Urwa Sri Mariyamma; ಫೆ. 11-15: ಪುನರ್‌ ಪ್ರತಿಷ್ಠೆ; ಬ್ರಹ್ಮಕಲಶೋತ್ಸವ

ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರಕ್ಕೆ ವೈಭವದ ಹೊರೆಕಾಣಿಕೆ ಮೆರವಣಿಗೆ

Team Udayavani, Feb 10, 2024, 12:35 AM IST

Urwa Sri Mariyamma; ಫೆ. 11-15: ಪುನರ್‌ ಪ್ರತಿಷ್ಠೆ; ಬ್ರಹ್ಮಕಲಶೋತ್ಸವ

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಫೆ.11ರಿಂದ ಫೆ.15ರ ವರೆಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿರುವ ಪುನರ್‌ಪ್ರತಿಷ್ಠೆ ಸಹಿತ ಬ್ರಹ್ಮಕಲ ಶೋತ್ಸವದ ಪೂರ್ವಭಾವಿಯಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ಮಂಗಳೂರಿನಲ್ಲಿ ಸಂಪನ್ನಗೊಂಡಿತು.

ನಗರದ ಗೋಲ್ಡ್‌ ಪಿಂಚ್‌ ಸಿಟಿ ಮೈದಾನ ಕೂಳೂರು ಹಾಗೂ ಕೇಂದ್ರ ಮೈದಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಮೆರವಣಿಗೆ ಆರಂಭ ವಾಯಿತು. 300ಕ್ಕೂ ಅಧಿಕ ಹೊರೆ ದಿಬ್ಬಣದ ವಾಹನಗಳು ಹಾಗೂ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದರು. ಎರಡೂ ಕಡೆ ಯಿಂದ ಸಾಗಿಬಂದ ಹೊರೆಕಾಣಿಕೆ ಮೆರವಣಿಗೆ ಸಂಜೆ 6.30ರ ಸುಮಾರಿಗೆ ಲೇಡಿಹಿಲ್‌ ನಾರಾಯಣಗುರು ಸರ್ಕಲ್‌ ಬಳಿ ಒಟ್ಟು ಸೇರಿ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಸಾಗಿತು.

ಗೋಲ್ಡ್‌ ಪಿಂಚ್‌ ಸಿಟಿ ಮೈದಾನದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌, ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆಸ ಲಾಗಿದೆ. ಊರ-ಪರವೂರಿನ ಭಕ್ತ ಜನರು ವಿವಿಧ ಪ್ರಕಾರದಲ್ಲಿ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ನಡೆದಿದೆ. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಶ್ರೀದೇವರ ಕೃಪೆಗೆ ಪಾತ್ರರಾಗೋಣ ಎಂದರು.

ಮಂಗಳೂರು ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಕ್ಷೇತ್ರದ ಪುರೋಹಿತರಾದ ವೆಂಕಟರಮಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅನಿಲ್‌ ಕುಮಾರ್‌ ಕರ್ಕೇರ ಬೊಕ್ಕಪಟ್ಣ, ಪ್ರಧಾನ ಸಂಚಾಲಕ ಗೌತಮ್‌ ಸಾಲ್ಯಾನ್‌ ಕೋಡಿಕಲ್‌, ಪ್ರಧಾನ ಕಾರ್ಯದರ್ಶಿ ಜಗದೀಶ್‌ ಬಂಗೇರ ಬೋಳೂರು, ಪ್ರಮುಖರಾದ ಲಕ್ಷ್ಮಣ್‌ ಅಮೀನ್‌ ಕೋಡಿಕಲ್‌, ಚೇತನ್‌ ಬೆಂಗ್ರೆ ಸಹಿತ ಗಣ್ಯರು ಉಪಸ್ಥಿತರಿದ್ದರು.

ನೆಹರೂ ಮೈದಾನದಿಂದ ಆರಂಭವಾದ ಹೊರೆಕಾಣಿಕೆ ಮೆರವಣಿಗೆಗೆ ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ ಅವರು ಚಾಲನೆ ನೀಡಿದರು. ಗಣೇಶ್‌ ಕುಲಾಲ್‌, ಲೋಕೇಶ್‌ ಸುವರ್ಣ, ಶಶಿಕುಮಾರ್‌ ಬೆಂಗ್ರೆ, ಭರತ್‌ ಭೂಷಣ್‌, ಮೋಹನ್‌ ಬೆಂಗ್ರೆ, ನಿತಿನ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಆಕರ್ಷಕ ಹೊರೆದಿಬ್ಬಣ
ಮೆರವಣಿಗೆಯಲ್ಲಿ ಕೇಸರಿ ಪೇಟಧಾರಿಗಳು, ಭಜನ ತಂಡಗಳು, ಕೊಂಬು-ಚೆಂಡೆ, ಕೀಲು ಕುದುರೆ, ಶಿಲ್ಪಕಲಾಗೊಂಬೆ ತಂಡಗಳು, ನಾಸಿಕ್‌ ತಂಡಗಳು ವಿಶೇಷ ಮೆರುಗು ನೀಡಿದವು. ಹೂವು, ತೋರಣ, ಬಾಳೆಗೊನೆ, ಭಗವಾಧ್ವಜ ಅಲಂಕಾರದಿಂದ ಶೋಭಿಸಿದ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯನ್ನು ತರಲಾಯಿತು. ಉರ್ವ ಮಾರಿಯಮ್ಮ ದೇವಸ್ಥಾನ, ಮೀನುಗಾರಿಕೆ ಬೋಟು, ಶ್ರೀರಾಮ ಸಹಿತವಾದ ಅಯೋಧ್ಯೆ ದೇವಸ್ಥಾನ, ಮಹಿಷ ಮರ್ದಿನಿ, ಬಲಿ ಚಕ್ರವರ್ತಿ, ಹನುಮಾನ್‌ ಸ್ತಬ್ದಚಿತ್ರಗಳು ಗಮನ ಸೆಳೆದವು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.