ವಿದ್ಯಾರ್ಥಿನಿ ಸಾವು: ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ


Team Udayavani, Jul 29, 2017, 11:18 AM IST

29-MLR-1.jpg

ಮಂಗಳೂರು: ಮೂಡಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ್ದು, ಆಕೆಯ ಪೋಷಕರು ಇದೊಂದು ಕೊಲೆ ಎಂದು ಆರೋಪಿಸುವ ಮೂಲಕ ಉನ್ನತ ಮಟ್ಟದ ಪೊಲೀಸ್‌ ತನಿಖೆಗೆ ಆಗ್ರಹಿಸಿದ್ದಾರೆ. 

ಇನ್ನೊಂದೆಡೆ “ನಮ್ಮ ಶಾಲೆಯಲ್ಲಿ ಓದುತ್ತಿದ್ದ ಕಾವ್ಯಾ ಆತ್ಮಹತ್ಯೆ ಬಗ್ಗೆ ಕೆಲವರು ಇಲ್ಲ-ಸಲ್ಲದ ಅಪ ಪ್ರಚಾರ ಮಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಯಾವುದೇ ರೀತಿಯ ತನಿಖೆಗೂ ಸಿದ್ಧ’ ಎಂಬುದಾಗಿ ಆಳ್ವಾಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ್‌ ಆಳ್ವ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್‌ ಕ್ರೀಡಾ ಪಟುವಾಗಿದ್ದ ಕಾವ್ಯಾ (15) ಮೃತಪಟ್ಟಿರುವ ವಿದ್ಯಾರ್ಥಿನಿ. ಆಕೆ ಮಂಗಳೂರು ತಾಲೂಕಿನ ಕಟೀಲು ದೇವರಗುಡ್ಡೆ ನಿವಾಸಿ ಲೋಕೇಶ್‌ ಮತ್ತು ಬೇಬಿ ದಂಪತಿ ಪುತ್ರಿ. ಆಳ್ವಾಸ್‌ ಶಿಕ್ಷಣ ಸಂಸ್ಥೆ ಯಲ್ಲಿ ಕ್ರೀಡಾ ಕೋಟಾದಡಿ ಉಚಿತ ಸೀಟು ಪಡೆದು ಅಲ್ಲಿನ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಕಾವ್ಯಾ ಕಲಿಯುತ್ತಿದ್ದಳು. ಜು.20ರಂದು ಹಾಸ್ಟೆಲ್‌ ನಲ್ಲಿ ಕಾವ್ಯಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೂಡಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. 

ಆದರೆ ಕಾವ್ಯಾ ಸಾವಿನ ಬಗ್ಗೆ ಅನುಮಾನಗೊಂಡಿರುವ ಆಕೆಯ ಪೋಷಕ‌ರು, ಹೆಚ್ಚಿನ ತನಿಖೆ ನಡೆಸುವಂತೆ ಆಗ್ರಹಿಸಿ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ಕೂಡ ನೀಡಿದ್ದಾರೆ. ಆಯುಕ್ತರಿಗೆ ಕಾವ್ಯಾ ತಂದೆ ಲೋಕೇಶ್‌ ನೀಡಿರುವ ದೂರಿನಲ್ಲಿ “ನನ್ನ ಮಗಳು ಕಾವ್ಯಾ(15) ಮೂಡಬಿದಿರೆಯ ಆಳ್ವಾಸ್‌ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದು, ಆಳ್ವಾಸ್‌ ಹಾಸ್ಟೆಲ್‌ನಲ್ಲಿ ಇದ್ದಳು. ಜುಲೈ 20ರಂದು ಗುರುವಾರ ರಾತ್ರಿ 8 ಗಂಟೆಗೆ ನಮಗೆ ಅವಳ ಸಾವಿನ ಬಗ್ಗೆ ಕರೆ ಬಂತು. ಕೂಡಲೇ ಹಾಸ್ಟೆಲ್‌ಗೆ ಹೊರಟ ನಾವು 9 ಗಂಟೆಗೆ ಅಲ್ಲಿ  ತಲುಪಿದೆವು. ಆ ಹೊತ್ತಿಗಾಗಲೇ ಶವವನ್ನು ಶವಾಗಾರ ದಲ್ಲಿ ಇಡಲಾಗಿತ್ತು. ಪೆಟ್ಟಿಗೆಯನ್ನು ತೆರೆದು ನಮಗೆ ತೋರಿಸಲಾಯಿತು. ನನ್ನ ಮಗಳು ಹೇಗೆ ಮೃತಪಟ್ಟಿದ್ದಾಳೆ, ಎಷ್ಟು ಹೊತ್ತಿಗೆ ಸಾವು ಸಂಭವಿಸಿದೆ ಎಂಬುದು ಗೊತ್ತಾಗಲಿಲ್ಲ. ರಾತ್ರಿ ಸುಮಾರು 2 ಗಂಟೆಗೆ ಅಲ್ಲಿಂದ ಮನೆಗೆ ಬಂದೆವು. ಮರುದಿನ ಬೆಳಗ್ಗೆ ಮತ್ತೆ ಮೂಡಬಿದಿರೆಗೆ ಹೋಗಿ ಮರಣೋತ್ತರ ಪರೀಕ್ಷೆ ಮಾಡಿಸಿ ಶವವನ್ನು ಮನೆಗೆ ತಂದೆವು’. 

“ಬುಧವಾರ ಸಂಜೆ ಅಂದರೆ ಮೃತಪಟ್ಟ 24 ಗಂಟೆಗಿಂತಲೂ ಕಡಿಮೆ ಅವಧಿ ಮುಂಚೆ ನಾನು ಮತ್ತು ಮನೆಯವರೆಲ್ಲ ಅವಳೊಡನೆ ಫೋನ್‌ನಲ್ಲಿ ಮಾತನಾಡಿದ್ದೇವೆ. ಅವಳು ತುಂಬಾ ಲವಲವಿಕೆಯಿಂದ ಇದ್ದಳು. ಇದೊಂದು ಅಸಹಜ ಸಾವಾಗಿದ್ದು, ಹೇಗೆ ಸಂಭವಿಸಿದೆ ಎಂದು ಗೊತ್ತಾಗುತ್ತಿಲ್ಲ. ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯವರು ಮಗಳು ಮೃತಪಟ್ಟ ಕೂಡಲೇ ನಮಗೆ ವಿಷಯ ತಿಳಿಸದೆ, ಶವ ಸಂಸ್ಕಾರಕ್ಕೂ ಬಾರದೆ ಇದ್ದದ್ದು, ನನ್ನ ಮಗಳ ಸಾವಿನ ಕಾರಣಗಳ ಬಗ್ಗೆ ಅನುಮಾನ ಮೂಡಿಸಲಾರಂಭಿಸಿದೆ. ಹೀಗಾಗಿ ತಾವು ಈ ಪ್ರಕರಣವನ್ನು ಖುದ್ದು ಪರಿಶೀಲಿಸಿ, ಸೂಕ್ತ ತನಿಖೆಗೆ ಆದೇಶಿಸಿ ನಮಗೆ ನ್ಯಾಯ ಕೊಡಿಸಬೇಕೆಂದು’ ಕೋರಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಆಳ್ವಾಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ್‌ ಆಳ್ವ “ಕಾವ್ಯಾ ಕೊಲೆಯಾಗಲು ಕಾರಣವೇ ಇಲ್ಲ. ನಾವು ಯಾವುದೇ ತನಿಖೆಗೂ ಸಿದ್ಧ. ಮಾಧ್ಯಮವಾಗಲಿ, ಪೊಲೀಸ್‌ ಇಲಾಖೆಯಾಗಲಿ ಅಥವಾ ಜವಾಬ್ದಾರಿಯುತ ಯಾರೇ ಆಗಲಿ ನನ್ನಲ್ಲಿ ಈ ಬಗ್ಗೆ ಮುಚ್ಚುಮರೆಯಿಲ್ಲದೆ ವಿಚಾರಿಸಬಹುದು. ಪ್ರಕರಣದ ತನಿಖೆ ನಿರ್ಭೀತಿಯಿಂದ ಆದಷ್ಟು ಬೇಗನೆ ಆಗಲಿ. ನನಗೆ 26 ಸಾವಿರ ವಿದ್ಯಾರ್ಥಿ ಗಳ ಜವಾಬ್ದಾರಿಯಿದೆ. ಅವರ ಪೋಷಕರ ಆಶೋತ್ತರಗಳ ಬಗ್ಗೆ ಎಚ್ಚರಿಕೆಯಿದೆ. ನನ್ನೆದುರು ಅಗಾಧ ಕೆಲಸಗಳು ಕಾದಿವೆ. ನನಗೆ ದಯವಿಟ್ಟು ಈ ರೀತಿಯ ಊಹಾಪೋಹಗಳ ಮೂಲಕ ಚಿತ್ರಹಿಂಸೆ ಕೊಡಬೇಡಿ. ಈ ಪ್ರಕರಣದ ಬಗ್ಗೆ ಪೊಲೀಸರ ಮಟ್ಟದಲ್ಲಿ ಯಾವುದೇ ರೀತಿಯ ತನಿಖೆ ಆದರೂ ಅದಕ್ಕೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ಹೀಗಿರುವಾಗ ಊಹಾಪೋಹಗಳಿಗೆ ಅಥವಾ ಸುಳ್ಳು ಆರೋಪಗಳಿಗೆ ಜನತೆ ಕಿವಿಗೊಡಬಾರದು’ ಎಂಬುದಾಗಿ ಅವರು ಮನವಿ ಮಾಡಿದ್ದಾರೆ.

ಎಸಿಪಿಯಿಂದ ವಿಚಾರಣೆ: ಪೊಲೀಸ್‌ ಆಯುಕ್ತರು 
ಕಾವ್ಯಾ ನಿಗೂಢವಾಗಿ ಸಾವನ್ನಪ್ಪಿದ ಬಗ್ಗೆ ಆಕೆಯ ಕುಟುಂಬಸ್ಥರು ಹಲವು ಸಂಶಯಗಳನ್ನು ವ್ಯಕ್ತಪಡಿಸಿರುವುದರಿಂದ ಈ ಬಗ್ಗೆ ವಿಚಾರಣೆ ನಡೆಸುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ರಾಜೇಂದ್ರ ಡಿ.ಎಸ್‌. ಅವರಿಗೆ ಸೂಚಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಟಿ. ಆರ್‌. ಸುರೇಶ್‌ ತಿಳಿಸಿದ್ದಾರೆ.  ವಿದ್ಯಾರ್ಥಿನಿ ಕಾವ್ಯಾ ಅವರ ಕುಟುಂಬಸ್ಥರು ತನ್ನ ಕಚೇರಿಗೆ ಆಗಮಿಸಿ ದೂರು ಸಲ್ಲಿಸಿದ್ದರು ಎಂದವರು ವಿವರಿಸಿದ್ದಾರೆ. ಕಾವ್ಯಾ ಅವರ ಸಾವಿನ ಬಗ್ಗೆ ಮೂಡಬಿದಿರೆ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ. ಇದೀಗ ಆಕೆಯ ಕುಟುಂಬದವರು ವ್ಯಕ್ತಪಡಿಸಿರುವ ಸಂಶಯ ಹಾಗೂ ಎತ್ತಿರುವ ಪ್ರಶ್ನೆಗಳ ಕುರಿತಂತೆ ವಿಚಾರಣೆ ನಡೆಸುವಂತೆ ಎಸಿಪಿ ರಾಜೇಂದ್ರ ಡಿ. ಎಸ್‌. ಅವರಿಗೆ ಸೂಚಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ವಿವರಿಸಿದ್ದಾರೆ. 

ಟಾಪ್ ನ್ಯೂಸ್

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.