ಸೀತಾರಾಮ ಕೆದಿಲಾಯ ಅವರ ಭಾರತ ಪರಿಕ್ರಮ ಸಮಾಪನ


Team Udayavani, Jul 10, 2017, 1:40 AM IST

seetaram-kedlaya.jpg

ಪುತ್ತೂರು: ಆರ್‌ಎಸ್‌ಎಸ್‌ ಮಾಜಿ ಹಿರಿಯ ಪ್ರಚಾರಕ್‌, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮೂಲದ ಸೀತಾರಾಮ ಕೆದಿಲಾಯ ಅವರ ಭಾರತ ಪರಿಕ್ರಮ ರವಿವಾರ ಗುರುಪೂರ್ಣಿಮೆಯಂದು ಕನ್ಯಾಕುಮಾರಿಯಲ್ಲಿ ಸಮಾಪನಗೊಂಡಿತು. ಕನ್ಯಾಕುಮಾರಿಯಿಂದ ಆರಂಭಗೊಂಡು ಇಡೀ ಭಾರತಕ್ಕೆ ಪ್ರದಕ್ಷಿಣೆ ಬಂದ ಈ ಅತೀ ದೊಡ್ಡ ವಾಕಥಾನ್‌ ನಾಲ್ಕು ವರ್ಷ 11 ತಿಂಗಳಲ್ಲಿ ಮುಗಿದಿದೆ. 1,797 ದಿನಗಳಲ್ಲಿ 25 ರಾಜ್ಯಗಳ ಮೂಲಕ 23,100 ಕಿ.ಮೀ. ನಡೆದ ಕೆದಿಲಾಯರು ಗ್ರಾಮಗಳೊಳಗೆ ನಡೆದದ್ದು ಇನ್ನೂ ಅಧಿಕ.

ಕೆದಿಲಾಯ ಅವರ ಪಾದಯಾತ್ರೆ ಶನಿವಾರ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕಕ್ಕೆ ತಲುಪಿತು. ರವಿವಾರ ಬೆಳಗ್ಗೆ 4 ಗಂಟೆಗೆ ಅಲ್ಲಿಂದ ಕನ್ಯಾಕುಮಾರಿ ದೇವಾಲಯಕ್ಕೆ ತಲುಪಿತು. ಅಲ್ಲಿ ವಿಶೇಷ ದರ್ಶನ ಪಡೆದು 108 ಪ್ರದಕ್ಷಿಣೆ ಹಾಕಿದ ಕೆದಿಲಾಯ ಅವರು ದಕ್ಷಿಣದ ತುತ್ತತುದಿ ಕಡಲಕಿನಾರೆಗೆ ತೆರಳಿದರು. ಅಲ್ಲಿಂದಲೇ ಪಾದಯಾತ್ರೆ 2012 ಆಗಸ್ಟ್‌ 9ರಂದು ಹೊರಟಿತ್ತು. ಅಲ್ಲಿ ಪಾದಯಾತ್ರೆಗೆ ಸಹಕರಿಸಿದ ಎಲ್ಲರಿಗೂ ಕೆದಿಲಾಯ ಕೃತಜ್ಞತೆ ಸಲ್ಲಿಸಿದರು. 

ಪಾದಯಾತ್ರೆ ಹೊರಡುವಾಗ ಧ್ವಜ ನೀಡಿ ಶುಭ ಕೋರಿದ್ದ ರಾಮಕೃಷ್ಣಾಶ್ರಮದ ಶ್ರೀ ಚೈತನ್ಯಾನಂದ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿಯೇ ಶಂಖಧ್ವನಿ ನಡುವೆ ಧ್ವಜಾವರೋಹಣ ನಡೆಯಿತು. ಕೆದಿಲಾಯ ಅವರು ಪಾದಯಾತ್ರೆ ಮುಗಿದ ಸಂಕೇತವಾಗಿ ಕೇಶಮುಂಡನ (ಪಾದಯಾತ್ರೆ ಹೊರಟ ಬಳಿಕ ತಲೆಯ ಕೂದಲು, ಗಡ್ಡವನ್ನು ಕತ್ತರಿಸಿರಲಿಲ್ಲ) ಮಾಡಿಸಿಕೊಂಡರು.

ಭಾರತವನ್ನು ವಿಶ್ವಗುರುವಾಗಿ ಮಾಡಬೇಕೆಂಬ ಸಂಕಲ್ಪದಿಂದ ಕೆ.ಎನ್‌. ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಶನಿವಾರ ಬೆಳಗ್ಗೆಯಿಂದ ಆರಂಭಗೊಂಡ “ವಿಶ್ವಜಿಗೀಶು ಯಾಗ’ದ ಪೂರ್ಣಾಹುತಿ ರವಿವಾರ ಮಧ್ಯಾಹ್ನ ನಡೆಯಿತು. ಸಂಜೆ ನಾಗರಕೋವಿಲ್‌ ನಗರದಲ್ಲಿ ನಡೆದ “ಗ್ರಾಮ ಸಂಗಮ’ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಜನರು ಉಪಸ್ಥಿತರಿದ್ದರು.

ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌, ಸಹಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಪದಾಧಿಕಾರಿಗಳಾದ ಅಜಿತ್‌ ಮಹಾಪಾತ್ರ, ಮಂಗ ಳೂರಿನ ಕಜಂಪಾಡಿ ಸುಬ್ರಹ್ಮಣ್ಯ ಭಟ್‌ ಮೊದಲಾದವರು ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.