ನಗರದ ಶಾಲೆಗಳಲ್ಲಿ ಹಾರಾಡಲಿವೆ ಬೀಜ ಧ್ವಜ !

ಕರ್ನಾಟಕ ರಾಜ್ಯೋತ್ಸವಕ್ಕೆ ಪರಿಸರಸ್ನೇಹಿ ಬಾವುಟ

Team Udayavani, Oct 31, 2019, 5:08 AM IST

e-11

ಮಹಾನಗರ: ಪ್ಲಾಸ್ಟಿಕ್‌ ಬಾವುಟಗಳನ್ನು ತ್ಯಜಿಸಿ ಬಟ್ಟೆಯ ಬಾವುಟಗಳನ್ನು ಹಿಡಿದಿದ್ದಾಯಿತು. ಇದೀಗ ಈ ರಾಜ್ಯೋತ್ಸವ ಸಂದರ್ಭ ಮಂಗಳೂರಿನ ಶಾಲೆಗಳಲ್ಲಿ ಬೀಜ ಬಾವುಟ ಗಳು ಹಾರಾ ಡಲಿವೆ. ವಿಶೇಷವೆಂದರೆ, ಬಾವುಟಗಳೇ ಸುಂದರ ಸಸ್ಯಗಳಾಗಿ ರೂಪು ತಳೆದು ಕಡಲನಾಡಿನ ಜನತೆಗೆ ಉಸಿರಾಟಕ್ಕೆ ಶುದ್ಧ ವಾಯು, ಸೇವನೆಗೆ ಆಹಾರ ಒದಗಿಸಲಿವೆ!

ಪರಿಸರಸ್ನೇಹಿ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರುವ ನಗರದ ಇಕೋ ಫ್ರೆಂಡ್ಸ್‌ ತಂಡವು ಈ ಕರ್ನಾಟಕ ರಾಜ್ಯೋತ್ಸವಕ್ಕೆ ಬೀಜ ಬಾವುಟಗಳನ್ನು ತಯಾರಿಸಿದ್ದು, ಇದೇ ಮೊದಲ ಬಾರಿಗೆ ನಗರದ ಶಾಲೆಗಳಲ್ಲಿ ಬೀಜ ಬಾವುಟವನ್ನು ಅರಳಿಸಲು ಪ್ರೇರಣೆ ನೀಡಿದೆ.

ಬಾವುಟ ತಯಾರಿ
ಕನ್ನಡ ಬಾವುಟದ ಬಣ್ಣವಾದ ಕೆಂಪು, ಹಳದಿ ಬಣ್ಣದ ಪೇಪರ್‌ಗಳಲ್ಲಿ ಈ ಬಾವುಟಗಳನ್ನು ತಯಾರಿಸಲಾಗಿದೆ. ಬಾವುಟವು 3 ಇಂಚು ಉದ್ದ ಮತ್ತು 2 ಇಂಚು ಅಗಲ ಇರುತ್ತದೆ. ಮುಂದಿನ ಭಾಗದಲ್ಲಿ ಎರಡು ಬಣ್ಣದ ಪೇಪರ್‌ಗಳು, ನಡುವೆ ತರಕಾರಿ ಬೀಜಗಳು, ಹಿಂದಿನ ಭಾಗದಲ್ಲಿ ಬಿಳಿ ಬಣ್ಣದ ಬಣ್ಣದ ಪೇಪರ್‌ಗಳನ್ನು ಅಂಟಿಸಿ ಅದಕ್ಕೆ ಪಿನ್‌ ಮಾಡಲಾಗಿದೆ. ಪೇಪರ್‌ಗಳು ಮಣ್ಣಿನಲ್ಲಿ ಸುಲಭವಾಗಿ ಕರಗುವ ಗುಣ ಹೊಂದಿರುವುದರಿಂದ ಮಕ್ಕಳು ಬಾವುಟ ಬಳಕೆ ಮಾಡಿದ ನಂತರ ಈ ಪೇಪರ್‌ಗಳನ್ನು ಪಾಟ್‌ ಅಥವಾ ಮಣ್ಣಿನಲ್ಲಿ ನೇರವಾಗಿ ಹಾಕಬಹುದು. ಕೆಲವು ದಿನಗಳ ಅನಂತರ ಈ ಪೇಪರ್‌ ಮಣ್ಣಿನಲ್ಲಿ ಕರಗಿ ಬೀಜ ಮೊಳಕೆ ಯೊಡೆಯಲು ಆರಂಭಿಸುತ್ತದೆ. ಪ್ರತಿ ದಿನ ನೀರು ಹಾಕುತ್ತಿರಬೇಕು. ಕ್ರಮೇಣ ಮೊಳಕೆಯೊಡೆದ ಬೀಜ ಗಿಡವಾಗಿ ರೂಪು ತಳೆದು ಫಲಭರಿತವಾಗುತ್ತದೆ ಎಂಬುದು ತಂಡದ ಯೋಜನೆ.

ತರಕಾರಿ ಬೀಜಗಳು
ಈ ಬಾರಿ ತರಕಾರಿ ಬೀಜಗಳನ್ನೇ ಬಾವುಟದಲ್ಲಿ ಇಡಲಾಗಿದೆ. ಟೊಮೇ ಟೊ, ಬೆಂಡೆ, ಸೌತೆ ಮತ್ತು ಹರಿವೆ ಬೀಜ ಗಳನ್ನು ಬಾವುಟದೊಳಗಿಟ್ಟು ಬಾವುಟ ತಯಾರಿಸಲಾಗಿದೆ. ಈ ಬೀಜಗಳು ಬಹುಬೇಗನೆ ಮೊಳಕೆ ಯೊಡೆಯು ವುದರಿಂದ ಮಕ್ಕಳಿಗೂ ಇಷ್ಟವಾಗಬಹುದು ಎನ್ನುವ ಉದ್ದೇಶ ತಂಡದ್ದು.

ಪ್ಲಾಸ್ಟಿಕ್‌ ತ್ಯಜಿಸಿ ಪರಿಸರ ಉಳಿಸಿ
ರಸ್ತೆ ಬದಿಗಳಲ್ಲಿ, ಕೆಲ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬಾವುಟಗಳನ್ನು ಮಾರಾಟ ಮಾಡುವುದರಿಂದ ಅದು ರಸ್ತೆಯಲ್ಲಿ ಬಿದ್ದು ಅಥವಾ ಕಸದ ತೊಟ್ಟಿಗಳ ಮೂಲಕ ಭೂಮಿ ಒಡಲನ್ನು ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದೆ. ಇದರಿಂದ ಜೀವಸಂಕುಲದ ಮೇಲೆಯೂ ಪರಿಣಾಮ ಉಂಟಾಗುತ್ತದೆ. ಜೈವಿಕ ಕಾಗದ ಬೀಜ ಬಾವುಟಗಳು ಪರಿಸರಕ್ಕೆ ಉತ್ತಮ ಎಂಬ ಉದ್ದೇಶದಿಂದ ಈ ಬೀಜ ಬಾವುಟ ತಯಾರಿಸಲಾಗಿದೆ.

5 ಶಾಲೆ; 500 ಬೀಜ ಬಾವುಟ ಹಾರಾಟ
ಪ್ರಾಯೋಗಿಕವಾಗಿ ಈ ವರ್ಷ ಬೀಜದ ಬಾವುಟಗಳನ್ನು ತಯಾರಿಸಲಾಗಿದ್ದು, ನಗರದ 5 ಶಾಲೆಗಳ ಮಕ್ಕಳಿಗೆ ಗುರುವಾರ ಬಾವುಟಗಳನ್ನು ಉಚಿತವಾಗಿ ನೀಡಲಾಗುತ್ತದೆ. ಉರ್ವ ಕೆನರಾ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಉರ್ವ ಸರಕಾರಿ ಶಾಲೆ, ಡೊಂಗರಕೇರಿ ಕೆನರಾ ಶಾಲೆ, ಕದ್ರಿ ಸರಕಾರಿ ಶಾಲೆಗಳಲ್ಲಿ ನ. 1ರ ಕರ್ನಾಟಕ ರಾಜ್ಯೋತ್ಸವದಂದು ಈ ಬಾವುಟಗಳು ಹಾರಾಡಲಿವೆ. ಈಗಾಗಲೇ 600 ಬಾವುಟಗಳನ್ನು ತಯಾರಿಸಲಾಗಿದ್ದು, ಈ ಪೈಕಿ 500 ಬಾವುಟಗಳನ್ನು ತಲಾ 100ರಂತೆ 5 ಶಾಲೆಗಳಿಗೆ ನೀಡಲಾಗುತ್ತದೆ. ಉಳಿದ 100 ಬಾವುಟಗಳನ್ನು ಮಣ್ಣಗುಡ್ಡೆ ಸಾವಯವ ಸಂತೆಯಲ್ಲಿ ಇಟ್ಟು ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುವುದು ಎನ್ನುತ್ತಾರೆ ತಂಡದ ಸದಸ್ಯರು.

ಪರಿಸರ ಸ್ನೇಹಿ ಆಚರಣೆ
ಪರಿಸರಸ್ನೇಹಿ ರಾಜ್ಯೋತ್ಸವ ಆಚರಿಸುವ ಉದ್ದೇಶದಿಂದ ಬೀಜ ಬಾವುಟಗಳನ್ನು ತಯಾರಿ ಸಲಾಗಿದೆ. 500 ಬಾವುಟಗಳನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಮುಂದೆ ಆ. 15ರಂದು ಶಾಲೆ ಗಳಲ್ಲೇ ಬೀಜ ಬಾವುಟ ತಯಾರಿ ಸುವಂತೆ ಪ್ರೇರೇಪಿಸುವ ಉದ್ದೇಶವಿದೆ.
– ರಾಜೇಶ್‌, ಇಕೋ ಫ್ರೆಂಡ್ಸ್‌ ಗ್ರೂಪ್‌

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.