Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ
Team Udayavani, Oct 14, 2024, 12:16 PM IST
ಸುರತ್ಕಲ್: ಕುಳಾಯಿ ಧಕ್ಕೆ ಕಾಮಗಾರಿಯಲ್ಲಿ ಮೀನುಗಾರಿಕೆಗೆ ಯಾವುದೇ ಪ್ರಯೋಜನವಿಲ್ಲದಂತಾಗಿದ್ದು ಸರಕಾರ ಸ್ಥಳೀಯ ನಾಡ ದೋಣಿ ಮೀನುಗಾರರ ಅಹವಾಲಿಗೆ ಸ್ಪಂದಿಸದೆ ಮತ್ತೆ ಕಾಮಗಾರಿಯನ್ನು ಆರಂಭಿಸಿದೆ.
ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಚುನಾವಣೆಗಳನ್ನು ನಿರಂತರವಾಗಿ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳಿಗೆ ಬಹಿಷ್ಕಾರ ಹಾಕಲಿದ್ದೇವೆ ಎಂದು ಗಂಭೀರ ಎಚ್ಚರಿಕೆಯನ್ನು ಮೀನುಗಾರರ ಸಂಘಟನೆಗಳು ನೀಡಿವೆ.
ಕುಳಾಯಿ ಇದಕ್ಕೆ ಮುಂಭಾಗ ಸೋಮವಾರ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದ ಕರಾವಳಿ ಸಾಂಪ್ರದಾಯಿಕ ನಾಡ ದೋಣಿ ಹಾಗೂ ಕರಾವಳಿ ಮೂಲ ನಾಡದೋಣಿ ಮೀನುಗಾರಿಕಾ ಸಂಘಟನೆಗಳು ಈ ಎಚ್ಚರಿಕೆಯನ್ನು ನೀಡಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಭಯವೇ ಇಲ್ಲವೆಂಬಂತೆ ಅವರ ಮಾತಿಗೂ ನಿರ್ಲಕ್ಷ ವಹಿಸಿದ್ದಾರೆ.
ಕಾಮಗಾರಿ ಸ್ಥಗಿತಕ್ಕೆ ರಾಜ್ಯದ ಸಚಿವ ಮಂಕಾಳ್ ವೈದ್ಯ ಆದೇಶ ನೀಡಿದ್ದರು. ದಕ್ಕೆಯ ಕಾಮಗಾರಿಯನ್ನು ಮಂಗಳೂರು ಬಂದರು ಪ್ರಾಧಿಕಾರ ನಡೆಸುತ್ತಿದೆ. ಜನಪ್ರತಿನಿಧಿಗಳು ನಾಡ ದೋಣಿ ಮೀನುಗಾರಿಕೆಗೆ ಸೂಕ್ತವಾದ ಬಂದರು ನಿರ್ಮಾಣ ಮಾಡುವವರೆಗೆ ನಮ್ಮ ಬೇಡಿಕೆಯನ್ನು ಈಡೇರಿಸುವವರೆಗೆ ಮಂಗಳವಾರದಿಂದ ಪ್ರತಿಭಟನೆಯನ್ನು ನಿರಂತರವಾಗಿ ನಡೆಸಲಿದ್ದೇವೆ ಕಾಮಗಾರಿ ನಡೆಸಲು ಬಿಡುವುದಿಲ್ಲ. ಜನಪ್ರತಿನಿಧಿಗಳು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿ ಬೇಡಿಕೆ ಈಡೇರಿಸುವವರೆಗೆ ಚುನಾವಣಾ ಬಹಿಷ್ಕಾರ ಮಾಡಿದ್ದೇವೆ ಎಂದು ಮುಖಂಡರು ಎಚ್ಚರಿಕೆಯನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ
Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!
Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!
Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ
Bellary; ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.