![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-415x224.jpg)
Mangaluru; ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಬಗೆಹರಿಸಿ: ಜಿಲ್ಲಾಧಿಕಾರಿ
Team Udayavani, Feb 13, 2024, 11:27 PM IST
![ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಬಗೆಹರಿಸಿ: ಜಿಲ್ಲಾಧಿಕಾರಿ](https://www.udayavani.com/wp-content/uploads/2024/02/dc-2-620x346.jpg)
ಮಂಗಳೂರು: ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್ಗಳಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂಗವಿಕಲರ ಕುಂದು ಕೊರತೆಗಳ ನಿವಾರಣೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಯುಡಿಐಡಿ ಕಾರ್ಡ್ಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹುಡುಕ ಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.
ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಯುಡಿಐಡಿ ಕಾರ್ಡ್ ವಿತರಣೆ ಪ್ರಗತಿ ಕುಂಠಿತವಾಗಿರುವ ಬಗ್ಗೆ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿರುವ ಒಟ್ಟು ವಿಕಲ ಚೇತನರ ಸಂಖ್ಯೆಗಳನ್ನು ಕ್ರೋಢೀಕರಿಸಿ 15 ದಿನಗಳೊಳಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಅಂಗವಿಕಲರು ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸುವುದು ಕಷ್ಟ. ಹಾಗಾಗಿ ಆಯಾ ಶಾಲೆಗಳ ಮೂಲಕವೇ ಅರ್ಜಿಗಳನ್ನು ಸಲ್ಲಿಸಲು ಸೂಚಿಸಿದ ಅವರು, ವಿಕಲಚೇತನರಿಗೆ ಮಾಶಾಸನ ಸ್ಥಗಿತಗೊಂಡಿರುವ ಬಗ್ಗೆಯೂ ಕ್ರಮ ಕೈಗೊಳ್ಳಲು ಹೇಳಿದರು.
ಕೆಲವೊಂದು ಅಂಗವಿಕಲರ ಶಾಲೆಗಳಿಗೆ ಈ ಮೊದಲು ದೇವಾಲಯದಿಂದ ಇದ್ದ ಊಟದ ವ್ಯವಸ್ಥೆ ಸ್ಥಗಿತಗೊಡಿರುವ ಬಗ್ಗೆ ಸದಸ್ಯರು ಪ್ರಸ್ತಾವಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಯಾವುದಾದರೂ ಒಂದು ಸಂಸ್ಥೆ ಮೂಲಕ ಅಥವಾ ಇತರೆ ವ್ಯವಸ್ಥೆ ಮೂಲಕ ಸರಿಪಡಿಸುವ ಭರವಸೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ತಿಮ್ಮಯ್ಯ, ಜಿಲ್ಲಾ ವಿಕಲಚೇತನರ ಪುರ್ನವಸತಿ ಕೇಂದ್ರದ ಸದಸ್ಯರು, ಅಂಗವಿಕಲರ ಸಮಿತಿಯ ಅಧಿಕಾರಿಗಳು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-415x224.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-150x105.jpg)
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
![Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ](https://www.udayavani.com/wp-content/uploads/2024/07/ravikumar-150x86.jpg)
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
![ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು](https://www.udayavani.com/wp-content/uploads/2024/07/9-4-150x90.jpg)
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
![CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ](https://www.udayavani.com/wp-content/uploads/2024/07/courts-150x102.jpg)
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
![Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್](https://www.udayavani.com/wp-content/uploads/2024/07/kum-150x110.jpg)
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-150x81.jpg)
Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !
![1-rasht-aa](https://www.udayavani.com/wp-content/uploads/2024/07/1-rasht-aa-150x85.jpg)
Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು
![Accident-Logo](https://www.udayavani.com/wp-content/uploads/2024/07/Accident-Logo-150x90.jpg)
Bantwala: ಮಾರಿಪಳ್ಳದಲ್ಲಿ ಬಸ್-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
![ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ](https://www.udayavani.com/wp-content/uploads/2024/07/Jagannath-temple-150x78.jpg)
Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.