ಫೋನ್‌ ಮಾಡುವೆ ಎಂದಿದ್ದ  ಅಕ್ಕ  ಸಿಕ್ಕಿದ್ದು ಶವವಾಗಿ


Team Udayavani, Aug 20, 2018, 9:54 AM IST

sulya.png

ಸುಳ್ಯ: ನಾವು ಅವಳಿಗಳು. ಗುರುವಾರ ಬೆಳಗ್ಗೆ ಅಕ್ಕ ಮೋನಿಶಾ ಫೋನ್‌ ಮಾಡಿ ಯೋಗಕ್ಷೇಮ ವಿಚಾರಿಸಿದ್ದಳು. ನಾನು ಮನೆ ಮಂದಿಯ ಬಗ್ಗೆ ಕೇಳಿದ್ದೆ. ಮಳೆ ಅವಾಂತರದ ಬಗ್ಗೆ ಆಕೆ ಹೇಳಿರಲಿಲ್ಲ. ನಾನೇ ಎಚ್ಚರದಿಂದಿರಿ ಅಂದಿದ್ದೆ. “ಆಯ್ತು, ಮೊಬೈಲ್‌ನಲ್ಲಿ ಚಾರ್ಜ್‌ ಇಲ್ಲ, ಆಮೇಲೆ ಕರೆ ಮಾಡುತ್ತೇನೆ’ ಎಂದವಳು ಕಾಣಲು ಸಿಕ್ಕಿದ್ದು ಶವವಾಗಿ…

ಕಣ್ಣೀರಿಡುತ್ತಲೇ 23 ವರ್ಷ ವಯಸ್ಸಿನ ಮೋಹಿತ್‌ ದುಃಖ ಬಿಚ್ಚಿಟ್ಟರು. “ಸ್ವಲ್ಪ ಸಮಯದ ಹಿಂದೆ ಮನೆಗೆ ಬಂದಿದ್ದೆ. ಹೀಗೊಂದು ಘಟನೆ ನಡೆಯಬಹುದೆಂಬ ಊಹೆಯೂ ಇರಲಿಲ್ಲ’ ಎನ್ನುತ್ತ ಬಿಕ್ಕಳಿಸಿದರು. ಈಗ ಬಂದೆರಗಿದ ದುರ್ಘ‌ಟನೆಯಿಂದ ಆತ ಮನೆ ಮಂದಿಯನ್ನೆಲ್ಲ ಕಳೆದುಕೊಂಡು ಏಕಾಕಿಯಾಗಿದ್ದಾನೆ.

ಘಟನೆ ತಿಳಿದು ಸುಳ್ಯಕ್ಕೆ ಬಂದಿರುವ ಮೋಹಿತ್‌ ಚಿಕ್ಕಪ್ಪನ ರೂಮಿನಲ್ಲಿ ಇದ್ದಾರೆ. ಮನೆ ಕಡೆಗೆ ಹೋಗಲು ಸಾಧ್ಯವೇ ಇಲ್ಲ. ಸಂಬಂಧಿಕರು, ಸ್ನೇಹಿತರು ಜತೆಗಿದ್ದು ಧೈರ್ಯ ತುಂಬುತ್ತಿದ್ದಾರೆ. ತಂದೆ ಬಸಪ್ಪ ಮತ್ತು ಅಕ್ಕ ಮೋನಿಶಾ ಶವ ದೊರೆತಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸುಳ್ಯದ ಕೇರ್ಪಳ ಶ್ಮಶಾನದಲ್ಲಿ ರವಿವಾರ ಸಂಜೆ ಅಂತ್ಯಕ್ರಿಯೆ ನಡೆಯಿತು. 

ಉದ್ಯೋಗದ ಕಾರಣ ಪಾರು
ಸೆಲ್ಕೊ ಸೋಲಾರ್‌ ಕಂಪೆನಿಯ ತಿಪಟೂರು ಶಾಖೆಯಲ್ಲಿ ಉದ್ಯೋಗಿಯಾಗಿರುವ ಮೋಹಿತ್‌ ಘಟನೆಯ ದಿನ ಮನೆಯಿಂದ ದೂರ ಇದ್ದ ಕಾರಣ ಬಚಾವಾಗಿದ್ದರು. ತಾಯಿ ಗೌರಮ್ಮ ಮತ್ತು ವಿದ್ಯಾಭ್ಯಾಸಕ್ಕಾಗಿ ಈ ಮನೆಯಲ್ಲಿದ್ದ ಸೋದರ ಮಾವನ ಮಗಳು ಮಂಜುಳಾ ಕಣ್ಮರೆ ಆಗಿದ್ದು, ಇನ್ನೂ ಪತ್ತೆಯಾಗಿಲ್ಲ.

ಶಾಲೆಗೆ ಅನುಕೂಲ ಎಂದು..
ಕಣ್ಮರೆಯಾಗಿರುವ ಮಂಜುಳಾ, ಬಸಪ್ಪ ಅವರ ಪತ್ನಿ ಗೌರಮ್ಮ ಅವರ ಸೋದರನ ಮಗಳು. ಮದೆ ಗ್ರಾಮದ ಬೆಟ್ಟತ್ತೂರು ನಿವಾಸಿ. ಈ ಶೈಕ್ಷಣಿಕ ಸಾಲಿನಿಂದ ಮಾವನ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. 9ನೇ ತರಗತಿ ತನಕ ಊರಿನಲ್ಲಿ ವಿದ್ಯಾಭ್ಯಾಸ ಮಾಡಿ, 3 ತಿಂಗಳ ಹಿಂದೆ ಜೋಡುಪಾಲದ ಮದೆನಾಡು ಪ್ರೌಢಶಾಲೆ ಸೇರಿದ್ದಳು. ಊರಿನಲ್ಲಿ ಬಸ್‌, ರಸ್ತೆ ಸಮಸ್ಯೆಯಿತ್ತು. ಮದೆನಾಡು ಶಾಲೆ ರಸ್ತೆ ಬದಿಯೇ ಇರುವ ಕಾರಣ ಅನುಕೂಲ ಎಂದು ಪೋಷಕರು ಇಲ್ಲಿ ಸೇರಿಸಿದ್ದರು. ಈಕೆಯೂ ಕಣ್ಮರೆ ಆಗಿದ್ದು, ರವಿವಾರದ ತನಕವೂ ಸುಳಿವು ಪತ್ತೆಯಾಗಿಲ್ಲ. ಈಕೆಗೆ ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ ಇದ್ದಾರೆ.

ಉದ್ಯೋಗದ ನಿರೀಕ್ಷೆಯಲ್ಲಿದ್ದರು
ಮೃತ ಮೋನಿಶಾ (23) ಮಡಿಕೇರಿ ಎಫ್‌ಎಂಸಿ ಕಾಲೇಜಿನಿಂದ ಪದವಿ ಪಡೆದು, ಮೈಸೂರಿನಲ್ಲಿ ಎಂಸಿಎ ಕಲಿತಿದ್ದರು. ಬೆಂಗಳೂರಿನಲ್ಲಿ ಉದ್ಯೋಗ ತರಬೇತಿ ಪಡೆದು ಸ್ವಲ್ಪ ಸಮಯದ ಹಿಂದೆ ಮನೆಗೆ ಮರಳಿದ್ದರು. ಆದರೆ ವಿಧಿ ಅವರ ಉದ್ಯೋಗದ ಕನಸನ್ನು ಕಮರಿಸಿದೆ. ಶನಿವಾರ ಮನೆಯಿಂದ ತುಸುದೂರ, ತೋಡಿನಲ್ಲಿಆಕೆಯ ಶವ ಪತ್ತೆಯಾಗಿತ್ತು.

ಅವಳಿ ಮಕ್ಕಳು
ಬಸಪ್ಪ ಸುಳ್ಯದ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್‌ ನೌಕರ. ಅವರ ಪತ್ನಿ ಗೌರಮ್ಮ ಆಶಾ ಕಾರ್ಯಕರ್ತೆ. ಮೋನಿಶಾ, ಮೋಹಿತ್‌ ಅವಳಿ ಮಕ್ಕಳು. ಶೀಟು ಹಾಸಿದ ಮನೆ, ಸ್ವಲ್ಪ ಕೃಷಿ ಭೂಮಿ ಇದ್ದ ಕುಟುಂಬ ಇದು. ಈಗ ಉಳಿದಿರುವುದು  ಮೋಹಿತ್‌ ಮಾತ್ರ.

* ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.