Sullia ಅಪಹರಿಸುತ್ತಿದ್ದಾರೆ; ರಕ್ಷಿಸಿ ಎಂದು ಕರೆ: ನಾಕಾ ಬಂದಿ ಹಾಕಿ ಮರಳಿದ ಪೊಲೀಸರು!
Team Udayavani, Aug 19, 2024, 12:28 AM IST
ಸುಳ್ಯ: ಪುತ್ತೂರು ಸಮೀಪದ ಕಬಕದಿಂದ ಕಾರಿನಲ್ಲಿ ನನ್ನನ್ನು ಅಪಹರಣ ಮಾಡಿದ್ದು, ರಕ್ಷಣೆ ಮಾಡಿ ಎಂದು ಶನಿವಾರ ತಡ ರಾತ್ರಿ 112ಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿದ ಹಿನ್ನೆಲೆಯಲ್ಲಿ ಜಾಲ್ಸೂರು ಹಾಗೂ ಸುಳ್ಯದಲ್ಲಿ ಸುಳ್ಯ ಪೊಲೀಸರು ನಾಕಾ ಬಂದಿ ಹಾಕಿ ಕಾದು ಅಂತಹ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಮರಳಿದ್ದಾರೆ.
ಕರೆ ಬಂದ ತತ್ಕ್ಷಣ 112 ನಿರ್ವಹಣೆ ಕೇಂದ್ರದಿಂದ ಪುತ್ತೂರು ನಗರ ಟೌನ್ ಪೊಲೀಸ್ ಠಾಣೆಗೆ ತಿಳಿಸಿದ್ದು, ಅವರು ಕೂಡಲೇ ವಯರ್ಲೆ ಮೂಲಕ ಸುಳ್ಯ ಹಾಗೂ ಇತರ ಠಾಣೆಗಳಿಗೆ ಮಾಹಿತಿ ರವಾನಿಸಿದರು. ಸುಳ್ಯ ಪೊಲೀಸರು ಸುಳ್ಯ ಹಾಗೂ ಜಾಲ್ಸೂರು ಬಳಿ ನಾಕಾ ಬಂದಿ ಹಾಕಿ ಬಹಳ ಸಮಯ ಕಾದು ಕುಳಿತರು. ಯಾವುದೇ ಶಂಕಿತ ವಾಹನ ಬಾರದಿದ್ದಾಗ ಪೊಲೀಸರು ಮರಳಿದ್ದಾರೆ; ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.