ಗ್ರಾಹಕ ಸೇವೆಗಳಿಗೆ ಶೀಘ್ರ ಬರಲಿದೆ ಪ್ರತ್ಯೇಕ ಆ್ಯಪ್‌


Team Udayavani, Jul 29, 2021, 4:20 AM IST

Untitled-1

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ಕೊನೆಗೂ ಡಿಜಿಟಲ್‌ ವ್ಯವಸ್ಥೆಯತ್ತ ಒಗ್ಗಿಕೊಳ್ಳುತ್ತಿದ್ದು, ಪಾಲಿಕೆ ಸೇವೆಗಳನ್ನು ಆನ್‌ಲೈನ್‌ ಮುಖೇನ ರೂಪಿಸಲು ಮುಂದಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ನೀರಿನ ಬಿಲ್‌, ಉದ್ದಿಮೆ ಪರವಾನಿಗೆ ಆನ್‌ಲೈನ್‌ ಮುಖೇನ ಕಾರ್ಯನಿರ್ವ ಹಿಸುತ್ತಿದ್ದು, ಇದೀಗ ಆ ಸಾಲಿಗೆ ಆಸ್ತಿ ತೆರಿಗೆ ಕೂಡ ಸೇರಲಿದೆ. ಇದರೊಂದಿಗೆ ಇಂದಿನ ಅಗತ್ಯಗಳಿಗೆ ತಕ್ಕಂತೆ ಆನ್‌ಲೈನ್‌ ವ್ಯವಸ್ಥೆಗೆ ಒಗ್ಗಿಕೊಳ್ಳಲು ಮನಪಾ ನಿರ್ಧರಿಸಿದೆ. ಆಸ್ತಿ ತೆರಿಗೆ ಪಾವತಿಗೆ ಪ್ರತ್ಯೇಕ ಆ್ಯಪ್‌ ಕುರಿತಂತೆ ಕಿಯೋನಿಕ್ಸ್‌ ಸಂಸ್ಥೆಯ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಪ್ರತ್ಯೇಕ ಆ್ಯಪ್‌ ರೂಪುಗೊಳ್ಳುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ರೂಪಿತಗೊಂಡಂತಹ ನೀರಿನ ಬಿಲ್‌ ಆನ್‌ಲೈನ್‌ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಲಾಕ್‌ಡೌನ್‌ ವೇಳೆ ಅನೇಕ ಮಂದಿ ಪಾಲಿಕೆಗೆ ಬಂದು ನೀರಿನ ಬಿಲ್‌ ಪಾವತಿಸಲು ಕಷ್ಟವಾಗುತ್ತಿತ್ತು. ಈ ವೇಳೆ ಆನ್‌ಲೈನ್‌ ವ್ಯವಸ್ಥೆಯ ಲಾಭ ಪಡೆದಿದ್ದಾರೆ. ಅದೇ ರೀತಿ, ಮನೆಯಲ್ಲಿ ಇಬ್ಬರಿದ್ದು, ಕೆಲಸಕ್ಕೆ ತೆರಳುವ ಮಂದಿ ಪಾಲಿಕೆ ಆಗಮಿಸಿ ಹಣ ಪಾವತಿ ಕಷ್ಟ. ಅಂತಹವರೂ ಇದರ ಲಾಭ ಪಡೆಯುತ್ತಿದ್ದಾರೆ. ಇನ್ನು, ಈ ಹಿಂದೆ ಉದ್ದಿಮೆ ಪರವಾನಿಗೆಗೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಆದರೆ ಇದೀಗ ಆ್ಯಪ್‌ ಮುಖೇನ ಈ ವ್ಯವಸ್ಥೆ ನೀಡಲಾಗಿದ್ದು, ಸಾರ್ವಜನಿಕರಿಗೆ ಉಪಯೋಗವಾಗಿದೆ. ಆ್ಯಪ್‌ನಲ್ಲಿ ಈಗಾಗಲೇ ಇರುವಂತಹ ಕೆಲವೊಂದು ನ್ಯೂನತೆಗಳನ್ನು ಸರಿಪಡಿಲು ಪಾಲಿಕೆ ನಿರ್ಧರಿಸಿದೆ.

ಸ್ಮಾರ್ಟ್‌ಸಿಟಿಯಿಂದಲೂ ಪ್ರತ್ಯೇಕ ಆ್ಯಪ್‌:

ಸ್ಮಾರ್ಟ್‌ಸಿಟಿ ಯೋಜನೆಯ ಮುಖೇ ನವೂ ಇದೀಗ “ಒನ್‌ ಟಚ್‌ ಮಂಗಳೂರು’ ಎಂಬ ಆ್ಯಪ್‌ ಸಿದ್ಧಗೊಳ್ಳಲಿದೆ. ಸ್ಮಾರ್ಟ್‌ ಸಿಟಿ ಆಗುವ ಸ್ಥಳವನ್ನು ಕೇಂದ್ರೀಕರಿಸಿ ಈ ಆ್ಯಪ್‌ ಮುಖ್ಯವಾಗಿ ಕಾರ್ಯನಿರ್ವ ಹಿಸಿದರೂ ಕೂಡ, ಪಾಲಿಕೆಯ 60 ವಾರ್ಡ್‌ಗಳಲ್ಲಿಯೂ ಇದು ಕಾರ್ಯಾ ಚರಿಸುವಂತೆ ಮಾಡಬೇಕು ಎನ್ನುವುದು ಸ್ಮಾರ್ಟ್‌ಸಿಟಿ ಆಶಯವಾಗಿದೆ. ಅದರಂತೆ “ಮಂಗಳೂರಿನಲ್ಲಿ ಇವತ್ತು ನೀರಿಲ್ಲ, ವಿದ್ಯುತ್‌ ಇಲ್ಲ, ಕಸ ಸಂಗ್ರಹಕ್ಕೆ ಬರಲ್ಲ, ನಾಳೆ ಒಣಕಸ ಸಂಗ್ರಹಿಸುತ್ತೇವೆ’ ಸಹಿತ ಹೀಗೆ ನಾನಾ ರೀತಿಯ ಸಾರ್ವಜನಿಕ ಮಾಹಿತಿಗಳು ಮಂಗಳೂರು ಜನರ ಮೊಬೈಲ್‌ಗೆ ಬರಲಿದೆ.

ಅದೇ ರೀತಿ, ಪಾನ್‌ಸಿಟಿ ಸೌಲಭ್ಯಗಳು ದೊರೆಯಲಿದೆ. ಸಿಟಿ ಗೈಡ್‌, ಎಮರ್ಜೆನ್ಸಿ ಸರ್ವಿಸ್‌, ಕಟ್ಟಡ ಪರವಾನಿಗೆ, ಸೌಲಭ್ಯಗಳ ಮಾಹಿತಿ, ಪಾರ್ಕಿಂಗ್‌ ಸ್ಥಳಗಳು, ಪಾಸ್‌ಪೋರ್ಟ್‌ ಪರಿಶೀಲನೆ, ಡ್ರೈವಿಂಗ್‌ ಲೈಸೆನ್ಸ್‌ ವಿವರ, ರಸ್ತೆಗಳ ಮಾಹಿತಿ, ನೀರಿನ ಸೌಲಭ್ಯದ ಮಾಹಿತಿ, ಉದ್ದಿಮೆ ಮಾಹಿತಿ, ಪಡಿತರ ವಿವರ, ಮಹಿಳಾ ವಾಣಿ, ಆದಾಯ ವಿವರಗಳು, ಮತದಾರರ ಗುರುತಿನ ಚೀಟಿ, ನಗರ ಪ್ರದಕ್ಷಿಣೆ, ಆರ್‌ಟಿಒ ದಂಡಗಳು, ಕಾಣೆಯಾದವರ ಮಾಹಿತಿ, ಸಾರ್ವಜನಿಕ ಅಹವಾಲು, ವಿಚಾರಣೆ, ದಂಡ ಕಟ್ಟುವ ವಿಧಾನಗಳು, ಉದ್ಯೋಗ ವಿವರಗಳು, ಜನ್ಮದಿನಾಂಕ ಸರ್ಟಿಫಿಕೆಟ್‌, ಆಸ್ಪತ್ರೆ, ಆರೋಗ್ಯ ವಿವರಗಳು ಮೊಬೈಲ್‌ ಆ್ಯಪ್‌ನಲ್ಲಿ ಬರುವ ಸಾಧ್ಯತೆ ಇದೆ.

ಮಹಾನಗರ ಪಾಲಿಕೆಯಲ್ಲಿ ಆನ್‌ಲೈನ್‌ ವ್ಯವಸ್ಥೆಗೆ ಒತ್ತು ನೀಡಲಾಗುವುದು. ನೀರಿನ ಬಿಲ್‌ ಪಾವತಿ, ಉದ್ದಿಮೆ ಪರವಾನಿಗೆ ಈಗಾಗಲೇ ಡಿಜಿಟಲ್‌ ವ್ಯವಸ್ಥೆ ಇದೆ. ಸದ್ಯದಲ್ಲಿಯೇ ಆಸ್ತಿತೆರಿಗೆ ಕೂಡ ಆನ್‌ಲೈನ್‌ ಆಗಲಿದ್ದು, ಈಗಾಗಲೇ ಪ್ರತ್ಯೇಕ ಆ್ಯಪ್‌ ರೂಪುಗೊಳ್ಳುತ್ತಿದೆ. ಇನ್ನು, ಪಾಲಿಕೆಯಲ್ಲಿ ಪೇಪರ್‌ಲೆಸ್‌ ವ್ಯವಸ್ಥೆಗೂ ಒತ್ತು ನೀಡಲಾಗುತ್ತಿದೆ. –ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.