ಶಿರಾಡಿ ಘಾಟಿ ರೈಲು ಮಾರ್ಗ: ಎರಡು ದಿನ ಸಂಚಾರ ಸ್ಥಗಿತ

ಅಪಾಯಕಾರಿ ಬಂಡೆ ತೆರವು ಕಾರ್ಯಾಚರಣೆ

Team Udayavani, Jul 21, 2019, 6:00 AM IST

200719KPN92

ಮಂಗಳೂರು/ ಸುಬ್ರಹ್ಮಣ್ಯ: ಶಿರಾಡಿ ಘಾಟಿಯ ಸಿರಿಬಾಗಿಲು ಬಳಿ ರೈಲು ಹಳಿಗೆ ಉರುಳುವ ಸ್ಥಿತಿಯಲ್ಲಿದ್ದ ಬೃಹತ್‌ ಬಂಡೆಯನ್ನು ತೆರವುಗೊಳಿಸುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ- ಸಕಲೇಶಪುರ ಮಧ್ಯೆ ರೈಲು ಸಂಚಾರವನ್ನು ಜುಲೈ 20ರಂದು ಸ್ಥಗಿತಗೊಳಿಸಲಾಗಿದ್ದು, ಸಂಚಾರ ರವಿವಾರವೂ ಇರುವುದಿಲ್ಲ.

ಘಾಟಿ ಪ್ರದೇಶದಲ್ಲಿ ಗುರುವಾರದಿಂದ ಭಾರೀ ಮಳೆಯಾಗುತ್ತಿದ್ದು, ಸಿರಿಬಾಗಿಲು ಬಳಿ ಹಳಿಗಳ ಮೇಲೆ ಮೇಲಿನ ಪ್ರದೇಶದಿಂದ ಕಲ್ಲು ಮಣ್ಣು ಬೀಳುತ್ತಿವೆ. ಮಣಿಬಂಡ ಎಂಬಲ್ಲಿ ಭಾರೀ ಗಾತ್ರದ ಬಂಡೆಯೊಂದು ಹಳಿಗಳ ಮೇಲೆ ಉರುಳಿ ಬೀಳುವ ಅಪಾಯವಿದ್ದು, ಇದನ್ನು ತೆರವುಗೊಳಿಸುವ ಕಾರ್ಯಾಚರಣೆ ರೈಲ್ವೇ ಸಿಬಂದಿಯಿಂದ ನಡೆಯುತ್ತಿದೆ. ಹೀಗಾಗಿ ಪ್ರಯಾಣಿಕರ ಸುರಕ್ಷೆ ದೃಷ್ಟಿಯಿಂದ ಶನಿವಾರ ಮತ್ತು ರವಿವಾರ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.

ಬಂಡೆ ತೆರವು ಕಾರ್ಯಕ್ಕೆ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೈಲ್ವೇ ವಿಭಾಗದ 80 ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ನಾಲ್ಕು ಹಿಟಾಚಿ ಮತ್ತು ಮೂರು ಕಂಪ್ರಸರ್‌ ಬಳಸಿ ಬಂಡೆಗಲ್ಲನ್ನು ಪುಡಿ ಮಾಡಿ ತೆರವುಗೊಳಿಸಲಾಗುತ್ತಿದೆ. ಸತತ ಮಳೆ ಸುಗಮ ಕಾಮಗಾರಿಗೆ ಅಡ್ಡಿಯಾಗಿದೆ. ಕಂಪ್ರಸರ್‌ ಬಳಸಿ ಬಂಡೆ ಪುಡಿ ಮಾಡುವಾಗ ಕಂಪನದಿಂದಲೂ ಗುಡ್ಡ ಜರಿಯುತ್ತಿದೆ.

ಮೈಸೂರು ವಿಭಾಗದ ಸೀನಿಯರ್‌ ಎಂಜಿನಿಯರ್‌ ರವಿಚಂದ್ರ ಧೀರೆದಾರ್‌, ಅಸಿಸ್ಟೆಂಟ್‌ ಎಂಜಿನಿಯರ್‌ ಜಬೆದಾರ್‌, ಸೀನಿಯರ್‌ ಸೆಕ್ಷನ್‌ ಎಂಜಿನಿಯರ್‌ ಕೆ.ಪಿ. ನಾಯ್ಡು, ಹಳಿ ಮೇಲ್ವಿಚಾರಕ ನಾಗಪ್ಪ ಕೇಶವಾರ್‌, ಗುತ್ತಿಗೆದಾರರಾದ
ಸಂತೋಷ್‌ ಕುಮಾರ್‌, ರಾಥೋಡ್‌ ಮಾರ್ಗದರ್ಶನ ನೀಡುತ್ತಿದ್ದಾರೆ.

ಸಂಚಾರದಲ್ಲಿ ಬದಲಾವಣೆ
ರೈಲು ನಂ.16511/16513 ಕೆಎಸ್‌ಆರ್‌ ಬೆಂಗಳೂರು-ಕಣ್ಣೂರು/ಕಾರವಾರ ಎಕ್ಸ್‌ಪ್ರೆಸ್‌ ಸಂಚಾರವನ್ನು ಶನಿವಾರ ಜೋಲಾರ್‌ಪೇಟೆ, ಸೇಲಂ, ಪಾಲ್ಗಾಟ್‌, ಶೋರ್ನೂರು ಜಂಕ್ಷನ್‌ ಮೂಲಕ ಮತ್ತು ರೈಲು ನಂ.16518/16524 ಕಣ್ಣೂರು/ ಕಾರವಾರ- ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ನ ಸಂಚಾರವನ್ನು ಶೋರ್ನೂರು ಜಂಕ್ಷನ್‌, ಪಾಲಾ^ಟ್‌, ಸೇಲಂ, ಜೋಲಾರ್‌ಪೇಟೆ ಮಾರ್ಗದ ಮೂಲಕ ಬದಲಾಯಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಉದಯವಾಣಿ ಎಚ್ಚರಿಸಿತ್ತು
ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಸಿರಿಬಾಗಿಲು ಸಮೀಪ ಹಳಿಗೆ ಬೃಹತ್‌ ಬಂಡೆ ಉರುಳಿ ಬೀಳುವ ಅಪಾಯವಿದೆ ಎಂಬುದಾಗಿ ಜು. 19ರಂದು “ಹಳಿಗೆ ಉರುಳಲು ಸಿದ್ಧವಾಗಿದೆ ಬಂಡೆ!’ ಎಂಬ ಶೀರ್ಷಿಕೆಯ ವರದಿ ಮೂಲಕ ಉದಯವಾಣಿ ಗಮನ ಸೆಳೆದಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.