ಶಿರಾಡಿ ಘಾಟಿ ರಸ್ತೆ : ಎರಡನೇ ಹಂತದ ಕಾಂಕ್ರೀಟ್‌ ಕಾಮಗಾರಿಗೆ ಸಿದ್ಧತೆ


Team Udayavani, Jan 19, 2018, 12:27 PM IST

19-Jan-10.jpg

ಉಪ್ಪಿನಂಗಡಿ: ಶಿರಾಡಿ ಘಾಟಿ ರಸ್ತೆಯ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿ 26 ತಿಂಗಳು ವಿಳಂಬವಾಗಿ
ಆರಂಭವಾಗುತ್ತಿದ್ದು, ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

2015ರ ಮಳೆಗಾಲ ಮುಗಿದ ಮೇಲೆ ಆರಂಭವಾಗಬೇಕಿದ್ದ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ. ಕಾಂಕ್ರೀಟ್‌ ರಸ್ತೆ 2ನೇ ಹಂತದ ಕಾಮಗಾರಿಗೆ 2015ರಲ್ಲಿ 85.28 ಕೋಟಿ ರೂ. ಮಂಜೂರಾಗಿತ್ತು. ಇದರಲ್ಲಿ 12.38 ಕಿ.ಮೀ. ಕಾಂಕ್ರೀಟೀಕರಣಕ್ಕೆ 63.10 ಕೋಟಿ ರೂ., 21 ಕಿ.ಮೀ. ಡಾಮರೀಕರಣಕ್ಕೆ 22.18 ಕೋಟಿ ರೂ. ವಿಂಗಡಿಸಲಾಗಿದೆ. ಕಾಂಕ್ರೀಟ್‌ ರಸ್ತೆ 8.5 ಮೀಟರ್‌, ಡಾಮರ್‌ ರಸ್ತೆ 7 ಮೀಟರ್‌ ಅಗಲ ಆಗಲಿದೆ. ಓಷಿಯನ್‌ ಕನ್‌ಸ್ಟ್ರಕ್ಷನ್‌ ಇಂಡಿಯಾ ಕಂಪೆನಿ ಕಾಮಗಾರಿ ನಿರ್ವಹಿಸಲಿದೆ.

ಜರ್ಮನಿಯ ಯಂತ್ರ
ಮೊದಲ ಹಂತದ ಕಾಮಗಾರಿ ನಡೆಸಿದಾಗ ಜರ್ಮಿನಿಯಿಂದ 7.5 ಕೋಟಿ ಮೌಲ್ಯದ ಅತ್ಯಾಧುನಿಕ ಯಂತ್ರವನ್ನು ತರಿಸಿಕೊಳ್ಳಲಾಗಿತ್ತು. ಸದ್ಯ ಎರಡನೇ ಹಂತದ ಕಾಮಗಾರಿಗಾಗಿ ಮತ್ತೆ 10 ಕೋಟಿ ರೂ. ಮೌಲ್ಯದ ಯಂತ್ರವನ್ನು ತರಿಸಿಕೊಳ್ಳಲಾಗಿದೆ. ಕಾಮಗಾರಿಗೆ ಅಗತ್ಯವಾದ ಜಲ್ಲಿ, ಮರಳು ಇತ್ಯಾದಿಗಳನ್ನು ಶೇ. 50 ಪ್ರಮಾಣದಲ್ಲಿ ಶೇಖರಣೆ
ಮಾಡಿಕೊಳ್ಳ ಲಾಗಿದೆ ಎಂದು ಓಷಿಯನ್‌ ಕನ್‌ಸ್ಟ್ರಕ್ಷನ್‌ ಇಂಡಿಯಾ ಕಂಪೆನಿಯ ಆಡಳಿತ ನಿರ್ದೇಶಕ ಇನಾಯತ್‌ ಆಲಿ ತಿಳಿಸಿದ್ದಾರೆ. 

ವಿರ್ಟ್‌ಜನ್‌ ಕಂಪೆನಿಯ ಟಿಸಿಎಂ- 180 ಸೆನ್ಸರ್‌ ಪೇವರ್‌ ಯಂತ್ರವನ್ನು ಖರೀದಿ ಮಾಡಿದ್ದು, ಈ ಯಂತ್ರದಲ್ಲಿ ಸೆಂಟ್ರಿಂಗ್‌ ಇಲ್ಲದೆ ಕಾಮಗಾರಿ ನಡೆಸಬಹುದು. ಈ ಮೊದಲಿನದಕ್ಕಿಂತಲೂ ಅತ್ಯಾಧುನಿಕ ಯಂತ್ರ ಇದಾಗಿದ್ದು, ಅತಿ ವೇಗದಲ್ಲಿ ಕಾಮಗಾರಿ ನಡೆಸಲು ಅವಕಾಶ ಇದೆ ಎಂದು ಇನಾಯತ್‌ ಆಲಿ ತಿಳಿಸಿದ್ದಾರೆ. ಯಂತ್ರವನ್ನು ಶಿರಾಡಿ ಬಳಿ ಅಡ್ಡಹೊಳೆ ಪ್ಲಾಂಟ್‌ನಲ್ಲಿ ಪ್ರತಿಷ್ಠಾಪಿಸಲಾಗಿದೆ.

ಮೊದಲ ಹಂತದ ಕೆಲಸಕ್ಕೆ ಪ್ರಶಂಸೆ
ಮೊದಲ ಹಂತದ ಕಾಮಗಾರಿ ಹೆಗ್ಗದ್ದೆಯಿಂದ ಕೆಂಪುಹೊಳೆ ತನಕ 11.77 ಕಿ.ಮೀ. ಕಾಂಕ್ರಿಟೀಕರಣ 69.90 ಕೋಟಿ ರೂ. ವೆಚ್ಚದಲ್ಲಿ ಆಗಿದ್ದು, ಇದನ್ನು ಓಷಿಯನ್‌ ಕನ್‌ ಸ್ಟ್ರಕ್ಷನ್‌ ಸಂಸ್ಥೆಯೇ ನಿರ್ವಹಿಸಿತ್ತು. 2015 ಆಗಸ್ಟ್‌ 9ರಂದು ಲೋಕೋಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಕೇಂದ್ರ ಭೂಸಾರಿಗೆ ಮಾಜಿ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆದಿತ್ತು. ಕಾಮಗಾರಿ ಗುಣಮಟ್ಟದ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಹೆದ್ದಾರಿ ಇಲಾಖೆಯಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು.

ಶಿರಾಡಿ ಘಾಟಿ ರಸ್ತೆ ಬಂದ್‌
ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣಕ್ಕೆ ಅತಿ ಹೆಚ್ಚಾಗಿ ಬಳಕೆಯಾಗುವ ಶಿರಾಡಿ ಘಾಟಿ ರಸ್ತೆಯನ್ನು ಜ. 20ರಿಂದ ಕಾಮಗಾರಿ ಮುಗಿಯುವ ತನಕ ಬಂದ್‌ ಮಾಡಲಾಗುತ್ತಿದೆ. ಕಾಮಗಾರಿ ಸಂದರ್ಭದಲ್ಲಿ ವಾಹನಗಳು ಹಾದು ಹೋದರೆ ಗುಣಮಟ್ಟ ಕುಸಿಯುತ್ತದೆ. ಹೀಗಾಗಿ, ರಸ್ತೆ ಸಂಚಾರವನ್ನು ಸಂಪೂರ್ಣ ಬಂದ್‌ ಮಾಡಲು ಇಲಾಖೆ ನಿರ್ಧರಿಸಿದೆ. ವಾಹನಗಳ ಸಂಚಾರಕ್ಕೆ ಬದಲಿ ರಸ್ತೆಯನ್ನೂ ತೋರಿಸಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.