ಯರುಕೋಣೆ ಸೀಡ್‌ ಬಾಲ್‌ ತಯಾರಿಕೆ


Team Udayavani, Jun 5, 2018, 8:58 PM IST

seed-ball-5-6.jpg

ಬೈಂದೂರು: ದಿವಂಗತ ನೆಲ್ಯಾಡಿ ನಾರಾಯಣ ಶೆಟ್ಟಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಆರ್‌.ಜೆ.ನಯನಾ ಶೆಟ್ಟಿಯವರು ಯರುಕೋಣೆಯಲ್ಲಿ ಆಯೋಜಿಸಿದ ಸೀಡ್‌ ಬಾಲ್‌ ತಯಾರಿಕೆ ಮತ್ತು ಸೀಡ್‌ ಬಾಲ್‌ ವಿತರಣೆ ಕಾರ್ಯಕ್ರಮ ಜರಗಿತು.


ಪರಿಸರ ಸಂರಕ್ಷಣೆ ನಮ್ಮ ಆದ್ಯತೆಯಾಗಬೇಕು. ಗಿಡವನ್ನು ನೆಟ್ಟರೆ ಸಾಲದು, ಅದನ್ನು ಸಂರಕ್ಷಿಸಿ ಬೆಳೆಸುವ ಕೆಲಸ ಮಾಡಬೇಕಿದೆ. ನಮ್ಮ ಪರಿಸರದ ಸ್ವಚ್ಛತೆ ದಿನನಿತ್ಯದ ವಿಚಾರವಾಗಬೇಕು. ಹಸಿರಿನಿಂದ ಉಸಿರು ಎನ್ನುವುದನ್ನು  ಮರೆಯಬಾರದು. ಇತ್ತೀಚಿನ ದಿನಗಳಲ್ಲಿ ಗಿಡ ನೆಡುವುದು ಫ್ಯಾಶನ್ ಆಗಿದೆ. ಅದರ ಫೋಟೋ ಹಾಕಿ ಪ್ರಚಾರ ಪಡೆಯುವುದಷ್ಟೇ ಗುರಿಯಾಗಿದ್ದು ,ನೆಟ್ಟ ಮರುದಿನದಿಂದ ಆ ಗಿಡದ ಸಂರಕ್ಷಣೆಯ ಬಗ್ಗೆ  ಯಾವುದೇ ಗಮನಹರಿಸುವುದಿಲ್ಲ .ನೆಡುವುದರ ಜೊತೆಗೆ ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು.ನಮ್ಮ ಪಶ್ಚಿಮ ಘಟ್ಟಗಳ ಕಾಡುಗಳನ್ನು ನಾವು ಸಂರಕ್ಷಿಸಿದರೆ ಮಾತ್ರ ಅಲ್ಲಿ ಹುಟ್ಟುವ ನಮ್ಮ ನದಿ ಮೂಲಗಳು ಉಳಿಯಲು ಸಾಧ್ಯ ಆ ನಿಟ್ಟಿನಲ್ಲಿ ನಾವೆಲ್ಲರೂ ಅದರ ಸಂರಕ್ಷಣೆಯ ಹೊಣೆ ಹೊರುವುದರ ಜೊತೆಗೆ ಪರಿಸರಕ್ಕೆ ನಮ್ಮದೇ ಆದ ಕೊಡುಗೆಯನ್ನು ನೀಡಬೇಕು ಎಂದು  ಸಹ್ಯಾದ್ರಿ ಸಂರಕ್ಷಣಾ ಸಮಿತಿಯ ಸಂಚಾಲಕರು,ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಮಂಗಳೂರು ಹೇಳಿದರು.

ಈ ವೇಳೆ ಮಾತಾಡಿದ ಸಾಸ್ತಾನ ಮಿತ್ರರು ತಂಡದ ಸ್ಥಾಪಕ ಅಧ್ಯಕ್ಷ  ಪರಿಸರ ಪ್ರೇಮಿ ವಿನಯಚಂದ್ರ  ಸಾಸ್ತಾನ ಶಾಲಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ತಮ್ಮ ಜನುಮ ದಿನದಂದು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ನಾವು ಕಲಿತ ಶಾಲೆಯಲ್ಲಿ ಹಾಗೂ ನಮ್ಮ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಣ್ಣಿನ ಗಿಡಗಳು ಅಥವಾ ಔಷಧಿ ಗಿಡಗಳನ್ನು ನೆಟ್ಟರೆ ಅದು ನಮ್ಮ ಮುಂದಿನ ಪೀಳಿಗೆಗೆ ಸಹಕಾರಿಯಾಗುತ್ತದೆ ಎಂದರು. ಸೀಡ್ ಬಾಲ್ ತಯಾರಿಸುವುದರಿಂದ ಸಸಿ ಬೆಳೆಸಲು ಅನುಕೂಲವಾಗುತ್ತದೆ, ಅಲ್ಲದೇ ಸಸಿಗಳು ತಮ್ಮಷ್ಟಕ್ಕೆ ತಾವೇ ನೆಲ ಸೇರುವುದರಿಂದ ಸಸಿ ನೆಡುವ ಶ್ರಮ ಇಲ್ಲದಂತಾಗುತ್ತದೆ. ಹಾಗೆಯೇ ಉಂಡೆಗಳನ್ನು ಎಸೆದ ಸ್ಥಳದಲ್ಲಿ ಸ್ವಯಂ ಸಸ್ಯ ವಾಗುವ ಅದು ತನ್ನ ಬೆಳವಣಿಗೆಯ ದಾರಿಯನ್ನು ತಂತಾನೇ ಕಂಡುಕೊಳ್ಳುತ್ತದೆ.ಮುಂದಿನ ದಿನಗಳಲ್ಲಿ ಹೆಮ್ಮರಗಳಾಗಿ ಅವುಗಳೇ ನಮ್ಮ ರಕ್ಷಣೆ ನೀಡುತ್ತವೆ ಎಂದು  ಹೇಳಿದರು.


ಊರಿನ ಜನ ಹಾಗೆ ಮಕ್ಕಳು ಬಹಳ ಪ್ರೀತಿಯಿಂದ  ಸೇರಿಕೊಂಡು ಬೀಜದುಂಡೆಗಳನ್ನು ತಯಾರಿಸಿ ಖುಷಿ ಪಟ್ಟರು.ಈ ಸಂದರ್ಭದಲ್ಲಿ ಯರುಕೋಣೆ ಆಲಗದ್ದೆ ಕೇರಿ ಸ.ಕಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಯ ಅಣ್ಣು, ಯರುಕೋಣೆ ಭಾಗದ ಅರಣ್ಯ ರಕ್ಷಕ ಜನಾರ್ದನ ಬೈಂದೂರು ಉಪಸ್ಥಿತರಿದ್ದರು. ಯರುಕೊಣೆ ಆಲಗದ್ದೆ ಕೇರಿ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಅಣ್ಣು,ಅರಣ್ಯ ರಕ್ಷಕ ಜನಾರ್ದನ ಬೈಂದೂರು ಮೊದಲಾದವರು ಉಪಸ್ಥಿತರಿದ್ದರು. 98.3 ರೆಡ್‌ ಎಫ್‌ ಎಂ ಖ್ಯಾತಿಯ ನಿರೂಪಕಿ ಆರ್‌.ಜೆ. ನಯನಾ ಶೆಟ್ಟಿ ಯರುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

4(1)

Thekkatte: ನವರಾತ್ರಿಗೆ ಮತ್ತೆ ಹೊಸತು ಬರುತಿದೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.