Subramanya: ಪಾರ್ಕಿಂಗ್‌ ನಿಯಮ ಉಲ್ಲಂಘಿಸಿದರೆ ದಂಡ ಅಸ್ತ್ರ ಜಾರಿ

ನೇರ ದಂಡದ ಜತೆಗೆ ಪೊಲೀಸ್‌ ಠಾಣೆಯಿಂದಲೇ ಸಿಸಿ ಕೆಮರಾ ಮೂಲಕ ನಿಗಾ ;ಹೊರ ಊರಿನವರೂ ತಪ್ಪಿಸಿಕೊಳ್ಳುವಂತಿಲ್ಲ; ಮನೆಗೇ ನೋಟಿಸ್‌ ಹೋಗುತ್ತದೆ

Team Udayavani, Aug 25, 2024, 1:08 PM IST

1

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಸುಗಮ ಸಂಚಾರ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೊಸದಾಗಿ ಜಾರಿ ಮಾಡಲಾಗಿರುವ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಶನಿವಾರದಿಂದ ದಂಡ ವಾಪತಿಸಬೇಕಾದ ನಿಯಮ ಜಾರಿಗೆ ಬಂದಿದೆ.

ಪ್ರಸಿದ್ಧ ಯಾತ್ರಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಸುಬ್ರಹ್ಮಣ್ಯ ಪೊಲೀಸ್‌ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌, ವಿವಿಧ ಇಲಾಖೆಗಳು, ಸಾರ್ವಜನಿಕರ ಸಭೆ ನಡೆಸಿ ಹೊಸ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಜಾರಿಗೊಳಿಸಲಾಗಿತ್ತು. ಹೊಸ ನಿಯಮದ ಬಗ್ಗೆ ಪ್ರಾಯೋಗಿಕ ಹಂತ, ಪ್ರಾಥಮಿಕ ಹಂತದ ಮೂಲಕ ಸಾರ್ವಜನಿಕರಿಗೆ ಪ್ರಚಾರ ಮಾಡಲಾಗಿತ್ತು. ಪೇಟೆಯಲ್ಲಿ ಹೊಸ ನಿಯಮದ ಬಗ್ಗೆ ಈಗಾಗಲೇ ತಿಳಿಸಲಾಗಿರುವುದರಿಂದ ಶನಿವಾರಿಂದ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ತಯಾರಾಗಿದ್ದರೆ. ಮೊದಲ ದಿನ ದಂಡ ಪಾವತಿಸಿದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ವಾಹನಗಳ ಚಕ್ರಕ್ಕೆ ಬೀಗ ಪದ್ಧತಿ
ಸುಬ್ರಹ್ಮಣ್ಯ ಪೇಟೆಯಲ್ಲಿ ಸುಗಮ ಸಂಚಾರ ಹಿನ್ನಲೆಯಲ್ಲಿ ಕಾಶಿಕಟ್ಟೆಯಿಂದ ರಥಬೀದಿ ಜಂಕ್ಷನ್‌ ವರೆಗೆ ಒನ್‌ವೇ ಪ್ರವೇಶ ಹಾಗೂ ಸವಾರಿ ಮಂಟಪದಿಂದ ಕಾಶಿಕಟ್ಟೆ ವರೆಗೆ ಒನ್‌ವೇ ನಿರ್ಗಮನ ನಿಯಮ ಮಾಡಲಾಗಿದೆ. ಕಾಶಿಕಟ್ಟೆಯಿಂದ ರಥಬೀದಿ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ ಪಾರ್ಕಿಂಗ್‌ ನಿಷೇಧಿಸಲಾಗಿದ್ದು, ಹಾಗೂ ಸವಾರಿ ಮಂಟಪದಿಂದ ಕಾಶಿಕಟ್ಟೆವರೆಗೆ ಒಂದು ಬದಿ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸುವವರಿಗೆ ಹಾಗೂ ಪಾರ್ಕಿಂಗ್‌ ನಿಷೇಧಿತ ಪ್ರದೇಶದಲ್ಲಿ ವಾಹನ ನಿಲುಗಡೆಗೂ ದಂಡ ಬೀಳಲಿದೆ. ವಾಹನಗಳ ಚಕ್ರಕ್ಕೆ ಲಾಕ್‌ ಕೂಡ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರ ನಿಯಮ ಉಲ್ಲಂಘನೆಗೂ ದಂಡ
ಇಲ್ಲಿ ಸಂಚಾರ, ಪಾರ್ಕಿಂಗ್‌ ನಿರ್ವಹಣೆಗೆ 7 ಗೃಹರಕ್ಷಕರು ಹಾಗೂ ಓರ್ವ ಪೊಲೀಸ್‌ ಸಿಬಂದಿ ಕರ್ತವ್ಯದಲ್ಲಿರಲಿದ್ದು ಅವರು ಸಂಚಾರ, ಪಾರ್ಕಿಂಗ್‌ ವ್ಯವಸ್ಥೆ ಮೇಲೆ ನಿಗಾ ಇರಿಸಲಿದ್ದಾರೆ. ಹೊಸ ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸಾರ್ವಜನಿಕರೂ ಠಾಣೆಗೆ ಅಥವಾ ಸಿಬಂದಿಗೆ ಮಾಹಿತಿ ನೀಡಬಹುದಾಗಿದೆ. ಠಾಣೆ ಯಿಂದ ಸಿಸಿ ಕೆಮರಾ ಮೂಲಕ ಸಂಚಾರ, ಪಾರ್ಕಿಂಗ್‌ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸ ಲಾಗುತ್ತದೆ. ನಿಯಮ ಉಲ್ಲಂಘಿಸುವವರಿಗೆ ದಂಡವನ್ನು ಆ ಮೂಲಕವೂ ವಿಧಿಸಲಾಗುತ್ತದೆ.

ಕೋರ್ಟ್‌ನಿಂದಲೇ ಮನೆಗೆ ನೋಟೀಸ್‌ ಬರಲಿದೆ. ಇದಲ್ಲದೆ ಇತರ ಸಂಚಾರ ನಿಯಮಗಳಾದ ಹೆಲ್ಮೆಟ್‌ ರಹಿತ ಪ್ರಯಾಣ ಸೇರಿದಂತೆ ಮತ್ತಿತರ ನಿಯಮ ಉಲ್ಲಂಘನೆಗೂ ದಂಡ ವಿಧಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಯಮ ಪಾಲಿಸಲು ಸಹಕರಿಸಿ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ, ಪಾರ್ಕಿಂಗ್‌ ನಿಯಮ ಯಶಸ್ವಿ ಹಂತದಲ್ಲಿದ್ದು, ಹೆಚ್ಚಿನ ಜನರು ಹೊಸ ನಿಯಮದ ಬಗ್ಗೆ ಶ್ಲಾಘಿಸಿದ್ದಾರೆ. ಆದ್ದರಿಂದ ಇದೀಗ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಪೇಟೆಯ ಸುಗಮ ಸಂಚಾರದ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಸಂಚಾರ, ಪಾರ್ಕಿಂಗ್‌ ನಿಯಮ ಪಾಲಿಸಬೇಕು.
-ಕಾರ್ತಿಕ್‌,ಉಪ ನಿರೀಕ್ಷಕರು ಸುಬ್ರಹ್ಮಣ್ಯ ಠಾಣೆ.

ವಾಹನಕ್ಕೆ ದಂಡದ ಗರಿಷ್ಠ ಲೆಕ್ಕಾಚಾರ
ಪಾರ್ಕಿಂಗ್‌ ನಿಯಮ ಉಲ್ಲಂಘಿಸಿದರೆ ಎಲ್ಲ ವಿಧದ ವಾಹನಗಳಿಗೆ 1 ಸಾವಿರ ರೂ.
ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದರೆ ಎಲ್ಲ ವಿಧದ ವಾಹನಗಳಿಗೆ 500 ರೂ.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.