ಶ್ರೀನಿವಾಸ ಮಲ್ಯರ ಕೊಡುಗೆ ಸ್ಮರಣೀಯ : ವೇದವ್ಯಾಸ ಕಾಮತ್
Team Udayavani, Apr 26, 2018, 8:10 AM IST
ಮಂಗಳೂರು: ನವಮಂಗಳೂರಿನ ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ ಕೊಡುಗೆಗಳನ್ನು ಸ್ಮರಿಸಿದ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು, ಮಲ್ಯರ ಮನೆಗೆ ಭೇಟಿ ನೀಡಿ ಕದ್ರಿಯಲ್ಲಿರುವ ಮಲ್ಯ ಪ್ರತಿಮೆಗೆ ಮಾಲಾರ್ಪಣೆಗೈದರು.
ನವಮಂಗಳೂರು ಬಂದರು ಸ್ಥಾಪನೆ, ಮಂಗಳೂರು ವಿಮಾನ ನಿಲ್ದಾಣ ನಿರ್ಮಾಣ, ಎನ್.ಐ.ಟಿ.ಕೆ. ಸ್ಥಾಪನೆ, ಮಂಗಳೂರಿನಲ್ಲಿ ಆಕಾಶವಾಣಿ, ರಾಷ್ಟ್ರೀಯ ಹೆದ್ದಾರಿ 17, ರೈಲು ಮಾರ್ಗಗಳ ನಿರ್ಮಾಣ ಮುಂತಾದ ಅಭಿವೃದ್ಧಿ ಕಾರ್ಯಗಳಲ್ಲಿ ಮಲ್ಯರು ಮಹತ್ತರ ಪಾತ್ರ ವಹಿಸಿದ್ದರು. ಉಳ್ಳಾಲ ಮತ್ತು ಅದರಾಚೆಗಿನ ಪ್ರದೇಶಗಳು ಮಂಗಳೂರಿಗೆ ಸಂಪರ್ಕ ಸಾಧಿಸಲು ಅವರು ಕಾರಣರಾಗಿದ್ದರು. ಅವರ ಕೊಡುಗೆ ಎಂದಿಗೂ ಮರೆಯಲು ಸಾಧ್ಯವಿಲ್ಲ, ಅಂಥ ಮಹಾನ್ ನಾಯಕರನ್ನು ಪಕ್ಷ ಭೇದ ಮರೆತು ನಾವು ಗೌರವಿಸುತ್ತೇವೆ ಎಂದು ವೇದವ್ಯಾಸ ಕಾಮತ್ ಹೇಳಿದರು.
ಮಲ್ಯರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೊಮ್ಮಗ ನರಹರಿ ಮಲ್ಯ ಹಾಗೂ ಪತ್ನಿ ಶುಭ ಹಾರೈಸಿದರಲ್ಲದೇ, ತಮ್ಮ ಅಜ್ಜ ಓದುತ್ತಿದ್ದ ಸ್ವಾಮಿ ವಿವೇಕಾನಂದರ ಪುಸ್ತಕವನ್ನು ನೀಡಿ ಕೀರ್ತಿಯ ಶಿಖರಕ್ಕೇರಲಿ ಎಂದು ಹರಸಿದರು. ಪಂಡಿತ್ ನರಸಿಂಹ ಆಚಾರ್ಯ, ವಸಂತ ಜೆ. ಪೂಜಾರಿ, ರತ್ನಾಕರ ನಾಯ್ಕ, ರಿತೇಶ್ ದಾಸ್, ದಿನೇಶ್ ಬಂಗೇರ, ಸಂತೋಷ್, ಲೋಕೇಶ್, ಗಣೇಶ್, ಚೇತನ್, ಶ್ರೀನಾಥ್ ಮಾನೆ ಮೊದಲಾದವರು ಉಪಸ್ಥಿತರಿದ್ದರು.
ಮಲ್ಯರ ಕನಸಿನಂತೆ ಯೋಜನೆ
ಯು. ಶ್ರೀನಿವಾಸ ಮಲ್ಯರ ಕನಸಿನಂತೆ ಮಂಗಳೂರನ್ನು ಅಭಿವೃದ್ಧಿಪಡಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಇವೆಲ್ಲಕ್ಕೂ ಜನರು ಅಶೀರ್ವಾದ ಮಾಡುತ್ತಾರೆ ಎನ್ನುವ ನಂಬಿಕೆ ನನ್ನದು.
– ವೇದವ್ಯಾಸ ಕಾಮತ್, ಬಿಜೆಪಿ ಅಭ್ಯರ್ಥಿ- ಮಂಗಳೂರು ದಕ್ಷಿಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MG Motor: ನೂತನ ಇವಿ ಕಾರು ಸಿಯುವಿ ಝಿಎಸ್ ವಿಂಡ್ಸರ್ ಮಾರುಕಟ್ಟೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.