ಶಿರಾಡಿ: ನಿಷೇಧ ಇದ್ದರೂ ಘನ ವಾಹನ ಸಂಚಾರ
Team Udayavani, Jul 19, 2018, 3:42 PM IST

ಪುತ್ತೂರು/ ನೆಲ್ಯಾಡಿ: ನಿಷೇಧ ಆದೇಶದ ಹೊರತಾಗಿಯೂ ಶಿರಾಡಿ ರಸ್ತೆಯಾಗಿ ಸಾಗಲು ಘನ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಬುಧವಾರ ಕಂಡುಬಂದಿದೆ. ಬುಧವಾರ ಸಂಜೆ ವೇಳೆಗೆ ಘನ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಗುಂಡ್ಯ ಬಳಿ 2 ತಾಸು ಟ್ರಾಫಿಕ್ ಜಾಮ್ ಉಂಟಾಯಿತು.
ಮಂಗಳೂರಿನಿಂದ ಹಾಗೂ ಸಕಲೇಶಪುರ ಭಾಗದಿಂದ ಘನ ವಾಹನ ಸಂಚಾರ ಬುಧವಾರವೂ ಮುಂದುವರಿದಿದೆ. ಜುಲೈ 18ರಿಂದ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಮಂಗಳವಾರ ಘನ ವಾಹನಗಳು ಸಂಚರಿಸಿದ್ದ ಹಿನ್ನೆಲೆಯಲ್ಲಿ ಬುಧವಾರವೂ ಸಂಚಾರ ಇದೆ ಎಂದೇ ಭಾವಿಸಿದ್ದರು. ಈ ನಡುವೆ ಘನವಾಹನ ಚಾಲಕರು ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರೊಂದಿಗೆ ವಾಹನ ಬಿಡುವಂತೆ ಒತ್ತಾಯಿಸಿ ಆಕ್ರೋಶ ವ್ಯಕ್ತ ಪಡಿಸು ತ್ತಿರುವುದೂ ಕಂಡುಬಂದಿದೆ.
ಆದೇಶ ಹೊರಡಿಸಿದ್ದ ಜಿಲ್ಲಾಡಳಿತ, ಇದರ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲು ವಿಫಲ ಆಗಿರುವುದೇ ಈ ಅವ್ಯವಸ್ಥೆಗೆ ಕಾರಣ ಎಂದು ಗುಂಡ್ಯ ನಿವಾಸಿಗಳು ದೂರಿದ್ದಾರೆ. ಮಂಗಳೂರು ಕಡೆಯಿಂದ ಬರುವ ವಾಹನಗಳನ್ನು ಮಾಣಿಯಲ್ಲಿ ತಡೆದು, ಬೇರೆ ದಾರಿ ತೋರಿಸಬೇಕಿತ್ತು. ಹಾಸನ ಕಡೆಯಿಂದ ಬರುವ ವಾಹನಗಳಿಗೆ ಅಲ್ಲಿಯೇ ತಡೆ ಒಡ್ಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.