‘ಜನಮಾನಸದಲ್ಲಿ ನೆಲೆ ನಿಂತ ಮೇರುಕಲಾವಿದ ಬಣ್ಣದ ಮಹಾಲಿಂಗ’


Team Udayavani, Jul 3, 2017, 3:05 AM IST

Malinga-2-7.jpg

ಪುತ್ತೂರು: ಔದಾಸೀನ್ಯ ಇಲ್ಲದ, ವಿನಯತನದ, ಕಲೆಗೆ ಗೌರವ ತಂದುಕೊಟ್ಟ, ಆತ್ಮಾಭಿಮಾನ ಉಳಿಸಿಕೊಂಡು ಜನಮಾನಸದಲ್ಲಿ ಮೆರೆದ ಮೇರು ಕಲಾವಿದ ಬಣ್ಣದ ಮಹಾಲಿಂಗ ಎಂದು ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬಣ್ಣಿಸಿದ್ದಾರೆ. ಅವರು ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆದ ಯಕ್ಷಗಾನ ಮೇರು ಸಾಧಕ ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನ ಪುತ್ತೂರು ಇದರ ಉದ್ಘಾಟನೆ – ಬಣ್ಣದ ಮಹಾಲಿಂಗ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಬಯಲಾಟ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಬಣ್ಣದ ಮಹಾಲಿಂಗರ ಜತೆಗಿನ ತಮ್ಮ ನಿಕಟ ಸಂಪರ್ಕದ ನೆನಪುಗಳನ್ನು ಹಂಚಿಕೊಂಡ ಶ್ರೀಗಳು, ಬೆಳಗ್ಗೆ 4 ಗಂಟೆಗೆ ರಂಗ ಪ್ರವೇಶವಾದರೂ ಸಂಜೆ 7 ಗಂಟೆಗೆ ಮುಖವರ್ಣಿಕೆಗೆ ಕುಳಿತುಕೊಳ್ಳುವ ಬದ್ಧತೆ ಮಹಾಲಿಂಗರದ್ದು. ರಾಕ್ಷಸ ವೇಷದಲ್ಲಿ ಕೊನೆಯವರೆಗೂ ಸ್ವರಭಾರವನ್ನು ಉಳಿಸಿಕೊಳ್ಳುತ್ತಿದ್ದ ಏಕೈಕ ಕಲಾವಿದ ಬಣ್ಣದ ಮಹಾಲಿಂಗರು. ಅವರ ಸ್ಮರಣೆಯಲ್ಲಿ ಹುಟ್ಟಿಕೊಂಡ ಪ್ರತಿಷ್ಠಾನ ಉಜ್ವಲವಾಗಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಲಾಂಛನ ಅನಾವರಣ
ಲಾಂಛನ ಅನಾವರಣಗೊಳಿಸುವ ಮೂಲಕ ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನಕ್ಕೆ ಚಾಲನೆ ನೀಡಿದ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್‌ ಮಾತನಾಡಿ, ಸರಕಾರ ಮೇರು ಯಕ್ಷಗಾನ ಕಲಾವಿದರಿಗೆ ಗೌರವಧನ ನೀಡುವ ಸಂದರ್ಭ ಎಡನೀರು ಶ್ರೀಗಳ ಮೂಲಕ ಸೂಚಿಸಲ್ಪಟ್ಟ ಕಲಾವಿದರಲ್ಲಿ ಮಹಾಲಿಂಗರೂ ಒಬ್ಬರು. ಉಡುಪಿ ಆರ್‌ಆರ್‌ಸಿಯಲ್ಲಿ ಬಣ್ಣದ ಮಹಾಲಿಂಗರ ಪಾತ್ರಗಳ ದಾಖಲೀಕರಣ ಲಭ್ಯವಿದ್ದು, ಪ್ರತಿಷ್ಠಾನ ಅವರನ್ನು ಸಂಪರ್ಕಿಸಬೇಕು ಎಂದರು.

ಪ್ರಶಸ್ತಿ ಪ್ರದಾನ

ಈ ಸಂದರ್ಭ ತೆಂಕುತಿಟ್ಟಿನ ಹಿರಿಯ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್‌ ಅವರಿಗೆ ಬಣ್ಣದ ಮಹಾಲಿಂಗ ಯಕ್ಷ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಭಿನಂದನ ಭಾಷಣ ಮಾಡಿದ ಯಕ್ಷಗಾನ ಕಲಾವಿದ ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ತೆಂಕುತಿಟ್ಟಿನ ಬಣ್ಣದ ವೇಷವನ್ನು ಇತರ ಯಾವ ಪ್ರಾಕಾರಗಳಿಗೂ ಹಿಂದಕ್ಕೆ ಸರಿಸಲು ಸಾಧ್ಯವಾಗಿಲ್ಲ. ಮಕ್ಕಳೂ ಪ್ರೀತಿಸುವ ಹೃದಯ ವೈಶಾಲ್ಯವನ್ನು ಹೊಂದಿರುವ ಬಣ್ಣದ ಮಹಾಲಿಂಗರ ಶಿಷ್ಯ ಶೆಟ್ಟಿಗಾರ್‌ ಅವರಿಗೆ ಪ್ರಶಸ್ತಿ ಸಂದಿರುವುದು ಔಚಿತ್ಯಪೂರ್ಣ ಎಂದರು. ಮುಂದಕ್ಕೂ ಪ್ರಶಸ್ತಿಯನ್ನು ಬಣ್ಣದ ವೇಷಧಾರಿಗಳಿಗೇ ನೀಡಿ ಗೌರವಿಸಲು ವಿನಂತಿಸಿದರು.

ತಿರುವನಂತಪುರ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್‌ ಡಾ| ಎಂ. ರಾಮ ಅಧ್ಯಕ್ಷತೆ ವಹಿಸಿದ್ದರು. ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನ ಪುತ್ತೂರು ಇದರ ಗೌರವಾಧ್ಯಕ್ಷರಾದ ಕೆ.ಸಿ. ಪಾಟಾಳಿ ಪಡುಮಲೆ, ರಾಮ ಮುಗರೋಡಿ, ಮಹಾಲಿಂಗ ಮಂಗಳೂರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಮಾಸ್ತರ್‌ ಪಂಜತ್ತೂಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ನಾರಾಯಣ ದೇಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಶಾಸಕಿ ಶಕುಂತಳಾ ಟಿ. ಶೆಟ್ಟಿ ಕಾರ್ಯಕ್ರಮದ ಆರಂಭದಲ್ಲಿ ಭೇಟಿ ನೀಡಿದರು.

ಯಕ್ಷಗಾನ ಬಯಲಾಟ
ಸಭಾ ಕಾರ್ಯಕ್ರಮದ ಬಳಿಕ ವೀರ ಅಭಿಮನ್ಯು – ದುಶ್ಯಾಸನ ವಧೆ – ಗದಾಯುದ್ಧ ಪ್ರಸಂಗಗಳ ಯಕ್ಷಗಾನ ಬಯಲಾಟವು ಪ್ರಸಿದ್ಧ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಿತು. ವಿಶೇಷ ಆಕರ್ಷಣೆಯಾಗಿ ತೆಂಕುತಿಟ್ಟಿನ ಪರಂಪರೆಯ ಹರಿಕಾರರಾದ ಮೂವರು ಹಿರಿಯ ಭಾಗವತರಿಂದ ಪರಂಪರೆಯ ಅನಾವರಣ, ಬಣ್ಣದ ಮಹಾಲಿಂಗರ ಶಿಷ್ಯ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್‌ ಅವರ ಅದ್ಭುತ ರುದ್ರಭೀಮ, ಬಣ್ಣದ ಮಹಾಲಿಂಗರ ಸುಪುತ್ರ ಬಣ್ಣದ ಸುಬ್ರಾಯ ಸಂಪಾಜೆಯವರ ನೇತೃತ್ವದಲ್ಲಿ ತೆಂಕುತಿಟ್ಟಿನ ಏಳು ಜನ ಸುಪ್ರಸಿದ್ಧ ಬಣ್ಣದ ವೇಷಗಾರರಿಂದ ಪರಂಪರೆಯ ಸಂಶಪ್ತಕರು ನಡೆಯಿತು.

ದಾಖಲೆಗಳ ಕೊರತೆ
ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಡಾ| ಪ್ರಭಾಕರ ಶಿಶಿಲ ಮಾತನಾಡಿ, ಬಣ್ಣದ ಮಹಾಲಿಂಗರು 7ನೇ ಕಟ್ಟಾ ವೇಷಧಾರಿಯಾಗಿ ಬೆಳೆದು ಬಣ್ಣಗಾರಿಕೆಯಲ್ಲಿ ಅನೇಕ ಆವಿಷ್ಕಾರಗಳನ್ನು ಮಾಡಿದ ಅಪ್ರತಿಮ ಕಲಾವಿದರು ಎಂದರು. ದಾಖಲೆಗಳು ಇಲ್ಲದಿರುವುದು ಯಕ್ಷಗಾನ ಕಲಾವಿದರ ದೊಡ್ಡ ಕೊರತೆ ಎಂದು ಅಭಿಪ್ರಾಯಿಸಿದ ಅವರು, ಬಣ್ಣದ ಮಹಾಲಿಂಗರ ಕುರಿತಂತೆ ರಚಿತವಾಗಿರುವ ‘ಬಣ್ಣ’ ಪುಸ್ತಕದ ಮರು ಮುದ್ರಣದ ನಿಟ್ಟಿನಲ್ಲಿ ಪ್ರತಿಷ್ಠಾನ ಮುಂದಾಗಬೇಕೆದರು.

ವಿಶೇಷ ಆಕರ್ಷಣೆ
ವಿಶೇಷ ಆಕರ್ಷಣೆಯಾಗಿ ತೆಂಕುತಿಟ್ಟಿನ ಪರಂಪರೆಯ ಹರಿಕಾರರಾದ ಮೂವರು ಹಿರಿಯ ಭಾಗವತರಿಂದ ಪರಂಪರೆಯ ಅನಾವರಣ, ಬಣ್ಣದ ಮಹಾಲಿಂಗರ ಶಿಷ್ಯ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್‌ ಅವರ ಅದ್ಭುತ ರುದ್ರಭೀಮ, ಬಣ್ಣದ ಮಹಾಲಿಂಗರ ಸುಪುತ್ರ ಬಣ್ಣದ ಸುಬ್ರಾಯ ಸಂಪಾಜೆಯವರ ನೇತೃತ್ವದಲ್ಲಿ ತೆಂಕುತಿಟ್ಟಿನ ಏಳು ಜನ ಸುಪ್ರಸಿದ್ಧ ಬಣ್ಣದ ವೇಷಗಾರರಿಂದ ಪರಂಪರೆಯ ಸಂಶಪ್ತಕರು ನಡೆಯಿತು.

ಬದ್ಧತೆ, ಶುದ್ಧತೆ
ಸಂಸ್ಮರಣ ಮಾತುಗಳನ್ನಾಡಿದ ವೈದ್ಯ, ಸಾಹಿತಿ, ಕಲಾವಿದ ಡಾ| ರಮಾನಂದ ಬನಾರಿ, ಬಣ್ಣದ ಮಹಾಲಿಂಗರಲ್ಲಿ ದೈವದತ್ತವಾದ ಪ್ರತಿಭೆ ಇತ್ತು. ಯಕ್ಷಗಾನ ಕಸುಬುದಾರಿಕೆ ಅವರಿಗೆ ಕರಗತವಾಗಿತ್ತು. ಸಿದ್ಧತೆಯ ಬದ್ಧತೆ ಮತ್ತು ಶುದ್ಧತೆಯ ಕಾರಣದಿಂದ ಅವರು ಅದ್ಭುತ ಬಣ್ಣದ ವೇಷಧಾರಿಯಾಗಲು ಕಾರಣವಾಗಿತ್ತು ಎಂದು ಅಭಿಪ್ರಾಯಿಸಿದರು.

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.