ಕಟೀಲು ಬ್ರಹ್ಮಕಲಶ; ಧಾರಾಶುದ್ಧಿ-ಸಾಮವೇದ, ಅಥರ್ವವೇದ ಪಾರಾಯಣ


Team Udayavani, Jan 27, 2020, 6:24 AM IST

26KAMATH12

ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ 5ನೇ ದಿನವಾದ ರವಿವಾರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 5ರಿಂದ ಧಾರಾಶುದ್ಧಿ-ಸಾಮವೇದ ಮತ್ತು ಅಥರ್ವವೇದ ಪಾರಾಯಣ ಜರಗಿತು.

ಅನಂತರ ಅವಗಾಹ ಮತ್ತು ಸೇಕ ಶುದ್ಧಿ, ರುದ್ರಯಾಗ, ಶಾಸ್ತ್ರಬಿಂಬಶುದ್ಧಿ, ಮನ್ಯುಸೂಕ್ತಹೋಮ, ಪಂಚದುರ್ಗಾ ಹೋಮಗಳು, ರಾತ್ರಿಸೂಕ್ತ ಹೋಮ, ಒಳಗಿನ ನಾಗ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಜರಗಿದವು.

ಬೆಳಗ್ಗೆ ಭ್ರಾಮರೀವನದಲ್ಲಿ ಅಂಗಾರಕ ಯಾಗ, ಸಹಸ್ರಚಂಡಿಕಾ ಸಪ್ತಶತೀ ಪಾರಾ ಯಣ, ಕೋಟಿ ಜಪಯಜ್ಞ, ನವಗ್ರಹವನ, ನಕ್ಷತ್ರವನ, ರಾಶಿವನದಲ್ಲಿ ಆಯಾ ವೃಕ್ಷಗಳ ಸ್ಥಾಪನೆ ಜರಗಿತು. ಸಂಜೆ 5 ರಿಂದ ವನದುರ್ಗಾಪೂಜೆ ಮತ್ತು ಹೋಮ, ದುರ್ಗಾ ಮಾರ್ಕಂಡೇಯ ಪ್ರೋಕ್ತಪ್ರಾಯ ಶ್ಚಿತ್ತ ಹೋಮಗಳು, ಉತ್ಸವ ಬಲಿ, ಭ್ರಾಮರೀ ವನದಲ್ಲಿ ಕೋಟಿ ಜಪಯಜ್ಞ, ಸಹಸ್ರಚಂಡಿಕಾಸಪ್ತಶತೀ ಪಾರಾಯಣ ಜರಗಿದವು.
ರವಿವಾರ ಗಣರಾಜ್ಯೋತ್ಸವದ ದಿನ ಮತ್ತು ರಜೆ ದಿನವಾಗಿದ್ದು ಸುಮಾರು 90 ಸಾವಿರಕ್ಕೂ ಅಧಿಕ ಜನರು ದೇವಸ್ಥಾನಕ್ಕೆ ಭೇಟಿ, ದೇವಿಯ ದರ್ಶನ ಪಡೆದರು. ವಿಟ್ಲ, ಸಾಲೆತ್ತೂರು ಹಾಗೂ ವಿವಿಧ ಕಡೆಗಳಿಂದ ಹೊರೆಕಾಣಿಕೆ ಸಮರ್ಪಣೆಯಾಗಿದೆ. ಉಡುಪಿ, ಮೂಲ್ಕಿ ಭಾಗದ ಬರುವ ಭಕ್ತರು ಕಿನ್ನಿಗೋಳಿಯಿಂದ ಉಲ್ಲಂಜೆ ರಸ್ತೆಯಲ್ಲಿ ಬಂದು ಮಲ್ಲಿಗೆಯಂಗಡಿ ಮಾಂಜ ದಲ್ಲಿ ವಿಶಾಲವಾದ ಪಾರ್ಕಿಂಗ್‌ ಸ್ಥಳದಲ್ಲಿ ಪಾರ್ಕ್‌ ಮಾಡಲು ಅವಕಾಶವಿದೆ. ದೇವಸ್ಥಾನದಲ್ಲಿ ಹೋಗುವ ಹೊಸ ಸೇತುವೆಯ ಇಕ್ಕೆಲಗಳಲ್ಲಿ ಶ್ರೀದೇವಿ ಪುರಾಣವನ್ನು ಸಾರುವ ತೈಲ ಚಿತ್ರಗಳ ಅನಾವರಣಗೊಂಡಿದೆ.

ಭ್ರಾಮರೀ ವನದಲ್ಲಿ ಪಕ್ಕದ ನದಿಯಲ್ಲಿ ಎರಡು ಕಾರಂಜಿಗಳು ಅಳವಡಿಸಲಾಗಿದ್ದು, ರಾತ್ರಿಯ ಹೊತ್ತಿನಲ್ಲಿ ವಿದ್ಯುತ್‌ ದೀಪದಲ್ಲಿ ವರ್ಣರಂಜಿತವಾಗಿ ಕಂಗೊಳಿಸುತ್ತಿದೆ. ರವಿವಾರ ದೇವ ಸ್ಥಾನಕ್ಕೆ ಬೆಳಗ್ಗೆನಿಂದಲೇ ಭಕ್ತರು ಆಗಮಿಸುತ್ತಿ ರುವುದು ಕಂಡು ಬಂತು.

ದೇವಸ್ಥಾನದ ರಥಬೀದಿಯಿಂದ ಕೆಳಗೆ ಕಟೀಲು ಸೇತುವೆ ತನಕ ಸರತಿ ಸಾಲು ಹಾಗೂ ಉಗ್ರಾಣದ ಬದಿಯಿಂದ ಸಭಾ ಮಂಟಪದ ತನಕ ಭಕ್ತರ ಸರತಿ ಸಾಲಿನಲ್ಲಿ ನಿಲ್ಲಲು ವ್ಯವಸ್ಥೆ ಮಾಡಲಾಗಿದೆ.

ಭೋಜನಕ್ಕೆ 10 ಕೌಂಟರ್‌
ಭೋಜನ ಶಾಲೆಯಲ್ಲಿ ಬೆಳಗ್ಗಿನ ಫಲಾಹಾರಕ್ಕೆ 10 ಕೌಂಟರ್‌ಗಳು, ಮಧ್ಯಾ ಹ್ನದ ಭೋಜನಕ್ಕೆ 10 ಕೌಂಟರ್‌ ಹಾಗೂ 20, 30 ಸಾಲುಗಳಲ್ಲಿ 2,000 ಸಾವಿರ ಜನರು ಕುಳಿತು ಊಟ ಮಾಡುವ ವ್ಯವಸ್ಥೆ ಅಚ್ಚುಕಟ್ಟಾಗಿತ್ತು. ಸುಮಾರು 2,000 ಸಾವಿರ ಸ್ವಯಂಸೇವಕರು ಧಾರ್ಮಿಕ ಕಾರ್ಯದ ವ್ಯವಸ್ಥೆಯನ್ನು ಯಶಸ್ವಿಗೊಳಿಸುವಲ್ಲಿ ಸಹಕಾರ ನೀಡಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ
27ರಂದು ಬೆಳಗ್ಗೆ ಹರಿದಾಸ್‌ ದೋಗ್ರ ಮತ್ತು ಬಳಗದವರಿಂದ ಸ್ಯಾಕೊÕàಫೋನ್‌, ಡಾ| ಎಸ್‌.ಪಿ. ಗುರುದಾಸ್‌ರಿಂದ ಹರಿಕಥೆ, ಮಧ್ಯಾಹ್ನ ಪ್ರತಿಮಾ ಶ್ರೀಧರ್‌ ಬಳಗದಿಂದ ಭರತನಾಟ್ಯ, ಮಧ್ಯಾಹ್ನ 3ರಿಂದ ಕನಕದಾಸರು ಹಾಡುಗಳ ಪ್ರಸ್ತುತಿ ಕರ್ನಾಟಕ ಕಲಾಶ್ರೀ ಮೈಸೂರು ಡಾ| ನಂದಕುಮಾರ್‌ ಮತ್ತು ಬಳಗದವರಿಂದ ನಡೆಯಲಿದೆ. ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ , ಉಪನ್ಯಾಸ ಮಾಲಿಕೆ ರಾತ್ರಿ 7 ರಿಂದ ಪದ್ಮವಿಭೂಷಣ, ಸಂಗೀತ ಕಲಾನಿಧಿ ಡಾ| ಉಮಯಾಳ ಪುರಂ ಶಿವರಾಮನ್‌ಅವರಿಂದ ಲಯವಿನ್ಯಾಸ ಜ್ವಾಲಾ, ರಾತ್ರಿ 9ರಿಂದ ಮೋಹಿನಿ ಆಟ್ಟಂ ತ್ರಿಚ್ಚುರ್‌ ವಿ| ಪಲ್ಲವಿ ಕೃಷ್ಣನ್‌ ಮತ್ತು ಬಳಗದವರಿಂದ ನಡೆಯಲಿದೆ.

ಇಂದಿನ ಕಾರ್ಯಕ್ರಮ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆರನೇ ದಿನವಾದ ಸೋಮವಾರ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.ಬೆಳಗ್ಗೆ 5ರಿಂದ ದುರ್ಗಾಶಾಂತಿಹೋಮ, ಶಾಸ್ತ್ರ ಶಾಂತಿಪ್ರಾಯಶ್ಚಿತ್ತಗಳು , ಭ್ರಾಮರೀವನದಲ್ಲಿ ತತ್ತÌಹೋಮ, ಶಾಂತಿ ಪ್ರಾಯಶ್ಚಿತ್ತಗಳು, ಕಲಶಾಭಿಷೇಕ, ಬುಧಯಾಗ, ಸಹಸ್ರಚಂಡಿಕಾಸಪ್ತಶತೀಪಾರಾಯಣ, ಕೋಟಿಜಪಯಜ್ಞ, ನವಗ್ರಹವನ, ನಕ್ಷತ್ರವನ, ರಾಶಿವನದಲ್ಲಿ ಆಯಾ ವೃಕ್ಷಗಳ ಸ್ಥಾಪನೆ.ಸಂಜೆ 5ರಿಂದ ಭದ್ರಕಮಂಡಲಪೂಜೆ, ಅರ್ಚನೆ, ಮಹಾಬಲಿಪೀಠ ಮತ್ತು ಕ್ಷೇತ್ರಪಾಲ ಕಲಶಾಭಿಷೇಕ, ದಿಶಾಹೋಮಗಳು, ಚೋರಶಾಂತಿ, ಉತ್ಸವಬಲಿ ನಡೆಯಲಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.