ವಾಸ್ತವ್ಯ ಮನೆಗಳಿಗೆ ದುಪ್ಪಟ್ಟು ತೆರಿಗೆ: ಆಕ್ಷೇಪ 


Team Udayavani, Nov 29, 2017, 3:13 PM IST

29-Nov-11.jpg

ವಿಟ್ಲ: ಪ.ಪಂ. ವ್ಯಾಪ್ತಿಯಲ್ಲಿ ವಾಸ್ತವ್ಯ ಮನೆಗಳಿಗೆ ವಾಣಿಜ್ಯ ತೆರಿಗೆಗಿಂತ ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತಿದೆ. ಇದನ್ನು ಮರುಪರಿಶೀಲಿಸಬೇಕೆಂದು ವಿಪಕ್ಷ ನಾಯಕ ಅಶೋಕ್‌ ಕುಮಾರ್‌ ಶೆಟ್ಟಿ ಆಗ್ರಹಿಸಿದರು. ಆಗ ಕಂದಾಯ ನಿರೀಕ್ಷಕ ಪಕೀರ ಮೂಲ್ಯ ಸ್ಪಷ್ಟನೆ ನೀಡಿ ಈ ಮೊದಲೇ ನಿಗದಿಯಾದಂತೆ ತೆರಿಗೆ ಹಾಕಲಾಗಿದೆ. ಮೂರು ವರ್ಷಕ್ಕೊಮ್ಮೆ ಪರಿಷ್ಕರಣೆಯಾಗಲಿದ್ದು, ಬರುವ ವರ್ಷ ಪರಿಷ್ಕರಣೆ ನಡೆಯಬೇಕು ಎಂದರು. ಆಗ ಅಶೋಕ್‌ ಕುಮಾರ್‌ ಶೆಟ್ಟಿ ಅವರು ಮರು ಉತ್ತರಿಸಿ, ಅದಕ್ಕಾಗಿ ಮುಂದಿನ ವರ್ಷದ ತನಕ ಜನರಿಗೆ ತೊಂದರೆ ನೀಡಬಾರದು, ಕೂಡಲೇ ಪಟ್ಟಿ ಸಿದ್ಧಪಡಿಸಿ ಕಳುಹಿಸಬೇಕು ಎಂದು ತಿಳಿಸಿದರು.ಮಂಗಳವಾರ ವಿಟ್ಲ ಪ.ಪಂ. ಅಧ್ಯಕ್ಷ ಅರುಣ್‌ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.

ಪ.ಜಾ. ಅಥವಾ ಸಾಮಾನ್ಯ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಿ ಪ.ಪಂ. ಉಪಾಧ್ಯಕ್ಷರ ಆಯ್ಕೆ ನಡೆಸುವಂತೆ ಜಿಲ್ಲಾಧಿಕಾರಿಯವರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಪೂರಕ ಸ್ಪಂದನೆ ಸಿಕ್ಕಿಲ್ಲ ಎಂದು ಅಧ್ಯಕ್ಷರು ಉತ್ತರಿಸಿದರು. ಇನ್ನೊಮ್ಮೆ ಸಂಬಂಧಿಸಿದ ಇಲಾಖೆ, ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಬ್ರೋಕರ್‌ಗಳ ಹಾವಳಿ
ಪ.ಪಂ.ನಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚಾಗಿದ್ದು, ಹಿಂಬಾಗಿಲನ್ನು ಮುಚ್ಚಬೇಕೆಂದು ಸದಸ್ಯ ರವಿಪ್ರಕಾಶ್‌ ಹೇಳಿದಾಗ ಹಿಂಬಾಗಿಲನ್ನು ಮುಚ್ಚಬಾರದು, ಬದಲಾಗಿ ಸಿಸಿ ಕೆಮರಾ ಅಳವಡಿಸಿ ಎಂದು ವಿಪಕ್ಷ ನಾಯಕ ಅಶೋಕ್‌ ಕುಮಾರ್‌ ಶೆಟ್ಟಿ ತಿರುಗೇಟು ನೀಡಿದರು. ಈ ಸಂದರ್ಭ ಎರಡೂ ಪಕ್ಷಗಳ ಸದಸ್ಯರ ಮಧ್ಯೆ ಕೆಲ ಹೊತ್ತು ವಾಗ್ವಾದ ನಡೆಯಿತು.

ಸಭೆಯಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಗೆ ಅವರವರ ವಿದ್ಯಾರ್ಹತೆ, ಅನುಭವಕ್ಕೆ ಸರಿಯಾಗಿ ಸಂಬಳ ಹೆಚ್ಚಿಸಬೇಕು. ಆಡಳಿತ ಸಮಿತಿಯ ಗಮನಕ್ಕೆ ಬಾರದೇ, ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳದೇ ಹೆಚ್ಚಿಸುವಂತಿಲ್ಲ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ತೆಂಗಿನ ಮರಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಮಾಲಕರಿಗೆ ನೋಟಿಸ್‌ ನೀಡಬೇಕು. ಬಸ್‌ ನಿಲುಗಡೆ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸಮರ್ಪಕವಾಗಿ ನಿಭಾಯಿಸಬೇಕು, ಹಸಿಕಸ ಮತ್ತು ಒಣ ಕಸ ಪ್ರತ್ಯೇಕಿಸಿ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಸ್ಥಾಯೀ ಸಮಿತಿ ಅಧ್ಯಕ್ಷ ವಿ. ರಾಮದಾಸ ಶೆಣೆ„, ಸದಸ್ಯರಾದ ಲೋಕನಾಥ ಶೆಟ್ಟಿ ಕೊಲ್ಯ, ಉಷಾ ಕೃಷ್ಣಪ್ಪ, ಜಯಂತ, ಸುನೀತಾ ಕೋಟ್ಯಾನ್‌, ಮಂಜುನಾಥ ಕಲ್ಲಕಟ್ಟ, ಕೆ.ಚಂದ್ರಕಾಂತಿ ಶೆಟ್ಟಿ, ದಮಯಂತಿ, ಸಂಧ್ಯಾ ಮೋಹನ್‌ ಎಸ್‌., ಲತಾ ಅಶೋಕ್‌ ಪೂಜಾರಿ, ಗೀತಾ ಪುರಂದರ ಸೇರಾಜೆ, ಅಬ್ದುಲ್‌ ರಹಿಮಾನ್‌ ನೆಲ್ಲಿಗುಡ್ಡೆ, ಅಬ್ಬೋಕರೆ ವಿ., ನಾಮನಿರ್ದೇಶಿತ ಸದಸ್ಯರಾದ ಭವಾನಿ ರೈ ಕೊಲ್ಯ, ವಿ.ಎಚ್‌. ಸಮೀರ್‌ ಪಳಿಕೆ, ಪ್ರಭಾಕರ ಭಟ್‌ ಮಾವೆ, ಮುಖ್ಯಾಧಿಕಾರಿ ಮಾಲಿನಿ, ಕಿರಿಯ ಅಭಿಯಂತರ ಶ್ರೀಧರ ನಾಯ್ಕ ಭಾಗವಹಿಸಿದ್ದರು.

ಉಪಾಧ್ಯಕ್ಷರ ಆಯ್ಕೆಯಾಗಿಲ್ಲ
ಮೆಸ್ಕಾಂ ಜನಸಂಪರ್ಕ ಸಭೆ ಪ.ಪಂ. ಸಭಾಭವನದಲ್ಲಿ ನಡೆದರೂ ಪಟ್ಟಣ ಪಂಚಾಯತ್‌ ಸದಸ್ಯರಿಗೆ ಆಹ್ವಾನ ನೀಡಿಲ್ಲ. ಎರಡು ವರ್ಷವಾಗುತ್ತಾ ಬಂದರೂ ಪ.ಪಂ. ಉಪಾಧ್ಯಕ್ಷರ ಆಯ್ಕೆಯಾಗಿಲ್ಲ ಏಕೆ ಎಂದು ಆಡಳಿತ ಪಕ್ಷದ ಸದಸ್ಯ ಶ್ರೀಕೃಷ್ಣ ಸಭೆಯಲ್ಲಿ ಸ್ಪಷ್ಟನೆ ಕೇಳಿದರು. ಇನ್ನು ಮುಂದಕ್ಕೆ ಅಧ್ಯಕ್ಷರ ಹಾಗೂ ಆಡಳಿತ ಸಮಿತಿ ಸದಸ್ಯರ ಗಮನಕ್ಕೆ ಬಾರದೇ ಯಾವುದೇ ಅನುಮತಿ ನೀಡ ಕೂಡದೆಂದು ನಿರ್ಣಯಿಸಲಾಯಿತು. 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.