ಒಂದೇ ದೇಶ, ಒಂದೇ ಸಂಬಳ ಯಾಕಿಲ್ಲ? : ಬಜಾಲ್‌


Team Udayavani, Jul 9, 2017, 3:50 AM IST

bajal.jpg

ಮಹಾನಗರ: 3 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಬೋಗಸ್‌ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಜನರನ್ನು ಮರುಳುಗೊಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಐತಿಹಾಸಿಕ ತೀರ್ಪು ನೀಡಿದ್ದರೂ ಅದನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರಕಾರ ತೀರಾ ನಿರ್ಲಕ್ಷ್ಯ ವಹಿಸುತ್ತಿದೆ. ಮತ್ತೂಂದು ಕಡೆ ಜಿಎಸ್‌ಟಿಯನ್ನು ದೇಶಾದ್ಯಂತ ಜಾರಿಗೊಳಿಸಿ ಅಬ್ಬರದ ಪ್ರಚಾರ ನಡೆಸಿ ಒಂದೇ ದೇಶ ಒಂದೇ ತೆರಿಗೆ ಎಂಬ ಘೋಷಣೆಯಿಂದ ಜನರಿಗೆ ಮಂಕುಬೂದಿ ಎರಚುತ್ತಿದೆ.

ಹಾಗಿರುವಾಗ ಒಂದೇ ದೇಶ ಒಂದೇ ಸಂಬಳ ಮಾಡಲು ಯಾಕೆ ನರೇಂದ್ರ ಮೋದಿ ಸರಕಾರ ಮುಂದಾಗುತ್ತಿಲ್ಲ ಎಂದು ಸಿಪಿಐ (ಎಂ) ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ಕುಮಾರ್‌ ಬಜಾಲ್‌ ಪ್ರಶ್ನಿಸಿದರು.

ಅವರು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಮಂಗಳೂರು- ಬೋಳೂರು ವಿಭಾಗ ಸಮಿತಿ ನೇತೃತ್ವದಲ್ಲಿ ಜರುಗಿದ ವಾಹನ ಪ್ರಚಾರ ಜಾಥಾವನ್ನು ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಉದ್ಘಾಟಿಸಿ ಮಾತನಾಡಿದರು. 
ಗುತ್ತಿಗೆ ಕಾರ್ಮಿಕರ ಶೋಷಣೆ ಹೆಚ್ಚಾಗು ತ್ತಿದೆ. ದೇಶದ ಕಾರ್ಮಿಕ ವರ್ಗವು ಕನಿಷ್ಠ ಕೂಲಿ, ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನೇಕ ಹೋರಾಟ ಗಳನ್ನು ನಡೆಸಿದರೂ ಸರಕಾರ ಮೌನ ವಹಿಸಿದೆ ಎಂದು ಅವರು ಆರೋಪಿಸಿದರು.

ಸಿಪಿಐ(ಎಂ) ಮಂಗಳೂರು ನಗರ ಸಮಿತಿ ಸದಸ್ಯ ಸಂತೋಷ್‌ ಶಕ್ತಿನಗರ ಮಾತನಾಡಿ, ಬೆಲೆ ಏರಿಕೆಯನ್ನು ತಡೆಗಟ್ಟುವುದಾಗಿ ಚುನಾವಣಾ ಪೂರ್ವದಲ್ಲಿ ಆಶ್ವಾಸನೆ ನೀಡಿದ ಬಿಜೆಪಿ, 3 ವರ್ಷಗಳ ಅವಧಿಯಲ್ಲಿ ಈ ಬಗ್ಗೆ ಎಳ್ಳಷ್ಟು ಕಾಳಜಿ ವಹಿಸಿಲ್ಲ. ಜಿಎಸ್‌ಟಿಯಿಂದಾಗಿ ಮತ್ತೆ ಜೀವನಾ ವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ ಎಂದು ಹೇಳಿದರು.
ಜಾಥಾವು ಕೊಟ್ಟಾರ ಚೌಕಿ, ಕೋಡಿಕಲ್‌, ಅಶೋಕನಗರ, ಶೇಡಿಗುರಿ, ಉರ್ವಮಾರ್ಕೆಟ್‌ ಸೇರಿದಂತೆ ಸುಮಾರು 18 ಕಡೆಗಳಲ್ಲಿ ಸಂಚರಿಸಿ ಬೋಳೂರಿನಲ್ಲಿ ಸಮಾರೋಪಗೊಂಡಿತು.

ಸಮಾರೋಪದಲ್ಲಿ ಸಿಪಿಐ(ಎಂ) ದ.ಕ. ಜಿಲ್ಲಾ ಸಮಿತಿ ಸದಸ್ಯ ಯೋಗೀಶ್‌ ಜಪ್ಪಿನಮೊಗರು ಮಾತ ನಾಡಿದರು. ಜಾಥಾದ ನೇತೃತ್ವವನ್ನು ಸಿಪಿಐ(ಎಂ) ಪಕ್ಷದ ಯುವ ನಾಯಕರಾದ ಪ್ರದೀಪ್‌, ಪ್ರಶಾಂತ್‌ ಎಂ.ಬಿ., ಗೌರವ್‌, ರಘುವೀರ್‌, ಹರಿಣಾಕ್ಷಿ, ಶ್ರುತಿ ಮೊದಲಾದವರು ವಹಿಸಿದ್ದರು.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.