‘ಮಾಧ್ಯಮದಲ್ಲಿ ಸ್ವನಿಯಂತ್ರಣ ಅಗತ್ಯ’


Team Udayavani, Nov 22, 2017, 9:45 AM IST

22-Nov-1.jpg

ನಂತೂರು: ಮಾಧ್ಯಮಗಳು ಪ್ರಜ್ಞಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಇವುಗಳಿಗೆ ಲಗಾಮು ಹಾಕುವ ಅನಿವಾರ್ಯತೆ ಇಲ್ಲ. ಆದರೆ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸ್ವಯಂ ನಿಯಂತ್ರಣದ ಕುರಿತು ಆಲೋಚಿಸುವುದು ಅತಿ ಆವಶ್ಯಕ ಎಂದು ನಗರದ ನಂತೂರು ಸಂದೇಶ ಪ್ರತಿಷ್ಠಾನದಲ್ಲಿ ಜರಗಿದ ‘ಮಾಧ್ಯಮಗಳಿಗೆ ಬೇಕೇ ಲಗಾಮು’ ಎಂಬ ವಿಷಯದ ಕುರಿತ ಸಂವಾದಗೋಷ್ಠಿಯಲ್ಲಿ ವಿಷಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದರು. ಮಾಮ್‌ ಮಂಗಳೂರು ಹಾಗೂ ಸಂದೇಶ ಪ್ರತಿಷ್ಠಾನ ಜಂಟಿಯಾಗಿ ಮಂಗಳವಾರ ಈ ಸಂವಾದಗೋಷ್ಠಿಯನ್ನು ಆಯೋಜಿಸಿತ್ತು.

ಉದ್ಘಾಟಿಸಿದ ಮಂಗಳೂರು ವಿವಿ ಎಂಸಿಜೆ ವಿಭಾಗದ ಪ್ರಾಧ್ಯಾಪಕ ಡಾ| ಜಿ.ಪಿ. ಶಿವರಾಮ್‌ ಮಾತನಾಡಿ, ಮಾಧ್ಯಮಗಳು ಜನರನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊಂದಿದ್ದು, ತಮ್ಮ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕಿದೆ. ಪ್ರಸ್ತುತ ದಿನಗಳಲ್ಲಿ ತನಿಖಾ ವರದಿಗಳು ಮಾಯವಾಗಿದ್ದು, ಪತ್ರಕರ್ತರು ಸ್ವಂತಿಕೆಯತ್ತ ಆಲೋಚಿಸಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ| ವಿಕ್ಟರ್‌ ವಿಜಯ್‌ ಲೋಬೋ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮವು ಉಳಿದ ಮೂರು ಅಂಗಗಳ ಕೆಲಸ ನಿರ್ವಹಿಸಲು ಹೋದರೆ ಜನರನ್ನು ತಪ್ಪು ದಾರಿಗೆಳೆದಂತಾಗುತ್ತದೆ. ಮಾಧ್ಯಮಗಳು ಜನರಿಗೆ ಯಾವ ಸಂದೇಶವನ್ನು ನೀಡುತ್ತಿವೆ ಎಂಬುದನ್ನು ವಿಮರ್ಶಿಸುವುದು ಆವಶ್ಯಕ ಎಂದರು.

ಬಳಿಕ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಯಿತು. ಮಾಮ್‌ ಉಪಾಧ್ಯಕ್ಷ ಡಾ| ರೊನಾಲ್ಡ್‌ ಅನಿಲ್‌ ಫೆರ್ನಾಂಡಿಸ್‌
ಸಂವಾದವನ್ನು ನಿರ್ವಹಿಸಿದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರನ್ನು ಗೌರವಿಸಲಾಯಿತು. ಕಾರ್ಯದರ್ಶಿ ವೇಣುವಿನೋದ್‌ ಕೆ.ಎಸ್‌.ಸ್ವಾಗತಿಸಿದರು. ಸದಸ್ಯೆ ಸ್ಮಿತಾ ಶೆಣೈ ನಿರ್ವಹಿಸಿದರು.

ಹಿಂದಿನ ಕಾಲಕ್ಕೆ ಹೋಲಿಸಿದರೆ ಮಾಧ್ಯಮಗಳಲ್ಲಿ ಸಾಕಷ್ಟು ಬದಲಾವಣೆ ಆಗಿದ್ದು, ತಂತ್ರಜ್ಞಾನಗಳು ವ್ಯವಸ್ಥೆ ಯನ್ನು ಅಲ್ಲೋಲಕಲ್ಲೋಲ ಮಾಡುತ್ತಿವೆಯೇ ಎಂಬ ಆತಂಕಗಳಿವೆ. ನಾವು ಕೊಡುವ ಸುದ್ದಿ ಸಮಾಜಕ್ಕೆ ಧಕ್ಕೆ ತರುತ್ತಿದೆಯೇ ಎಂದು ಸ್ವವಿಮರ್ಶೆ ಮಾಡಿಕೊಳ್ಳಬೇಕು.
ಚಿದಂಬರ ಬೈಕಂಪಾಡಿ , ಹಿರಿಯ ಪತ್ರಕರ್ತ

ಮಾಧ್ಯಮಗಳು ಸರಕಾರ ಹಾಗೂ ಜನರ ನಡುವಿನ ಸೇತುವೆಯಾಗಿರುವುದರಿಂದ ಇದರ ಜವಾಬ್ದಾರಿ ಸಾಕಷ್ಟಿವೆ. ಮಾಧ್ಯಮಕ್ಕೆ ಇತರರು ನಿಯಂತ್ರಣ ಹೇರುವುದಕ್ಕಿಂತಲೂ ಸ್ವನಿಯಂತ್ರಣಕ್ಕೆ ಆದ್ಯತೆ ನೀಡಬೇಕಿದೆ.
ಫಾ| ರಿಚರ್ಡ್‌ ಡಿ’ ಸೋಜಾ, ಮಾಧ್ಯಮ ಚಿಂತಕ

ಮಾಧ್ಯಮಗಳು ಕಾನೂನಿನ ಚೌಕಟ್ಟನ್ನು ತಿಳಿದುಕೊಂಡು ಮುಂದುವರಿಯುವುದು ಅತಿ ಅಗತ್ಯವಾಗಿದ್ದು, ಯಾವುದೇ ಸುದ್ದಿ ಬರೆಯುವಾಗಲೂ ಕಾನೂನನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕಿದೆ.
ಸಂತೋಷ್‌ ಪೀಟರ್‌ ಡಿ’ ಸೋಜಾ, ನ್ಯಾಯವಾದಿ

ಆಡಳಿತ ವ್ಯವಸ್ಥೆಯೇ ಹದಗೆಡುತ್ತಿರುವಾಗ ನಾವು ಮಾಧ್ಯಮದ ಮೇಲೆ ಆರೋಪ ಹೊರಿಸುವುದು ಅಪ್ರಸ್ತುತವಾಗುತ್ತದೆ. ವ್ಯವಸ್ಥೆ ಹಿಂದಿನ ಮಾಫಿಯಾ ನಿಯಂತ್ರಿಸು ವಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ.
 –ದಿನೇಶ್‌ ಹೊಳ್ಳ, ಸಾಮಾಜಿಕ ಹೋರಾಟಗಾರ 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.