ಎಸೆಸೆಲ್ಸಿ ಫ‌ಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆಗೆ “ಎ’ ಗ್ರೇಡ್‌


Team Udayavani, Aug 10, 2021, 3:10 AM IST

 ಎಸೆಸೆಲ್ಸಿ ಫ‌ಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆಗೆ “ಎ’ ಗ್ರೇಡ್‌

ಮಹಾನಗರ: ಕೊರೊನಾ ಮುನ್ನೆಚ್ಚರಿಕೆಯನ್ನು ಪಾಲಿಸಿಕೊಂಡು ಜು. 19, 22ರಂದು ನಡೆದ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ದ.ಕ. ಜಿಲ್ಲೆ “ಎ’ ಗ್ರೇಡ್‌ ಪಡೆದುಕೊಂಡಿದೆ.

ಮಾರ್ಚ್‌ ಅಂತ್ಯದಲ್ಲೇ ಮುಗಿಯಬೇಕಾದ ಪರೀಕ್ಷೆ ಲಾಕ್‌ಡೌನ್‌ನಿಂದಾಗಿ ಜುಲೈ ಮಧ್ಯ ಭಾಗಕ್ಕೆ ಮುಂದೂಡಲ್ಪಟ್ಟಿತ್ತು. ದ್ವಿತೀಯ ಪಿಯು ಪರೀಕ್ಷೆ ನಡೆಸದ ಕಾರಣದಿಂದ ಎಸೆಸೆಲ್ಸಿ ಕೂಡ ಪರೀಕ್ಷೆ ಬೇಡ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲೇಬೇಕು ಎಂಬ ಶಿಕ್ಷಣ ಇಲಾಖೆ ಒತ್ತಾಸೆಯಿಂದಾಗಿ ಕೇವಲ ಎರಡೇ ದಿನದಲ್ಲಿ ಕೊರೊನಾ ನಿಯಮಾವಳಿ ಪಾಲಿಸಿಕೊಂಡು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು.

2018-19ರಲ್ಲಿ ದ.ಕ. ಜಿಲ್ಲೆ ಶೇ.86.85 ಫಲಿತಾಂಶದೊಂದಿಗೆ  7ನೇ ಸ್ಥಾನದಲ್ಲಿತ್ತು. ಆದರೆ ಕಳೆದ ಬಾರಿ ಕೊರೊನಾ ಕಾರಣದಿಂದ ಶೇಕಡಾವಾರು ಫಲಿತಾಂಶದ ಬದಲು ಗ್ರೇಡ್‌ ನೀಡಲಾಗಿತ್ತು. ಹೀಗಾಗಿ ಕಳೆದ ಬಾರಿ ಜಿಲ್ಲೆಗೆ “ಬಿ’ ಗ್ರೇಡ್‌ ಲಭಿಸಿದ್ದರೆ ಈ ಬಾರಿ “ಎ’ ಗ್ರೇಡ್‌ ದೊರಕಿದೆ.

ಮೊಬೈಲ್‌ನಲ್ಲೇ ಫಲಿತಾಂಶ:

ಎಸೆಸೆಲ್ಸಿ ಫಲಿತಾಂಶ ಸೋಮವಾರ ಸಂಜೆ ಪ್ರಕಟವಾಗುತ್ತಿದ್ದಂತೆ ಮಂಗಳೂರು ನಗರ ಸಹಿತ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು ಮನೆಯಲ್ಲಿರುವ ಲ್ಯಾಪ್‌ಟಾಪ್‌, ಕಂಪ್ಯೂಟರ್‌ಗಳ ಮುಖಾಂತರವೇ ಫಲಿತಾಂಶ ಪಡೆದುಕೊಂಡರು. ಇನ್ನು ಕೆಲವು ಮಂದಿ ಸ್ನೇಹಿತರು, ಸಂಬಂಧಿಕರಿಗೆ ಪರೀಕ್ಷಾ ಸಂಖ್ಯೆಯನ್ನು ನೀಡಿ ಫಲಿತಾಂಶ ಪಡೆದುಕೊಂಡರು. ಕೊರೊನಾ ಕಾರಣದಿಂದ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ಆಗಮಿಸಲು ಸಾಧ್ಯವಾಗದ ಕಾರಣ ಈ ಬಾರಿ ವಿದ್ಯಾರ್ಥಿಗಳ ಹೆತ್ತವರ ಮೊಬೈಲ್‌ಗೇ ಫಲಿತಾಂಶ ಕಳುಹಿಸುವ ವ್ಯವಸ್ಥೆಯನ್ನು ಇಲಾಖೆ ಮಾಡಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಫಲಿತಾಂಶ ವೀಕ್ಷಿಸಲು ಯಾವುದೇ ತೊಡಕಾಗಲಿಲ್ಲ.

ಶುಭಾಶಯ ವಿನಿಮಯ :

ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಮಂದಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಬಾರಿ ಹೊಸ ಬಗೆಯ ಪರೀಕ್ಷೆ ನಡೆದ ಕಾರಣದಿಂದ ವಿದ್ಯಾರ್ಥಿಗಳು ಹಾಗೂ ಹೆತ್ತವರಿಗೆ ಫಲಿತಾಂಶದ ಬಗ್ಗೆ ಬಹು ನಿರೀಕ್ಷೆ ಹಾಗೂ ಕುತೂಹಲವಿತ್ತು. ಹೆತ್ತವರು ಕೂಡ ತಮ್ಮ ಮಕ್ಕಳು ಗಳಿಸಿದ ಅಂಕಕ್ಕೆ ಅನುಗುಣವಾಗಿ ಕಾಲೇಜು ಸೇರ್ಪಡೆ, ವಿಷಯ ಆಯ್ಕೆಯ ಬಗ್ಗೆ ಲೆಕ್ಕಾಚಾರ ಹಾಕಲು ಪ್ರಾರಂಭಿಸಿದ್ದಾರೆ.

ವರ್ಷಾವಾರು ಫ‌ಲಿತಾಂಶ

ವರ್ಷ  ಶೇ.      ಸ್ಥಾನ

2014-15           89.35   8

2015-16           88.12   3

2016-17           82.39   2

2017-18           85.61   4

2018-19           86.85   7

2019-20           “ಬಿ’ ಗ್ರೇಡ್‌           -

2020- 21         “ಎ’ ಗ್ರೇಡ್‌        –

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.