ಕೃಷಿಕರು, ಬಡವರಿಗೆ ಆದ್ಯತೆ ಕಡಿಮೆಯಾಗುತ್ತಿದೆ


Team Udayavani, Apr 18, 2018, 9:30 AM IST

Sinakar-Ullal-17-4.jpg

1983ರ ತನಕ ಸಿಪಿಐಎಂ ಪ್ರಾಬಲ್ಯ ಇದ್ದ ಉಳ್ಳಾಲ ಕ್ಷೇತ್ರ ಬಳಿಕ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ 1994ರ ಚುನಾವಣೆ ಉಳ್ಳಾಲದ ರಾಜಕೀಯ ಲೆಕ್ಕಾಚಾರವನ್ನೇ ಬದಲಾಯಿಸಿತು. ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸಿ ಬಿಜೆಪಿಯ ಜಯರಾಮ ಶೆಟ್ಟಿ ಶಾಸಕರಾದರು. ಈ ಸಂದರ್ಭದಲ್ಲಿ ಅಂದು ಕಾಂಗ್ರೆಸ್‌ ಮುಖಂಡರಾಗಿದ್ದ ಚಂದಪ್ಪ ಉಳ್ಳಾಲ ಅವರ ಪುತ್ರ ದಿನಕರ ಉಳ್ಳಾಲ ಪಕ್ಷೇತರರಾಗಿ ಎರಡೆಲೆ ಚಿಹ್ನೆಯಲ್ಲಿ ಸ್ಪರ್ಧಿಸಿ ಸೋತು ಪರೋಕ್ಷವಾಗಿ ಬಿಜೆಪಿ ಗೆಲುವಿಗೆ ಕಾರಣರಾಗಿದ್ದರು. ಮಾತಿನ ಮತದಲ್ಲಿ ಅವರು…

ಅಂದು ಸೋಲಿಗೆ ಕಾರಣವೇನು?
ಸೋಲು ನಿರೀಕ್ಷಿತವಾಗಿತ್ತು. ಆದರೆ ಪಕ್ಷೇತರನಾಗಿ ಅತ್ಯಧಿಕ ಮತ ಗಳಿಸಿದ್ದು ಬಳಿಕ ಯಾವುದೇ ಪಕ್ಷೇತರ ಅಭ್ಯರ್ಥಿ ಅಷ್ಟು ದೊಡ್ಡ ಪ್ರಮಾಣದಲ್ಲಿ ಮತ ಗಳಿಸಿಲ್ಲ.

ಈ ಬಾರಿ ನಿಮ್ಮ ರಾಜಕೀಯ ಲೆಕ್ಕಾಚಾರ ಹೇಗೆ ?
ಅಂದಿನ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಬಳಿಕ ಉಳ್ಳಾಲ ಪಟ್ಟಣ ಪಂಚಾಯತ್‌ ಉಪಾಧ್ಯಕ್ಷ , ಪುರಸಭೆಯ ಅಧ್ಯಕ್ಷನಾಗಿ ಪಕ್ಷದಲ್ಲಿ ಜಿಲ್ಲಾ ಮಟ್ಟದ ಜವಾಬ್ದಾರಿ ನಿರ್ವಹಿಸಿದ್ದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಸೌಹಾರ್ದ ವಾತಾವರಣ ಇಲ್ಲಿಲ್ಲ ಮತ್ತು ಕೃಷಿಕರಿಗೆ ಮತ್ತು ಬಡವರಿಗೆ  ಹೆಚ್ಚಿನ ಆದ್ಯತೆ ಲಭಿಸದಿರುವುದರಿಂದ ಕಳೆದ ಐದು ವರ್ಷಗಳಿಂದ ರಾಜಕೀಯದಿಂದ ದೂರವಿದ್ದು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ.

ಈ ಬಾರಿ ಸ್ಪರ್ಧಾಕಾಂಕ್ಷಿಯಾಗಿದ್ದಿರಾ ?
ತಮ್ಮ ಪಕ್ಷ ಸೇರುವಂತೆ ರಾಷ್ಟ್ರೀಯ ಪಕ್ಷಗಳಿಂದ ಆಹ್ವಾನ ಬಂದಿದೆ. ಆದರೆ ಈ ಬಾರಿ ಜಾತ್ಯತೀತ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಉತ್ಸುಕನಾಗಿದ್ದೇನೆ.

ನಿಮ್ಮ ಪ್ರಕಾರ ರಾಜ್ಯ ಮತ್ತು  ಕ್ಷೇತ್ರದಲ್ಲಿ ಈ ಬಾರಿಯ ಫಲಿತಾಂಶ ಹೇಗಿರಬಹುದು?
ರಾಜ್ಯದಲ್ಲಿ ಈ ಬಾರಿ ಅತಂತ್ರ ಸ್ಥಿತಿ ಸೃಷ್ಟಿಯಾಗುವ ಸಾಧ್ಯತೆ ಕಾಣಿಸುತ್ತಿದೆ. ಜೆಡಿಎಸ್‌ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯೇ ಹೆಚ್ಚು. ಕ್ಷೇತ್ರದಲ್ಲಿಯೂ ಈ ಬಾರಿ ಕಠಿನ ಸವಾಲುಗಳಿದ್ದು, ಜೆಡಿಎಸ್‌ ಮತ್ತು ಬಿಜೆಪಿಯ ಅಭ್ಯರ್ಥಿಯನ್ನು ಹೊಂದಿಕೊಂಡು ಫಲಿತಾಂಶದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಹಿಂದಿನ ಚುನಾವಣಾ ಪ್ರಚಾರಕ್ಕೂ ಈಗಿನ ಪ್ರಚಾರ ವೈಖರಿಗೂ ವ್ಯತ್ಯಾಸ ?
ಹಿಂದೆ ಅಬ್ಬರದ ಪ್ರಚಾರವಿತ್ತು. ಹಣಕಾಸಿನ ವಿಚಾರ ಇರಲಿಲ್ಲ; ನೈಜ ಕಾರ್ಯಕರ್ತರಿದ್ದರು. ಈಗ ಧರ್ಮಾಧಾರಿತವಾಗಿ, ಜಾತಿ ಆಧಾರಿತವಾಗಿ ಚುನಾವಣೆ ಪ್ರಚಾರಗಳಾಗುತ್ತಿವೆ. ಚುನಾವಣಾ ನೀತಿಸಂಹಿತೆಯಿಂದ ಅಬ್ಬರಕ್ಕೆ ತೆರೆ ಬಿದ್ದಿದ್ದು, ಹಣಕ್ಕೆ ಪ್ರಾಮುಖ್ಯತೆ ಬಂದಿದೆ.

– ದಿನಕರ ಉಳ್ಳಾಲ, ಉಳ್ಳಾಲ ಕ್ಷೇತ್ರದಲ್ಲಿ 1994ರಲ್ಲಿ ಪಕ್ಷೇತರ ಪರಾಜಿತ ಅಭ್ಯರ್ಥಿ

— ವಸಂತ ಕೊಣಾಜೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.