‌ಗಳ ನಿರ್ವಹಣೆ ಮತ್ತು ಸಾಧನೆಯನ್ನು ಅಳೆಯಲು ಇಂಡಿಯಾ ಟುಡೇ ನಿಯತಕಾಲಿಕವು ಈ ಸಮೀಕ್ಷೆ ನಡೆಸಿತ್ತು. ಜುಲೈ 6ರ ವಿಶೇಷ ಸಂಚಿಕೆಯಲ್ಲಿ ಈ ಕುರಿತ ಸಮಗ್ರ ಮಾಹಿತಿ ಪ್ರಕಟಿಸಿದೆ.

ಬಿಸಿಎ ಮುಂಚೂಣಿಯಲ್ಲಿ
ಎಸ್‌ಡಿಎಂ ಕಾಲೇಜಿನ ಬಿಸಿಎ ವಿಭಾಗವು ಎಲ್ಲ ಮಾಪನಾಂಶಗಳ ಅನ್ವಯ ಮುಂಚೂಣಿ ಸಾಧನೆ ತನ್ನದಾಗಿಸಿಕೊಂಡಿದೆ. ಈ ಶತಮಾನದ ಭಾರತದ ಉದಯೋನ್ಮುಖ ಸಂಸ್ಥೆ (Emerging Colleges of
the Century) ಎಂಬ ಮಾನದಂಡದಡಿ ಐದನೇ ರ್‍ಯಾಂಕ್‌ತನ್ನದಾಗಿಸಿ ಕೊಳ್ಳಲು ಈ ವಿಭಾಗದ ಕೊಡುಗೆ ಕಾರಣವಾಗಿದೆ.

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಪ್ರಮಾಣವಾರು ಸಾಧನೆಯಲ್ಲಿ 3ನೇ ರ್‍ಯಾಂಕ್‌ ಪಡೆದಿದೆ. ಅತ್ಯಂತ ಕಡಿಮೆ ಶುಲ್ಕ ನಿಗದಿಗೊಳಿಸಿದ ಕಾಲೇಜುಗಳ ಪಟ್ಟಿಯಲ್ಲಿ 6ನೇ ರ್‍ಯಾಂಕ್‌ ಪಡೆಯುವುದಕ್ಕೆ ಸಹಾಯಕವಾಗಿದೆ. ಪಾವತಿಸಿದ ಶುಲ್ಕಕ್ಕೆ ಅನುಗುಣವಾದ ಗುಣಮಟ್ಟದ ಶಿಕ್ಷಣ ನೀಡಿದ ಕಾಲೇಜು ಗಳ ಪಟ್ಟಿಯಲ್ಲಿ 5ನೇ ರ್‍ಯಾಂಕ್‌ ತನ್ನದಾಗಿಸಿಕೊಂಡಿದೆ.

ಕಡಿಮೆ ಶುಲ್ಕ ನಿಗದಿಗೊಳಿಸಿದ ಕೋರ್ಸ್‌ಗಳ ಪಟ್ಟಿಯಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು 8ನೇ ರ್‍ಯಾಂಕ್‌, ಪಾವತಿ ಸಿದ ಶುಲ್ಕಕ್ಕನುಗುಣವಾದ ಗುಣ ಮಟ್ಟದ ಶಿಕ್ಷಣದ ಮಾಪನಾಂಶದ ಪಟ್ಟಿಯಲ್ಲಿ 4ನೇ ರ್‍ಯಾಂಕ್‌ ಗಳಿಸಿದೆ.

ಬಿಬಿಎ ವಿಭಾಗವು ಕಡಿಮೆ ಶುಲ್ಕದ ಕೋರ್ಸ್‌ಗಳ ಪಟ್ಟಿಯಲ್ಲಿ 8ನೇ ರ್‍ಯಾಂಕ್‌ ಪಡೆದಿದೆ. ವಿದ್ಯಾರ್ಥಿ – ವಿದ್ಯಾರ್ಥಿನಿಯರ ಪ್ರಮಾಣವಾರು ದಾಖಲಾತಿ ದೃಷ್ಟಿಯಿಂದ ಕಲಾ ವಿಭಾಗವು ಮೊದಲ ರ್‍ಯಾಂಕ್‌ ಗಳಿಸಿದೆ. ಕಾಲೇಜಿಗೆ ಲಭಿಸಿದ ಈ ಮನ್ನಣೆಗೆ ಸಂಸ್ಥೆಯ ಅಧ್ಯಕ್ಷ ಡಾ| ವೀರೇಂದ್ರ ಹೆಗ್ಗಡೆ ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲ ಡಾ| ಸತೀಶ್ಚಂದ್ರ ಎಸ್‌. ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.