ಬತ್ತಿದ ಪುಣ್ಯ ನದಿಗಳು: ವಾರ ಕಳೆದರೆ ನೀರಿಲ್ಲ!


Team Udayavani, Mar 14, 2019, 4:39 AM IST

15-march-1.jpg

ಸುಬ್ರಹ್ಮಣ್ಯ: ಬೇಸಗೆಯ ಬಿರುಬಿಸಿಲು ಹೆಚ್ಚುತ್ತಿದ್ದಂತೆ ನೀರಿನ ಆಗರಗಳು ಬತ್ತುತ್ತಲಿವೆ. ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ನೀರಿನ ಬರ ತಟ್ಟಿದೆ. ಒಂದೆಡೆ ಪುಣ್ಯ ನದಿಗಳು ದಿನದಿಂದ ದಿನಕ್ಕೆ ಬತ್ತುತ್ತಾ ಹೋಗುತ್ತಿದ್ದರೆ, ಇನ್ನೊಂದಡೆ ಅಭಿವೃದ್ಧಿ ಕಾಮಗಾರಿಗಳು ನಡೆಸುವ ಸಂದರ್ಭ ನೀರಿನ ಪೈಪುಗಳು ಒಡೆದು ಹಾನಿಯಾಗುತ್ತಿವೆ. ಪರಿಣಾಮ ಅಲ್ಪ-ಸ್ವಲ್ಪ ನೀರಿನ ಸರಬರಾಜಿನಲ್ಲೂ ವ್ಯತ್ಯಯವಾಗುತ್ತಿದೆ.

ನದಿ, ಹಳ್ಳ ಕೊಳ್ಳಗಳಲ್ಲಿ ನೀರು ಬತ್ತಿ ಹೋಗಿದೆ. ಪಶ್ಚಿಮ ಘಟ್ಟದ ತಪ್ಪಲಿನಿಂದ ಹರಿದು ಬರುವ ಕುಮಾರಧಾರಾ, ದರ್ಪಣ ತೀರ್ಥ ನದಿಗಳಲ್ಲಿ ನೀರು ಬತ್ತಿದೆ. ಕೆಲ ದಿನಗಳ ಮಟ್ಟಿಗೆ ನೀರಿನ ಹರಿವು ಇದ್ದರೂ ವಾರದೊಳಗೆ ನೀರಿನ ಕ್ಷಾಮ ತಲೆದೋರುವ ಮುನ್ಸೂಚನೆ ಇದೆ.

ಕಾಲೇಜಿನಲ್ಲಿ ಕಷ್ಟ
ಕ್ಷೇತ್ರದಲ್ಲಿ ನೀರಿನ ಕೊರತೆ ನೀಗಿಸಲು ದೇವಸ್ಥಾನ ಮತ್ತು ಸ್ಥಳೀಯಾಡಳಿತ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಜಾರಿಗೆ ತಂದಿವೆ. ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿ ವೇಳೆ ನೀರು ಸರಬರಾಜು ಆಗುವ ಪೈಪುಗಳು ಒಡೆದು ನೀರು ಪೋಲಾಗುತ್ತಿದೆ. ಎರಡು ದಿನಗಳಿಂದ ನಗರದಲ್ಲಿ ನೀರಿನ ಸಮಸ್ಯೆ ಕಂಡುಬಂದಿದೆ. ಕಾಶಿಕಟ್ಟೆ ಬಳಿ ಪೈಪು ಒಡೆದು ನೀರಿನ ಸಂಪರ್ಕ ಕಡಿತಗೊಂಡಿದೆ. ಇದರಿಂದ ದೇವಸ್ಥಾನದಿಂದ ನಡೆಸುತ್ತಿರುವ ಕೆಎಸ್‌ ಎಸ್‌ ಕಾಲೇಜಿನಲ್ಲಿ ಬುಧವಾರ ನೀರಿನ ಸಮಸ್ಯೆ ಎದುರಾಯಿತು. ಮಧ್ಯಾಹ್ನ ಹೊತ್ತು ಕಾಲೇಜಿನ ವಿದ್ಯಾರ್ಥಿಗಳು ಕೈ ತೊಳೆಯಲು ನೀರಿಲ್ಲದಂತಾಗಿದೆ. ಮಕ್ಕಳು ದೇವಸ್ಥಾನ, ಹೊಟೇಲ್‌ಗ‌ಳಿಗೆ ಊಟಕ್ಕೆ ತೆರಳಿದ ಸನ್ನಿವೇಶ ಕಂಡುಬಂದಿತು. ಕಾಲೇಜಿಗೆ ಮಧ್ಯಾಹ್ನ ಊಟ ದೇವಸ್ಥಾನದಿಂದ ಸರಬರಾಜಾಗುತ್ತಿದೆ. ಊಟದ ಬಳಿಕ ಕೈ ತೊಳೆಯಲು ನೀರು ಲಭ್ಯವಿಲ್ಲದ ಕಾರಣ ಊಟ ತರುವ ಬದಲು ಮಕ್ಕಳೇ ದೇವಸ್ಥಾನಕ್ಕೆ ಊಟಕ್ಕೆ ತೆರಳಿದರು. ಕಾಲೇಜಿನಲ್ಲಿ ಇತರ ಬಳಕೆಗೂ ನೀರು ಸಿಗದೆ ವಿದ್ಯಾರ್ಥಿಗಳು ಜತೆಗೆ ಉಪನ್ಯಾಸಕರು, ಸಿಬಂದಿ ಸಂಕಷ್ಟ ಅನುಭವಿಸಿದರು.

ರಂಗಪೂಜೆ ಪ್ರಮಾಣ ಕಡಿತ
ಪೈಪು ಒಡೆದು ನೀರಿನ ಸಂಪರ್ಕ ಕಡಿಗೊಂಡಿದ್ದರಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತಕ್ಕೆ ಒಳಪಟ್ಟ ಕಾಶಿಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕೂಡ ನೀರಿನ ಕೊರೆತೆ ಕಂಡುಬಂದಿದೆ. ಮಂಗಳವಾರ ದೇವಸ್ಥಾನದಲ್ಲಿ ನಡೆಯುವ ಪ್ರಮುಖ ಸೇವೆಯಾದ ರಂಗಪೂಜೆಯ ಪ್ರಮಾಣವನ್ನು ನೀರಿಲ್ಲ ಎನ್ನುವ ಕಾರಣಕ್ಕೆ ಕಡಿಮೆ ಮಾಡಲಾಗಿತ್ತು. ಕುಮಾರಧಾರಾ ನದಿಯಲ್ಲಿ ತೀರ್ಥ ಸ್ನಾನಕ್ಕೆ ನೀರಿನ ಕೊರತೆ ಇದ್ದು, ಕೆಲವೇ ದಿನಗಳಲ್ಲಿ ಸ್ನಾನಕ್ಕೂ ನೀರಿಲ್ಲ ಎನ್ನುವ ಸ್ಥಿತಿ ತಲೆದೋರಬಹುದು. ಕ್ಷೇತ್ರಕ್ಕೆ ಬರುವ ಭಕ್ತರ ನೀರಿನ ದಾಹ ತೀರಿಸಲು ದೇವಸ್ಥಾನದ ಅಧಿಕಾರಿಗಳು, ಆಡಳಿತ ಮಂಡಳಿ ಪರದಾಡುವ ದಿನಗಳು ಹತ್ತಿರದಲ್ಲಿವೆ. ಕ್ಷೇತ್ರದಲ್ಲಿ ಬಿಸಿಲ ತಾಪ ಹೆಚ್ಚಿದೆ. ಬಿಸಿಯ ವಾತಾವರಣವಿದೆ. ಭಕ್ತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಹಿಂದೊಮ್ಮೆ ಗಂಭೀರ ಸ್ಥಿತಿ
ಕೆಲ ವರ್ಷಗಳ ಹಿಂದೆ ಬರಗಾಲದ ಭೀಕರತೆ ಕ್ಷೇತ್ರದಲ್ಲಿ ಕಂಡುಬಂದಿತ್ತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಾವಿಯಲ್ಲಿ ನೀರಿನ ಮಟ್ಟ ಕುಸಿತ ಕಂಡುಬಂದಿತ್ತು. ಇದರಿಂದ ತೀರ್ಥ ಬಾಟಲಿಗಳ ಪೂರೈಕೆ ಕೆಲವು ದಿನಗಳವರೆಗೆ ಸ್ಥಗಿತಗೊಳಿಸಲಾಗಿತ್ತು.

ದುರಸ್ತಿ ಕಾರ್ಯ
ನೀರಿನ ಸಮಸ್ಯೆ ಗಂಭೀರ ಹಂತಕ್ಕೆ ತಲುಪುತ್ತಿರುವುದನ್ನು ಮನಗಂಡ ಸ್ಥಳೀಯಾಡಳಿತ ಕಾಶಿಕಟ್ಟೆ ಹಾಗೂ ಇತರೆಡೆಗಳಲ್ಲಿ ಕಾಮಗಾರಿಯಿಂದ ಕೆಟ್ಟಿರುವ ಪೈಪುಗಳ ಮರುಜೋಡಣೆ ಕಾರ್ಯವನ್ನು ಬುಧವಾರ ಸಂಜೆಯಿಂದ ಆರಂಭಿಸಿದ್ದಾರೆ. ಸಿಬಂದಿ ಸರಿಪಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಭಕ್ತರಿಗೆ ತೊಂದರೆ ಆಗದಂತೆ ಎಚ್ಚರಿಕೆ
ನೀರಿನ ಕೊರತೆಯಿಂದ ಕಾಶಿಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಂಗಪೂಜೆ ಸಂಖ್ಯೆ ಕಡಿತ ಮಾಡಿರುವುದು ನಿಜ. ಅಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದೇವೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಿದ್ದೇವೆ. ಭಕ್ತರು ನಿರಾಳವಾಗಿ ಕ್ಷೇತ್ರವನ್ನು ಸಂಪರ್ಕಿಸಬಹುದು.
– ರವೀಂದ್ರ ಎಂ.ಎಚ್‌.
ಕಾರ್ಯನಿರ್ವಹಣಾಧಿಕಾರಿ,
ಕುಕ್ಕೆ ಸುಬ್ರಹ್ಮಣ್ಯ ದೇಗುಲ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.