ಅದೃಷ್ಟದ ಜತೆಗೆ ಪ್ರಯತ್ನದ ಬಲವಿದ್ದಾಗ ಯಶಸ್ಸು: ಎಂಆರ್‌ಜಿ ಪ್ರಕಾಶ್‌ ಶೆಟ್ಟಿ

ಆಳ್ವಾಸ್‌ ಪ್ರಗತಿ - ಉದ್ಯೋಗ ಮೇಳ ಉದ್ಘಾಟಿಸಿದ ಎಂಆರ್‌ಜಿ ಪ್ರಕಾಶ್‌ ಶೆಟ್ಟಿ

Team Udayavani, Jun 8, 2024, 12:05 AM IST

ಅದೃಷ್ಟದ ಜತೆಗೆ ಪ್ರಯತ್ನದ ಬಲವಿದ್ದಾಗ ಯಶಸ್ಸು: ಎಂಆರ್‌ಜಿ ಪ್ರಕಾಶ್‌ ಶೆಟ್ಟಿ

ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ಸಜ್ಜಾದ ಎರಡು ದಿನಗಳ ಆಳ್ವಾಸ್‌ ಪ್ರಗತಿ-ಬೃಹತ್‌ ಉದ್ಯೋಗ ಮೇಳವನ್ನು ಶುಕ್ರವಾರ ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಉದ್ಘಾಟಿಸಿದರು.

ಸಾಂಸ್ಕೃತಿಕ, ಕ್ರೀಡೆ, ಶೆ„ಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ ರುವ ಮೂಡುಬಿದಿರೆಯ ಆಳ್ವಾಸ್‌ ಸಂಸ್ಥೆ ಹಲವು ವರ್ಷಗಳಿಂದ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋ ಗದ ಸದಾವಕಾಶವನ್ನು ಕಲ್ಪಿಸುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯೆಯೊಂದಿಗೆ ಸಾಮಾನ್ಯ ಜ್ಞಾನವೂ ಬೇಕು.ಯೋಜನೆ, ಆಡಳಿತ, ವ್ಯವಹಾರದ ಕೌಶಲ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಾವುದೇ ಸವಾಲನ್ನು ಸುಲಭವಾಗಿ ಎದುರಿಸಬಹುದು ಎಂದು ಅವರು ಹೇಳಿದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಇದು ಸಂಪೂರ್ಣವಾಗಿ ಉಚಿತವಾಗಿ ನಡೆಯುವ ಬೃಹತ್‌ ಉದ್ಯೋಗ ಮೇಳ. ಈ ಬಾರಿಯೂ ದೇಶ ವಿದೇಶಗಳಿಂದ 254 ಪ್ರತಿಷ್ಠಿತ ಸಂಸ್ಥೆಗಳು ನೇಮಕಾತಿಯನ್ನು ನಡೆಸಲು ಬಂದಿರುವುದು ಸಂತಸದ ವಿಷಯ ಎಂದು ಹೇಳಿದರು.

ಕರಾವಳಿಗೆ ಬರಲಿ ಇನ್ನಷ್ಟು ಐಟಿ ಕಂಪೆನಿಗಳು
ಅಧ್ಯಕ್ಷತೆ ವಹಿಸಿದ್ದ ಶಾಸಕ ಉಮಾನಾಥ ಕೋಟ್ಯಾನ್‌, ಆಳ್ವಾಸ್‌ ಪ್ರಗತಿ ಎನ್ನುವ ಬೃಹತ್‌ ಉದ್ಯೋಗ ಮೇಳ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ವನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದೆ. ಶೈಕ್ಷಣಿಕವಾಗಿ ಮುಂದಿರುವ ಕರಾವಳಿ ಭಾಗದಲ್ಲಿ ಉದ್ಯೋಗ ಆಸಕ್ತರು ಬಹಳಷ್ಟು ಜನರಿದ್ದಾರೆ. ಆದ್ದರಿಂದ, ಮುಂದಿನ ದಿನಗಳಲ್ಲಿ ಇನ್ನಷ್ಟು ಐಟಿ ಕಂಪೆನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗಲಿ ಎಂದರು.

ಪ್ರಗತಿ ವಿಶೇಷತೆ‌
ನೋಂದಣಿ, ವಿದ್ಯಾರ್ಹತೆಗೆ ತಕ್ಕಂತೆ ಕಲರ್‌ ಕೋಡ್‌ ವಿತರಣೆ, ಕಲರ್‌ ಕೋಡ್‌ಗೆ ಸಮವಾಗಿರುವ ವಿವಿಧ ಉದ್ಯೋಗಗಳ ಸಂದರ್ಶನ ಮೊದಲಾದ ವಿಷಯಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಲ್ಲ ವಿಭಾಗಗಳ ಉದ್ಯೋಗಗಳ ಪೂರ್ಣ ಮಾಹಿತಿಗಳಿರುವ ಕೈಪಿಡಿಯನ್ನು ಅಭ್ಯರ್ಥಿಗಳಿಗೆ ಆರಂಭದಲ್ಲೇ ನೀಡಲಾಯಿತು.

ಉದ್ಯೋಗ ಮಾಹಿತಿ ಕೇಂದ್ರ/ತರಬೇತಿ
ಉದ್ಯೋಗ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡಲು ಉದ್ಯೋಗ ಮಾಹಿತಿ ಕೇಂದ್ರ ಹಾಗೂ ತರಬೇತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಮ್ಮಾನ
ಕರಾವಳಿಯಲ್ಲಿ ಐಟಿ ಕಂಪೆನಿಗಳನ್ನು ಸ್ಥಾಪಿಸಿರುವ 6 ಪ್ರಮುಖ ಕಂಪೆನಿಗಳ ಮುಖ್ಯಸ್ಥರನ್ನು ಸಮ್ಮಾನಿಸಲಾಯಿತು. ಗ್ಲೋಟಚ್‌ ಟೆಕ್ನಾಲಜಿಯ ಅಧ್ಯಕ್ಷೆ ವಿದ್ಯಾ ರವಿಚಂದ್ರನ್‌, ನೀವಿಯಸ್‌ ಸೊಲ್ಯೂಷನ್ಸ್‌ನ ಗೋಕುಲ್‌ ನಾಯಕ್‌, ಮಂಗಳೂರಿನ ಟಿಐಇಯ ಸಂಸ್ಥಾಪಕ, 99 ಗೇಮ್ಸ್‌ ಮತ್ತು ರೋಬೋಸಾಫ್ಟ್‌ನ ಅಧ್ಯಕ್ಷ ರೋಹಿತ್‌ ಭಟ್‌, ಇಜಿ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ನ ಸಿಇಒ ಮತ್ತು ನಿರ್ದೇಶಕ ಆನಂದ ಫೆನಾಂìಡಿಸ್‌ , ಜುಗೋ ಸ್ಟುಡಿಯೊಸ್‌ ಪ್ರೈವೇಟ್‌ ಲಿಮಿಟೆಡ್‌ನ‌ ಡೆಲಿವರಿ ವಿಭಾಗದ ಉಪಾಧ್ಯಕ್ಷ ಅಭಿಜಿತ್‌ ಶೆಟ್ಟಿ, ಮಂಗಳೂರಿನ ಬಿಪಿಎಂ ಆಪರೇಶನ್ಸ್‌ ಇನೊಧೀಸಿಸ್‌ನ ಮುಖ್ಯಸ್ಥ ಲಲಿತ್‌ ರೈ ಇವರನ್ನು ಸಮ್ಮಾನಿಸಲಾಯಿತು.

ಉದ್ಯಮಿ ಶ್ರೀಪತಿ ಭಟ್‌, ಟ್ರಸ್ಟಿ ವಿವೇಕ್‌ ಆಳ್ವ ಉಪಸ್ಥಿತರಿದ್ದರು.ಆಳ್ವಾಸ್‌ ಪ.ಪೂ.ಕಾಲೇಜಿನ ಕಲಾ ವಿಭಾಗದ ಡೀನ್‌ ವೇಣುಗೋಪಾಲ್‌ ಶೆಟ್ಟಿ ನಿರೂಪಿಸಿದರು.

ಮೊದಲ ದಿನದ ವಿವರ
-ಆಗಮಿಸಿದ ಕಂಪೆನಿಗಳು: 258
-ಆನ್‌ಲೈನ್‌ ನೋಂದಣಿ ಮಾಡಿಸಿದ ಉದ್ಯೋಗಾಕಾಂಕ್ಷಿಗಳು: 17,325
– ಸ್ಥಳದಲ್ಲೇ ನೋಂದಣಿ ಮಾಡಿಸಿದವರು: 1,573
– ಮೊದಲ ದಿನ ಆಗಮಿಸಿದ ಉದ್ಯೋಗಾಕಾಂಕ್ಷಿಗಳು: 13,238
-ಮೊದಲ ದಿನ ಆವಶ್ಯಕತೆ ಉಳ್ಳವರಿಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಉಚಿತ ವಸತಿ ವ್ಯವಸ್ಥೆ ಮಾಡಲಾಗಿತ್ತು.

“ಉತ್ತಮ ವ್ಯವಸ್ಥೆ. ಕಲರ್‌ ಕೋಡಿಂಗ್‌ ಮತ್ತು ಇತರ ವ್ಯವಸ್ಥೆಗಳು ನಮಗೆ ಸಹಕಾರಿ. ಕಂಪ್ಯೂಟರ್‌ ಸೈನ್‌ಗೆ ಸಂಬಂಧಿಸಿದ ಕಂಪೆನಿಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ಒಳ್ಳೆಯದಿತ್ತು.
-ಯೋಗೀಶ್‌, ಸುಳ್ಯ
(ಕಂಪ್ಯೂಟರ್‌ ಸೈನ್ಸ್‌ ಡಿಪ್ಲೊಮಾ)

“ಆನ್‌ಥೆಂ ಬಯೋ ಸೈನ್ಸ್‌, ಆ್ಯಪ್ಸ್‌ ಆ್ಯಂಡ್‌ ಡಿವೈಸಸ್‌ ಮೊದಲಾದ ಉತ್ತಮ ಕಂಪೆನಿಗಳು ಬಂದಿವೆ, ಶನಿವಾರ ಮತ್ತೆ ಇನ್ನಷ್ಟು ಕಂಪೆನಿಗಳನ್ನು ಕಾಣಬೇಕಾಗಿದೆ. ವ್ಯವಸ್ಥೆ ಉತ್ತಮ.
-ಸೌಮ್ಯಾ ಮಂಗಳೂರು
(ಎಂಎಸ್‌ಸಿ ಇನ್‌ ಕೆಮಿಸ್ಟ್ರಿ)

ಟಾಪ್ ನ್ಯೂಸ್

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

Mangaluru: ರಿಕ್ಷಾ ತೊಳೆಯುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ತಂತಿ… ಇಬ್ಬರು ಮೃತ್ಯು

Mangaluru: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂತ ಅಂತ್ಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.