ಬೀದಿ ದೀಪ ಸಮಸ್ಯೆ: ಉರ್ವಸ್ಟೋರ್ ಕತ್ತಲಲ್ಲಿ!


Team Udayavani, Aug 20, 2018, 10:59 AM IST

20-agust-4.jpg

ಮಹಾನಗರ: ಒಂದು ಸಣ್ಣ ಮಳೆ ಬಂದರೆ ನಗರದ ಅನೇಕ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗುವುದು ಒಂದು ಸಮಸ್ಯೆಯಾದರೆ, ಮೇ ತಿಂಗಳಲ್ಲಿ ಸುರಿದಂತಹ ಜೋರಾದ ಮಳೆಗೆ ನಗರದ ಕೆಲವು ರಸ್ತೆಗಳಲ್ಲಿ ಕೆಟ್ಟು ಹೋದಂತಹ ಬೀದಿ ದೀಪಗಳು ಇನ್ನೂ ದುರಸ್ತಿಯಾಗಲಿಲ್ಲ…! ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸದಾ ಚಟುವಟಿಕೆಗಳಿಂದ ಕೂಡಿದ ನಗರದ ಪ್ರಮುಖ ಪ್ರದೇಶಗಳ ಪೈಕಿ ಉರ್ವಸ್ಟೋರ್‌ ಕೂಡ ಒಂದು. ಆದರೆ ಕೆಲವು ದಿನಗಳಿಂದ ರಾತ್ರಿ ವೇಳೆ ಈ ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪ ದೀಪಗಳು ಉರಿಯುತ್ತಿಲ್ಲ. ಇದರಿಂದಾಗಿ ಉರ್ವಸ್ಟೋರ್‌ ಸುತ್ತಮುತ್ತಲಿನ ಪ್ರದೇಶಗಳು ಕತ್ತಲಲ್ಲಿವೆ.

ಉರ್ವಸ್ಟೋರ್‌ ಪ್ರದೇಶದಲ್ಲಿನ ಮುಖ್ಯ ರಸ್ತೆಗಳಿಗೆ ಅಳವಡಿಸಲಾದ ಡಿವೈಡರ್‌ ನಲ್ಲಿರುವ ಅನೇಕ ಬೀದಿ ದೀಪಗಳು ಕೆಟ್ಟು ಹೋಗಿವೆ. ಉರ್ವಸ್ಟೋರ್‌ ಸುತ್ತಮುತ್ತ ಅನೇಕ ಪ್ರಮುಖ ಕಚೇರಿಗಳಿವೆ. ಇಲ್ಲೇ ಪಕ್ಕದಲ್ಲಿ ಜಿಲ್ಲಾ ಪಂಚಾಯತ್‌, ಪೊಲೀಸ್‌ ಠಾಣೆ, ಇನ್ಫೋಸಿಸ್‌ ಸೇರಿದಂತೆ ಪ್ರಮುಖ ಕಚೇರಿ ಇದ್ದು, ಅಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲೇ ಬೀದಿ ದೀಪ ಉರಿಯುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. 

ಸುತ್ತಮುತ್ತಲೂ ಇದೇ ಸಮಸ್ಯೆ
ಅಂದಹಾಗೆ ಕೇವಲ ಉರ್ವಸ್ಟೋರ್‌ ಬಳಿ ಮಾತ್ರ ಬೀದಿ ದೀಪ ಕೆಟ್ಟು ಹೋಗಿಲ್ಲ. ಇನ್ಫೋಸಿಸ್‌ ಹಿಂಭಾಗದ ಸಂಕೇಶ ಮೊದನೇ ಕ್ರಾಸ್‌ ಬಳಿ ಕೆಲವು ತಿಂಗಳುಗಳಿಂದ ಬೀದಿ ದೀಪ ಉರಿಯುತ್ತಿಲ್ಲ. ಸಣ್ಣ ಮಳೆ ಗಾಳಿ ಬಂದರೆ ಸಾಕು ನಗರದ ಕೊಟ್ಟಾರ ಕ್ರಾಸ್‌, ಲಾಲ್‌ಬಾಗ್‌, ಬಿಜೈ, ಚಿಲಿಂಬಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿನ ಬೀದಿ ದೀಪಗಳು ಕೆಟ್ಟು ಹೋಗುತ್ತಿವೆ. ಈ ಬಗ್ಗೆ ಸಾರ್ವಜನಿಕರು ಈ ಹಿಂದೆಯೇ ಪಾಲಿಕೆಗೆ ಅಳಲು ತೋಡಿಕೊಂಡರೂ ಬೀದಿ ದೀಪ ದುರಸ್ತಿಯಾಗಲಿಲ್ಲ.

‘ಸುದಿನ’ ವರದಿ ಮಾಡಿತು
ನಗರದ ಅನೇಕ ಕಡೆಗಳಲ್ಲಿ ಬೀದಿ ದೀಪ ಉರಿಯುತ್ತಿಲ್ಲ ಎಂಬ ವಿಷಯದ ಕುರಿತು ‘ಸುದಿನ’ ಈ ಹಿಂದೆಯೇ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಪಾಲಿಕೆ ಕೆಲವು ಕಡೆಗಳಲ್ಲಿ ದೀಪ ದುರಸ್ತಿ ಕಾರ್ಯಕೂಡ ಆರಂಭಿಸಿತು. ಆದರೂ ಇನ್ನೂ ಅನೇಕ ಕಡೆಗಳಲ್ಲಿ ಸಮಸ್ಯೆ ಅದೇ ರೀತಿ ಹಾಗೇ ಉಳಿದಿದೆ.

ಕೇಬಲ್‌ ಸಮಸ್ಯೆ
ಉರ್ವಸ್ಟೋರ್‌, ಚಿಲಿಂಬಿ ಪರಿಸರದಲ್ಲಿ ಬೀದಿ ದೀಪ ಉರಿಯದಿರುವ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಪಾಲಿಕೆಗೆ ದೂರು ನೀಡಿದ್ದೇನೆ. ವಿದ್ಯುತ್‌ ಕೇಬಲ್‌ಗ‌ಳಿಗೆ ಹಾನಿಯಿಂದಾಗಿ ಈ ಸಮಸ್ಯೆಯಿಂದ ಉಂಟಾಗಿದೆ. ಅಧಿಕಾರಿಗಳ ಜತೆ ಮತ್ತೊಮ್ಮೆ ಚರ್ಚಿಸಿ ಕೂಡಲೇ ದುರಸ್ತಿ ಕಾರ್ಯ ನಡೆಸಲಾಗುವುದು.
 - ನಾಗವೇಣಿ, ಸ್ಥಳೀಯ
    ಕಾರ್ಪೊರೇಟರ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.