Mangaluru ಶ್ರೀ ಸುಕೃತೀಂದ್ರತೀರ್ಥರ ವಿಶೇಷ ಅಂಚೆ ಲಕೋಟೆ


Team Udayavani, Nov 2, 2023, 12:28 AM IST

Mangaluru ಶ್ರೀ ಸುಕೃತೀಂದ್ರತೀರ್ಥರ ವಿಶೇಷ ಅಂಚೆ ಲಕೋಟೆ

ಮಂಗಳೂರು: ಆಧ್ಯಾತ್ಮಿಕ ಲೋಕದ ಧಾರ್ಮಿಕ ಸಂತರಾದ ಶ್ರೀಮತ್‌ ಸುಕೃತೀಂದ್ರತೀರ್ಥ ಸ್ವಾಮೀಜಿ ಅವರು ಪ್ರಾತಃಸ್ಮರಣೀಯರು. ಅವರ ಹೆಸರಿನಲ್ಲಿ ಅಂಚೆ ಲಕೋಟೆ ಬಿಡುಗಡೆಗೊಳಿಸುತ್ತಿರುವುದು ವಿಶೇಷ ಗೌರವ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಶ್ರೀ ಕಾಶೀ ಮಠದ 19ನೇ ಪೀಠಾಧಿಪತಿಗಳಾಗಿದ್ದ ಶ್ರೀಮತ್‌ ಸುಕೃತೀಂದ್ರತೀರ್ಥರ 75ನೇ ಪುಣ್ಯತಿಥಿಯ ಅಮೃತ ಮಹೋತ್ಸವದ ಅಂಗವಾಗಿ ಶ್ರೀಮತ್‌ ಸುಕೃತೀಂದ್ರ ತೀರ್ಥ ಸ್ವಾಮೀಜಿ ಸೇವಾ ಪ್ರತಿಷ್ಠಾನದ ಸಹಯೋಗದಲ್ಲಿ ಅಂಚೆ ಇಲಾಖೆ ಮಂಗಳೂರು ಹೊರತಂದಿರುವ ವಿಶೇಷ ಅಂಚೆ ಲಕೋಟೆಯನ್ನು ಪ್ರಧಾನ ಅಂಚೆ ಕಚೇರಿಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ಕಲೆ, ಸಂಸ್ಕೃತಿಯ ಮಹತ್ವ ಸಾರುವ ಹಲವು ವಿಶೇಷ ಅಂಚೆ ಲಕೋಟೆಗಳನ್ನು ಅಂಚೆ ಇಲಾಖೆ ಈಗಾಗಲೇ ಬಿಡುಗಡೆಗೊಳಿಸಿದೆ ಎಂದು ಹೇಳಿದರು.

ಶಾಸಕ ಡಿ. ವೇದವ್ಯಾಸ ಕಾಮತ್‌ ಮಾತನಾಡಿ, ಶ್ರೀಮತ್‌ ಸುಕೃತೀಂದ್ರ ತೀರ್ಥ ಸ್ವಾಮಿಗಳು ಹಾಕಿಕೊಟ್ಟ ದಾರಿ ನಮಗೆಲ್ಲಾ ಪ್ರೇರಣದಾಯಿ. ಬಳಿಕ ಶ್ರೀ ಸುಧೀಂದ್ರತೀರ್ಥ ಸ್ವಾಮಿಗಳು ಜಿಎಸ್‌ಬಿ ಸಮುದಾಯಕ್ಕೆ ಬಹಳಷ್ಟು ಕೊಡುಗೆ ನೀಡಿದ್ದರು. ಇದೀಗ ಶ್ರೀಮತ್‌ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಹಲವು ಕಾರ್ಯಗಳು ನಡೆಯುತ್ತಿವೆ. ಭಾರತೀಯ ಅಜಾದೀಕಾ ಅಮೃತ ಮಹೋತ್ಸವ ಸಂದರ್ಭ ದಲ್ಲೇ ಸುಕೃತೀಂದ್ರತೀರ್ಥರ ಪುಣ್ಯತಿಥಿಯ ಅಮೃತ ಮಹೋತ್ಸವ ನಡೆಯುತ್ತಿದೆ ಎಂದು ತಿಳಿಸಿದರು.

ದೇಶ ಕಂಡ ಮಹಾನ್‌ ತಪಸ್ವಿಗಳು, ಆಧ್ಯಾತ್ಮಿಕ ಕೊಡುಗೆ ನೀಡಿದ ವ್ಯಕ್ತಿಗಳ ಅಂಚೆ ಲಕೋಟೆ ಬಿಡುಗಡೆ ಮಾಡುವ ಮೂಲಕ ಅಂಚೆ ಇಲಾಖೆ ಹೊಸತನಕ್ಕೆ ಹೊಂದಿಕೊಳ್ಳುತ್ತಿದೆ ಎಂದರು.

ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಎಂ. ಜಗನ್ನಾಥ್‌ ಕಾಮತ್‌ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಎಂ. ಸುಧಾಕರ್‌ ಮಲ್ಯ ಪ್ರಸ್ತಾವನೆಗೈದರು. ಉಪ ಅಂಚೆ ಅಧೀಕ್ಷಕ ದಿನೇಶ್‌ ಪಿ. ಸ್ವಾಗತಿಸಿ, ಹಿರಿಯ ಅಂಚೆ ಪಾಲಕ ಶ್ರೀನಾಥ್‌ ಎನ್‌.ಬಿ. ವಂದಿಸಿ ದರು. ಪೂರ್ಣಿಮಾ ಹಾಗೂ ಅಕ್ಷತಾ ನಿರೂಪಿಸಿದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.