ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಸುಳ್ಯ: ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ

Team Udayavani, May 27, 2022, 12:14 AM IST

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಸುಳ್ಯ : ಸುಳ್ಯದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಮೀನುಗಾರಿಕೆ ಸಚಿವ ಎಸ್‌. ಅಂಗಾರ, ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಕುಮಾರ್‌ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಡೆಸಿದರು.

ನಗರ ಪಂಚಾಯತ್‌ ಸದಸ್ಯ ವೆಂಕಪ್ಪ ಗೌಡ ಮಾತನಾಡಿ, ಶಾಂತಿನಗರದಲ್ಲಿ ನಡೆಯುತ್ತಿರುವ ಕ್ರೀಡಾಂಗಣ ಕಾಮಗಾರಿ ಕೆಲಸದಲ್ಲಿ ತಂದು ಹಾಕಿರುವ ಮಣ್ಣು ಬಿರುಕು ಬಿಟ್ಟಿದ್ದು, ಕುಸಿದು ಕೆಳ ಭಾಗದ ಮನೆಯವರಿಗೆ ಅಪಾಯ ಸಂಭವಿಸುವ ಭೀತಿಯಿಂದ ಸ್ಥಳೀಯರು ಆತಂಕದಲ್ಲಿದ್ದಾರೆ ಎಂದರು.

ಉತ್ತರಿಸಿ ಜಿಲ್ಲಾಧಿಕಾರಿಗಳು, ಈ ಬಗ್ಗೆ ಸ್ಥಳೀಯರು ನೀಡಿದ ಮನವಿಯಂತೆ ಮೊನ್ನೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ನೀರು ಹರಿದು ಹೋಗಲು ವ್ಯವಸ್ಥೆ ಮಾಡಿ, ಬಿರುಕು ಸರಿ ಪಡಿಸುವಂತೆ ಹೇಳಿದರು.

ಮ್ಯಾನ್‌ಹೋಲ್‌ ಅವ್ಯವಸ್ಥೆ
ಹೆದ್ದಾರಿಯ ಮ್ಯಾನ್‌ಹೋಲ್‌ ಬಗ್ಗೆ ದೂರು ವ್ಯಕ್ತವಾಯಿತು. ಉತ್ತರಿಸಿದ ಡಿಸಿ, ಹೆದ್ದಾರಿಯ ಮ್ಯಾನ್‌ಹೋಲ್‌ ಹೆಚ್ಚಿನ ಕಡೆ ನಿರ್ದಿಷ್ಟವಾಗಿ ಸರಿಯಾಗಿಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಈ ಭಾಗದಲ್ಲಿ ಹೆಚ್ಚಿನ ಮಳೆಯೂ ಕಾರಣವಾಗಿರಬಹುದು. ಇದಕ್ಕೆ ಸೂಕ್ತ ರೀತಿಯಲ್ಲಿ ತಂತ್ರಜ್ಞಾನ ಬಳಸಿ ಸಮಸ್ಯೆ ಆಗದಂತೆ ಕಾಮಗಾರಿ ನಿರ್ವಹಿಸಲು ಅರ್ಬನ್‌ ವಾಟರ್‌ ಸಪ್ಲೆ„ ಅವರಿಗೆ ಸೂಚಿಸಲಾಗಿದೆ ಎಂದರು.

110 ಕೆವಿ ವಿದ್ಯುತ್‌ ಸ್ಟೇಶನ್‌ಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಸಭೆ ನಡೆಸಲಾಗಿದೆ. ಅರಣ್ಯ ಇಲಾಖೆಗೆ ಜಾಗ ಸೂಚಿಸಲಾಗಿದೆ. ಗೇರು ನಿಗಮಕ್ಕೆ ಕೆಪಿಟಿಸಿಎಲ್‌ನಿಂದ ಪರಿಹಾರ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಮುಂದಿನ ಹಂತದ ಅನುಮತಿ ಸಿಕ್ಕದ ಕೂಡಲೇ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮಿಲಿಟರಿ ಗ್ರೌಂಡ್‌: ವಾರದಲ್ಲಿ ವರದಿ
ಜಯನಗರ ಮಿಲಿಟರಿ ಗ್ರೌಂಡ್‌ ವಿಚಾರದ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಅಲ್ಲಿನ ಜಾಗ ಮಿಲಿಟರಿಯದ್ದು ಎಂಬುದಕ್ಕೆ ದಾಖಲೆ ಇಲ್ಲದಿರುವುದರಿಂದ ವಿಶೇಷ ಪ್ರಕರಣದಡಿ ಅಲ್ಲಿನ ನಿವಾಸಿಗಳಿಗೆ ಮಂಜೂರಾತಿ ನೀಡಲು ಸರಕಾರದ ಕ್ಯಾಬಿನೆಟ್‌ನಲ್ಲಿ ಮಂಜೂರಾತಿ ನೀಡಲು ಸಚಿವರ ಮುಖಾಂತರ ಈ ವಾರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪಾರ್ಕಿಂಗ್‌ : ಕಟ್ಟಡ ಮಾಲಕರೇ ಹೊಣೆ
ಸುಳ್ಯದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಸರಿಯಾಗಿಲ್ಲ ಎಂಬ ದೂರು ವ್ಯಕ್ತವಾಗಿ, ಬೈಪಾಸ್‌ ರಸ್ತೆ ನಿರ್ಮಿಸುವಂತೆ ಸಲಹೆ ಕೇಳಿಬಂತು. ಕೆಲವೆಡೆ ಬೈಪಾಸ್‌ ನಿರ್ಮಿಸದೆಯೇ ಪಾರ್ಕಿಂಗ್‌ ಸಮಸ್ಯೆ ಸರಿಪಡಿಸಲಾಗಿದೆ. ಆದಷ್ಟು ಮಳಿಗೆ, ಕಟ್ಟಡದವರು ತಮ್ಮ ಸಮುಚ್ಚಯದಲ್ಲೇ ಪಾರ್ಕಿಂಗ್‌ಗೆ ಸ್ಥಳ ಕಲ್ಪಿಸಬೇಕು ಎಂದು ಡಿಸಿ ಸಲಹೆ ನೀಡಿದರು.

ಅಡಿಕೆ ಕೊಳೆರೋಗಕ್ಕೆ ಸೂಕ್ತ ಪರಿಹಾರ ನೀಡುವಂತೆ, ಅರಣ್ಯ ಸಮಸ್ಯೆ ಪರಿಹರಿಸುವಂತೆ, ಪೇರಡ್ಕದಲ್ಲಿ ಅಪಘಾತ ವಲಯದಲ್ಲಿ ಚರಂಡಿ ದುರಸ್ತಿ ಪಡಿಸುವಂತೆ, ಮಂಡೆಕೋಲು ಗ್ರಾಮದ 62 ಎಕ್ರೆ ಕಂದಾಯ ಇಲಾಖೆಗೆ ವಹಿಸುವಂತೆ, ಮರ್ಕಂಜ ಕಲ್ಲಿನ ಕೋರೆಗೆ ತಡೆ ನೀಡಿ ಹಾನಿ ತಪ್ಪಿಸುವಂತೆ ಸೇರಿದಂತೆ ವಿವಿಧ ಸಮಸ್ಯೆ, ವಿಚಾರಗಳ ಬಗ್ಗೆ ಸಾರ್ವಜನಿಕರು ಸಚಿವರು, ಜಿಲ್ಲಾಧಿಕಾರಿಗಳ ಗಮನ ಸೆಳೆದರು.

ನ.ಪಂ. ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ, ತಹಶೀಲ್ದಾರ್‌ ಅನಿತಾಲಕ್ಷ್ಮೀ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬಂದಿ, ಸಾರ್ವಜನಿಕರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.