ಶಾಂತಿಮೊಗರು: ಸೆಲ್ಫಿ ಪ್ರಿಯರ ತಾಣವಾದ ನೂತನ ಸೇತುವೆ 


Team Udayavani, Jun 17, 2018, 2:25 PM IST

17-june-10.jpg

ಆಲಂಕಾರು: ಕುಮಾರಧಾರಾ ನದಿಗೆ ಶಾಂತಿಮೊಗರು ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆ ಈಗ ಸೆಲ್ಫಿ ಹಾಗೂ ಮೊಬೈಲ್‌ ಚಿತ್ರೀಕರಣದ ತಾಣವಾಗಿದೆ. ಧಾರಾಕಾರ ಸುರಿಯುವ ಮಳೆಯಿಂದಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆ ಯುವಕರು ಅಪಾಯಕಾರಿ ಭಂಗಿಗಳಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿ ಲೈಕ್‌, ಕಾಮೆಂಟ್‌ ಗಳಿಸುವ ಭರದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ.

ಎಚ್ಚರಿಸಿದರೂ ಲೆಕ್ಕಕ್ಕಿಲ್ಲ
ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ನದಿ, ಹಳ್ಳ, ಹೊಳೆಗಳ ಅಂಚಿನಲ್ಲಿ, ಸೇತುವೆಗಳ ಮಧ್ಯಭಾಗಗಳಲ್ಲಿ ನಿಂತು ಸೆಲ್ಫಿ ತೆಗೆಯುವ ಹುಚ್ಚಾಟದಿಂದಾಗಿ ಕೆಲವು ಯುವಕ – ಯುವತಿಯರು ತಮ್ಮ ಸಾವನ್ನು ತಾವೇ ಆಹ್ವಾನಿಸಿಕೊಳ್ಳುತ್ತಿದ್ದಾರೆ. ಕಡಬ ಸಮೀಪದ ಹೊಸ್ಮಠದಲ್ಲಿ ಹಳೆಯ ಸೇತುವೆ ಮುಳುಗಿದಾಗ, ನೆಟ್ಟಣ ಸೇತುವೆಯ ಮೇಲೆ ನೆರೆ ನೀರು ನಿಂತಾಗ ಸೇತುವೆಯಲ್ಲಿ ಸೆಲ್ಫಿ ತೆಗಯುವ ಹುಚ್ಚು ಸಾಹಸಕ್ಕೆ ಇಳಿದವರನ್ನು ಸಾರ್ವಜನಿಕರೇ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಗಳು ನಡೆದಿವೆ. ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಸ್ವಲ್ಪ ಯಾಮಾರಿದರೂ ನದಿ ನೀರಿನಲ್ಲಿ ಲೀನವಾಗುವ ಸಂಭವ ಇರುವಾಗ ಸೇತುವೆ, ಹೊಳೆಗಳ ಬಳಿ ರಕ್ಷಣೆಯೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಂತಿಮೊಗರು ಸೇತುವೆ
ನೂತನ ಸೇತುವೆ ಸಂಪರ್ಕಕ್ಕೆ ಮುಕ್ತವಾದ ಬಳಿಕ ಪುತ್ತೂರಿಗೆ ಸಂಪರ್ಕ ಬೆಳೆಸಲು ಕಡಬ, ಬಲ್ಯ, ಕುಂತೂರು ಹಾಗೂ ಆಲಂಕಾರು ವ್ಯಾಪ್ತಿಯ ಜನತೆಗೆ ಇದು ಬಹಳಷ್ಟು ಹತ್ತಿರದ ಮಾರ್ಗವಾಗಿದೆ. ಈ ಭಾಗದಲ್ಲಿ ವಾಹನಗಳ ದಟ್ಟನೆ ಅಷ್ಟೊಂದಿಲ್ಲ. ಜನಸಂಚಾರವೂ ಕಡಿಮೆಯಿರುವ ಕಾರಣ ಸೆಲ್ಫಿ ಪ್ರಿಯರಿಗೆ ಈ ಸೇತುವೆ ಸ್ವರ್ಗದಂತಾಗಿದೆ. ಸಂಜೆ ವೇಳೆ, ಸೆಲ್ಫಿ ತೆಗೆಯುವ ಹುಚ್ಚು ಸಾಹಸಕ್ಕೆ ಕೆಲವರು ಮುಂದಾಗುತ್ತಿದ್ದಾರೆ. ಬೈಕ್‌ ಸವಾರರು, ಪ್ರೇಮಿಗಳು ಸೆಲ್ಫಿ ತೆಗೆದುಕೊಳ್ಳುವುದು ಹೆಚ್ಚು.

ಎಂಟು ತಿಂಗಳ ಹಿಂದೆ ಈ ಸೇತುವೆಯ ಅಡಿಯಲ್ಲಿ ಸ್ನಾನಕ್ಕಿಳಿದ ಕಡಬ ಮೂಲದ ಸಹೋದರರು ಹಾಗೂ ಇಲ್ಲಿಂದ 300 ಮೀ. ಕೆಳಗೆ ಕಕ್ವೆ ಎಂಬಲ್ಲಿ ಸ್ನಾನಕ್ಕಿಳಿದ ಯುವಕ ನೀರುಪಾಲಾಗಿದ್ದಾರೆ. ಈಗ ಮಳೆಗಾಲ. ಹೊಳೆಯಲ್ಲಿ ಜಾಸ್ತಿ ನೀರು ಇರುವುದರಿಂದ ಯುವಜನರ ಸೆಲ್ಫಿ ಹುಚ್ಚು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹೊಸ್ಮಠದಲ್ಲಿ ಸೆಲ್ಫಿ ಚೆಲ್ಲಾಟ
ಕೆಲವು ವರ್ಷಗಳ ಹಿಂದೆ ಕಡಬಕ್ಕೆ ಸಿಮೆಂಟು ಹೊತ್ತು ತರುತ್ತಿದ್ದ ಲಾರಿಯಲ್ಲಿದ್ದ ನಾಲ್ವರು, ಭದ್ರತಾ ಸಿಬಂದಿಯ ಎಚ್ಚರಿಕೆಯನ್ನು ಉಪೇಕ್ಷಿಸಿ, ಸೇತುವೆ ದಾಟಿ ನೀರು ಪಾಲಾಗಿದ್ದರು. ಇಂತಹ ಅನೇಕ ಉದಾಹರಣೆಗಳು ಸಿಗುತ್ತವೆ. ಅಂತಹುದರಲ್ಲಿ ಸೇತುವೆ ಮೇಲೆ ಅಲ್ಪಸ್ವಲ್ಪ ನೀರಿದೆ ಎಂದು ಸೇತುವೆ ಮಧ್ಯೆ ಹೋಗಿ ಫೋಟೋ, ಸೆಲ್ಫಿ ತೆಗೆಯುವವರ ಸಂಖ್ಯೆ ಹೆಚ್ಚಾಗಿದೆ. ಪ್ರವಾಹ ಬಂದು ಸೇತುವೆ ಮುಳುಗಿದಾಗ ಹೊಸ್ಮಠದಲ್ಲಿ ಪೊಲೀಸ್‌ ಹಾಗೂ ಗೃಹರಕ್ಷಕ ಸಿಬಂದಿಯನ್ನು ನೇಮಿಸಲಾಗುತ್ತದೆ. ಆದರೆ. ಅವರ ಮಾತು ಕೇಳದೆ ಸೆಲ್ಫಿ ತೆಗೆಯಲು ಹೋಗಿ ಹಲವರು ಅಪಾಯಕ್ಕೆ ಸಿಲುಕಿದ ನಿದರ್ಶನಗಳಿವೆ.

 ಸದಾನಂದ ಆಲಂಕಾರು

ಟಾಪ್ ನ್ಯೂಸ್

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.